ಪಲ್ಲಕಿ ಹೊರುವವರಿಗೆ ಹಿಂದಾದರೇನು, ಮುಂದಾದರೇನು?:ಈಶ್ವರಪ್ಪ ಪ್ರಶ್ನೆ
Team Udayavani, Jan 25, 2022, 1:48 PM IST
ಶಿವಮೊಗ್ಗ : ಪಲ್ಲಕಿ ಹೊರುವವರಿಗೆ ಹಿಂದೆ ಆದರೇನು, ಮುಂದೆ ಆದರೇನು ? ಎಂದು ಜಿಲ್ಲಾ ಉಸ್ತುವಾರಿ ವಿವಾದ ಸಂಬಂಧ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯಿತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಟ್ವೀಟ್ ಮಾಡಿದ್ದಾರೆ.
ಜಿಲ್ಲಾ ಉಸ್ತುವಾರಿ ಸ್ಥಾನದ ಬಗ್ಗೆ ವಿವಾದ ಸೃಷ್ಟಿಯಾಗಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಇದೊಂದು ದುರಂತ. ಈ ಬಗ್ಗೆ ವಿವಾದ ಸೃಷ್ಟಿಯಾಗಲೇ ಬಾರದಿತ್ತು ಎಂದು ಅಭಿಪ್ರಾಯಪಟ್ಟಿದ್ದಾರೆ.
ಆಡಳಿತ ನಡೆಸುವ ಸಚಿವರಿಗೆ ಯಾವ ಜಿಲ್ಲೆ ಆದರೇನು. ಆ ಜಿಲ್ಲೆ ಬೇಕು ಈ ಜಿಲ್ಲೆ ಬೇಡ ಅಂತಾ ಚರ್ಚೆಯಾಕೆ..? ಪಲ್ಲಿಕ್ಕಿ ಹೊರವುವವನಿಗೆ ಎಡ ಆದರೇನು ಬಲ ಆದರೇನು..? ದೇವರ ಕೆಲಸ ಅಂದರೇ ಜನರ ಸೇವೆ ಮಾಡುವುದು ಎಂದು ಅಸಮಾಧಾನಿತರಿಗೆ ಸಚಿವ ಕೆ.ಎಸ್ ಈಶ್ವರಪ್ಪ ಕಿವಿಮಾತು ಹೇಳಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವರ ಬದಲಾವಣೆ ಸಂದರ್ಭದಲ್ಲಿ ಕೆ.ಎಸ್.ಈಶ್ಚರಪ್ಪ ಅವರಿಗೆ ತವರು ಜಿಲ್ಲೆ ಶಿವಮೊಗ್ಗ ಬದಲು ಚಿಕ್ಕಮಗಳೂರು ನೀಡಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ