ರಾಜಕೀಯ ಲಾಭಕ್ಕಾಗಿ ನೇತಾಜಿ ಹೆಸರು ಬಳಕೆ: ಆಲ್ದಳ್ಳಿ

ಸರಿಯಾದ ವಿಚಾರವನ್ನು ಆಯ್ಕೆ ಮಾಡಿಕೊಳ್ಳುವ ಜವಾಬ್ದಾರಿ ಯುವ ಜನರ ಮೇಲಿದೆ.

Team Udayavani, Jan 24, 2022, 5:29 PM IST

ರಾಜಕೀಯ ಲಾಭಕ್ಕಾಗಿ ನೇತಾಜಿ ಹೆಸರು ಬಳಕೆ: ಆಲ್ದಳ್ಳಿ

ಧಾರವಾಡ: ಇಂದಿನ ರಾಜಕೀಯ ಲಾಭಕ್ಕಾಗಿ ರಾಜಕೀಯ ಪಕ್ಷಗಳು ನೇತಾಜಿ ಹೆಸರನ್ನು ಬಳಸಿಕೊಳ್ಳುತ್ತಿದ್ದು, ಈ ವಾಸ್ತವವನ್ನು ನಾವು ಅರ್ಥ ಮಾಡಿಕೊಳ್ಳಬೇಕಿದೆ ಎಂದು ಎಸ್‌ಯುಸಿಐ-ಕಮ್ಯುನಿಸ್ಟ್‌ ಪಕ್ಷದ ರಾಜ್ಯ ಸೆಕ್ರೆಟರಿಯೇಟ್‌ ಸದಸ್ಯ ರಾಮಾಂಜನಪ್ಪ ಆಲ್ದಳ್ಳಿ ಹೇಳಿದರು.

ನೇತಾಜಿ ಸುಭಾಸ್‌ಚಂದ್ರ ಬೋಸ್‌ ಅವರ 125ನೇ ಜನ್ಮದಿನದ ಅಂಗವಾಗಿ ಆಲ್‌ ಇಂಡಿಯಾ ಡೆಮಾಕ್ರೆಟಿಕ್‌ ಯೂತ್‌ ಆರ್ಗನೈಸೇಷನ್‌ (ಎಐಡಿವೈಒ) ಕರ್ನಾಟಕ ರಾಜ್ಯ ಸಮಿತಿಯಿಂದ ಆನ್‌ ಲೈನ್‌ನಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ನೇತಾಜಿ ಅವರ ಕನಸಾದ ಸಮಾಜವಾದಿ ಭಾರತವನ್ನು ಕಟ್ಟುವ ದಿಕ್ಕಿನಲ್ಲಿ ಇಂದಿನ ಯುವ ಜನರು ಅವರ ಉತ್ತರಾಧಿಕಾರಿಗಳಾಗಿ ಶ್ರಮಿಸಬೇಕಿದೆ. ಸರಿಯಾದ ವಿಚಾರವನ್ನು ಆಯ್ಕೆ ಮಾಡಿಕೊಳ್ಳುವ ಜವಾಬ್ದಾರಿ ಯುವ ಜನರ ಮೇಲಿದೆ. ಗೊಂದಲಗಳಿಗೆ ಬಲಿಯಾಗದೇ ಇತಿಹಾಸವನ್ನು ವೈಜ್ಞಾನಿಕವಾಗಿ, ವಸ್ತುನಿಷ್ಠವಾಗಿ ಅರ್ಥ ಮಾಡಿಕೊಂಡು ಸತ್ಯಕ್ಕೆ ನಿಷ್ಠರಾಗಬೇಕು. ನೇತಾಜಿ ಅವರ ವ್ಯಕ್ತಿತ್ವ, ಆದರ್ಶ, ಹೋರಾಟಗಳನ್ನು ಅಳವಡಿಸಿಕೊಂಡು ಇಂದಿನ ಅನ್ಯಾಯಗಳ ವಿರುದ್ಧ ಸಮರಶೀಲ ಹೋರಾಟವನ್ನು ಕಟ್ಟುವ ಮೂಲಕ ನೇತಾಜಿಯವರ 125ನೇ ಜನ್ಮದಿನವನ್ನು ಅರ್ಥಪೂರ್ಣವಾಗಿ ಆಚರಿಸೋಣ ಎಂದರು.

ಅಧ್ಯಕ್ಷತೆ ವಹಿಸಿದ್ದ ಎಐಡಿವೈಒ ರಾಜ್ಯಾಧ್ಯಕ್ಷ ಶರಣಪ್ಪ ಉದ್ಭಾಳ ಮಾತನಾಡಿ, ನೇತಾಜಿಯವರ ಜೀವನ, ಹೋರಾಟದಿಂದ ಸ್ಫೂರ್ತಿ ಪಡೆದು ನಾವು ಇಂದು ಎದುರಿಸುತ್ತಿರುವ ಹಲವಾರು ಸಮಸ್ಯೆಗಳ ವಿರುದ್ಧ ರಾಜಿರಹಿತವಾಗಿ ಧ್ವನಿಯೆತ್ತಬೇಕು. ಅವಕಾಶವಾದಿತನಕ್ಕೆ ಎಡೆಮಾಡಿ ಕೊಡದೇ ಜಾತಿ, ಧರ್ಮದ ಹೆಸರಿನಲ್ಲಿ ಇಂದು ನಮ್ಮನ್ನು ಒಡೆದಾಳುತ್ತಿರುವ ಆಳ್ವಿಕರ ವಿರುದ್ಧ ಒಗ್ಗಟ್ಟಾಗಿ ಯುವ ಜನ ಸಮಸ್ಯೆಗಳ ವಿರುದ್ಧ ಚಳವಳಿಯನ್ನು ಬಲಪಡಿಸೋಣ, ನೇತಾಜಿಯವರ ವಿಚಾರಗಳನ್ನು ಎಲ್ಲೆಡೆ ಹರಡೋಣ ಎಂದು ಹೇಳಿದರು.

ಎಐಡಿವೈಒ ರಾಜ್ಯ ಕಾರ್ಯದರ್ಶಿ ಸಿದ್ದಲಿಂಗ ಬಾಗೇವಾಡಿ ಮಾತನಾಡಿ, ಎಐಡಿವೈಒ ಹಲವಾರು ವರ್ಷಗಳಿಂದ ನಮ್ಮ ದೇಶದ ಸ್ವಾತಂತ್ರ್ಯ ಸಂಗ್ರಾಮದ ರಾಜಿ ರಹಿತ ಪಂತದ ಮಹಾನ್‌ ಕ್ರಾಂತಿಕಾರಿಗಳ ನೈಜ ಉತ್ತರಾಧಿಕಾರಿಗಳಾಗಿ ಅವರ ದಿನಾಚರಣೆಗಳನ್ನು ಆಚರಿಸುತ್ತ ಅವರ ಹೋರಾಟದ ಬದುಕನ್ನು, ವೈಚಾರಿಕತೆಯನ್ನು ಯುವಜನರಿಗೆ ಪರಿಚಯಿಸುತ್ತ ಬಂದಿದೆ. ಅದರ ಮೂಲಕ ಸ್ಫೂರ್ತಿ ಪಡೆದು ಇಂದಿನ ಅನ್ಯಾಯಗಳ ವಿರುದ್ಧ ಧ್ವನಿ ಎತ್ತೋಣ ಎಂದರು.

ಟಾಪ್ ನ್ಯೂಸ್

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.