ಉತ್ತಮ ದಾಖಲಾತಿಯ ಶಾಲೆಗೆ ಬೇಕಿದೆ ಹೆಚ್ಚುವರಿ ಶಿಕ್ಷಕರು

ಆಲೂರು - ಹರ್ಕೂರು ಹಿರಿಯ ಪ್ರಾಥಮಿಕ ಶಾಲೆ

Team Udayavani, Oct 4, 2021, 6:41 AM IST

ಉತ್ತಮ ದಾಖಲಾತಿಯ ಶಾಲೆಗೆ ಬೇಕಿದೆ ಹೆಚ್ಚುವರಿ ಶಿಕ್ಷಕರು

ಕುಂದಾಪುರ: ಕಳೆದ 2-3 ವರ್ಷಗಳಿಂದ ದಾಖಲಾತಿಯಲ್ಲಿ ಉತ್ತಮ ಪ್ರಗತಿ ಸಾಧಿಸುತ್ತಿರುವ ಆಲೂರು- ಹರ್ಕೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ತಕ್ಕ ಮಟ್ಟಿಗೆ ಬಹುತೇಕ ಎಲ್ಲ ಸೌಕರ್ಯಗಳಿದ್ದು, ಆದರೆ ಮಕ್ಕಳ ಸಂಖ್ಯೆ ಏರುತ್ತಿರುವುದರಿಂದ ಹೆಚ್ಚುವರಿ ಶಿಕ್ಷಕರು ಹಾಗೂ ಪೀಠೊಪಕರಣಗಳ ಬೇಡಿಕೆಯಿದೆ.

ಆಲೂರು- ಹರ್ಕೂರು ಹಿ.ಪ್ರಾ. ಶಾಲೆಯಲ್ಲಿ ಒಟ್ಟು 227 ಮಂದಿ ವಿದ್ಯಾರ್ಥಿಗಳು ಜ್ಞಾನಾರ್ಜನೆ ಮಾಡುತ್ತಿದ್ದಾರೆ. ಕಳೆದ ಶೈಕ್ಷಣಿಕ ಸಾಲಿನಲ್ಲಿ 234 ಮಂದಿ ಮಕ್ಕಳಿದ್ದರು. ಆದರೆ ಇವರಲ್ಲಿ ಈ ಸಾಲಿನಲ್ಲಿ 58 ಮಂದಿ ವಿದ್ಯಾರ್ಥಿಗಳು ಈ ಬಾರಿ 8ನೇ ತರಗತಿಗೆ ತೇರ್ಗಡೆಗೊಂಡಿದ್ದು, ಇನ್ನು 5-6 ಮಂದಿ ಮಕ್ಕಳು ಕೆಲವು ತರಗತಿಗಳಿಂದ ಆಂಗ್ಲ ಮಾಧ್ಯಮಕ್ಕೆ ತೆರಳಿದ್ದಾರೆ.

ಶಿಕ್ಷಕರ ಬೇಡಿಕೆ
2015ರಲ್ಲಿ 130ಕ್ಕೂ ಹೆಚ್ಚು ಮಂದಿ ಮಕ್ಕಳಿದ್ದ ವೇಳೆಯಲ್ಲಿಯೇ ಈ ಶಾಲೆಯಲ್ಲಿ 7 ಮಂದಿ ಶಿಕ್ಷಕರು ಬೋಧಿಸುತ್ತಿದ್ದರು. ಈಗ ಮಕ್ಕಳ ಸಂಖ್ಯೆ 220 ಕ್ಕಿಂತ ಹೆಚ್ಚಾದಾಗಲೂ ಇಷ್ಟೇ ಮಂದಿ ಶಿಕ್ಷಕರಿದ್ದಾರೆ. ಮಕ್ಕಳ ಸಂಖ್ಯೆ ಹೆಚ್ಚಿರುವುದರಿಂದ ಈ ಶಾಲೆಗೆ ಕನಿಷ್ಠ 2-3 ಮಂದಿ ಹೆಚ್ಚುವರಿ ಶಿಕ್ಷಕರ ಅಗತ್ಯವಿದೆ. ಆಟದ ಮೈದಾನ, ಆವರಣ ಗೋಡೆ, ಶೌಚಾಲಯ ಇನ್ನಿತರ ಸಮಸ್ಯೆ ಯನ್ನು ಈಗಾಗಲೇ ದಾನಿಗಳು, ಶಿಕ್ಷಕರು, ಊರವರು, ಎಸ್‌ಡಿಎಂಸಿ, ಹಳೆ ವಿದ್ಯಾರ್ಥಿ ಸಂಘಟನೆಗಳೆಲ್ಲ ಸೇರಿ ಬಗೆಹರಿಸಿದ್ದಾರೆ.

ಪೀಠೊಪಕರಣದ ಅಗತ್ಯ
ಮಕ್ಕಳ ಸಂಖ್ಯೆ ಹೆಚ್ಚಾಗುತ್ತ ಹೋದಂತೆ ಶಾಲೆಯಲ್ಲಿರುವ ಬೆಂಚ್‌, ಡೆಸ್ಕ್ ಸಹಿತ ಇನ್ನಿತರ ಪೀಠೊಪಕರಣಗಳ ಕೊರತೆಯೂ ಎದುರಾಗುತ್ತದೆ. ಇನ್ನೇನು ಪೂರ್ಣ ಪ್ರಮಾಣದಲ್ಲಿ ಈ ಸಾಲಿನ ಶೈಕ್ಷಣಿಕ ಚಟುವಟಿಕೆಗಳು ಆರಂಭ ಆಗುತ್ತಿರುವುದರಿಂದ ಆದಷ್ಟು ಬೇಗ ಇಲ್ಲಿನ ಅಗತ್ಯಗಳನ್ನು ಪೂರೈಸಬೇಕಿದೆ. ಶಿಕ್ಷಣ ಇಲಾಖೆ, ಸಂಬಂಧಪಟ್ಟ ಜನಪ್ರತಿನಿಧಿಗಳು ಈ ಎಲ್ಲ ಬೇಡಿಕೆಯನ್ನು ಈಡೇರಿಸಬೇಕು ಎನ್ನುವ ಬೇಡಿಕೆ ಸಾರ್ವಜನಿಕರದ್ದಾಗಿದೆ.

ಇದನ್ನೂ ಓದಿ:ಉಡುಪಿ ಜಿಲ್ಲೆಯಲ್ಲಿ ಶೇ.80ರಷ್ಟು ಪಡಿತರ ಕಾರ್ಡ್‌ಗಳ ಇ-ಕೆವೈಸಿ ಪೂರ್ಣ

ಉತ್ತಮ ದಾಖಲಾತಿ
ಒಟ್ಟಾರೆ ಮಕ್ಕಳ ಸಂಖ್ಯೆಯಲ್ಲಿ ಕಳೆದ ಸಾಲಿಗಿಂತ ಈ ಸಾಲಿನಲ್ಲಿ 7 ಮಕ್ಕಳ ಸಂಖ್ಯೆ ಕಡಿಮೆಯಿದ್ದರೂ, ಈ ಸಾಲಿನಲ್ಲಿಯೂ ಉತ್ತಮ ದಾಖಲಾತಿಯಾಗಿದೆ. ಒಂದನೇ ತರಗತಿಗೆ 31 ಮಂದಿ ಹಾಗೂ ಆರನೇ ತರಗತಿಗೆ 25 ಸೇರಿ ಒಟ್ಟು ಈ ಬಾರಿ 56 ಮಂದಿ ಹೊಸದಾಗಿ ಈ ಶಾಲೆಗೆ ಸೇರ್ಪಡೆಯಾಗಿದ್ದಾರೆ. 2015 ರಲ್ಲಿ ಈ ಶಾಲೆಯಲ್ಲಿ 137 ಮಂದಿ ಮಕ್ಕಳು ವ್ಯಾಸಂಗ ಮಾಡುತ್ತಿದ್ದರು. ಅಂದರೆ ಕಳೆದ 6 ವರ್ಷಗಳಲ್ಲಿ ಈ ಶಾಲೆಯ ಮಕ್ಕಳ ಸಂಖ್ಯೆ ಸರಿ ಸುಮಾರು 100 ರಷ್ಟು ಹೆಚ್ಚಳವಾಗಿದೆ.

ಶಿಕ್ಷಕರ ಬೇಡಿಕೆ
ಈ ನಮ್ಮ ಆಲೂರು ಶಾಲೆಗೆ ಕಟ್ಟಡ, ಆಟದ ಮೈದಾನ, ಆವರಣ ಗೋಡೆ, ಶೌಚಾಲಯ ಇನ್ನಿತರ ಬೇಡಿಕೆಗಳು ಈಗಾಗಲೇ ತಕ್ಕ ಮಟ್ಟಿಗೆ ಈಡೇರಿದೆ. ಆದರೆ ಮಕ್ಕಳ ಸಂಖ್ಯೆಗೆ ಅನುಗುಣವಾಗಿ ಹೆಚ್ಚುವರಿ ಶಿಕ್ಷಕರ ಬೇಡಿಕೆಯಿದೆ. ಮೂಲಗಳ ಪ್ರಕಾರ ಈ ಶಾಲೆಗೆ 3 ಶಿಕ್ಷಕರ ಮಂಜೂರಾತಿಯಾಗಿದೆ ಎನ್ನುವ ಮಾಹಿತಿಯಿದ್ದು, ಆದರೆ ಅದಿನ್ನು ಅಧಿಕೃತವಾಗಿಲ್ಲ.
– ಶಶಿಧರ್‌ ಶೆಟ್ಟಿ, ಮುಖ್ಯೋಪಾಧ್ಯಾಯರು

– ಪ್ರಶಾಂತ್‌ ಪಾದೆ

ಟಾಪ್ ನ್ಯೂಸ್

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕನ್ನಡಕುದ್ರು: ತೆಂಗಿನ ಮರಗಳಿಗೆ ಕೀಟ ಬಾಧೆ: ಕೃಷಿ ವಿಜ್ಞಾನಿಗಳ ತಂಡ ಭೇಟಿ; ಪರಿಶೀಲನೆ

ಕನ್ನಡಕುದ್ರು: ತೆಂಗಿನ ಮರಗಳಿಗೆ ಕೀಟ ಬಾಧೆ: ಕೃಷಿ ವಿಜ್ಞಾನಿಗಳ ತಂಡ ಭೇಟಿ; ಪರಿಶೀಲನೆ

“ಆಟ’ಕ್ಕೆ ಅಂತಾರಾಷ್ಟ್ರೀಯ ದಿನ ನಿಗದಿಗೆ ಹಕ್ಕೊತ್ತಾಯ

“ಆಟ’ಕ್ಕೆ ಅಂತಾರಾಷ್ಟ್ರೀಯ ದಿನ ನಿಗದಿಗೆ ಹಕ್ಕೊತ್ತಾಯ

Pernankila Temple:  ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Pernankila Temple: ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Vadabandeshwara Temple: ವಡಭಾಂಡೇಶ್ವರ ಬಲರಾಮ ದೇವಸ್ಥಾನ: ವೈಭವದ ಮಹಾ ರಥೋತ್ಸವ ಸಂಪನ್ನ

Vadabandeshwara Temple: ವಡಭಾಂಡೇಶ್ವರ ಬಲರಾಮ ದೇವಸ್ಥಾನ: ವೈಭವದ ಮಹಾ ರಥೋತ್ಸವ ಸಂಪನ್ನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.