ಕೆ.ಆರ್‌.ಮಾರುಕಟ್ಟೆ ಕಟ್ಟಡಕ್ಕೆ ಹೊಸ ರೂಪ; ಸ್ಮಾರ್ಟ್‌ಸಿಟಿ ಯೋಜನೆಯಡಿ ಅತ್ಯಾಧುನಿಕ ಸೌಲಭ್ಯ

168 ನಾಲ್ಕುಚಕ್ರದ ವಾಹನ ಮತ್ತು 279 ದ್ವಿಚಕ್ರ ವಾಹನ ಗಳನ್ನು ನಿಲ್ಲಿಸಬಹುದಾಗಿದೆ.

Team Udayavani, Oct 28, 2022, 3:55 PM IST

ಕೆ.ಆರ್‌.ಮಾರುಕಟ್ಟೆ ಕಟ್ಟಡಕ್ಕೆ ಹೊಸ ರೂಪ; ಸ್ಮಾರ್ಟ್‌ಸಿಟಿ ಯೋಜನೆಯಡಿ ಅತ್ಯಾಧುನಿಕ ಸೌಲಭ್ಯ

ಬೆಂಗಳೂರು: ಪಾರಂಪರಿಕ ಮಾರುಕಟ್ಟೆ ಕಟ್ಟಡ ವಾದ ಕೃಷ್ಣರಾಜೇಂದ್ರ ಮಾರುಕಟ್ಟೆಯ ಅಂದ ಹೆಚ್ಚಿಸುವ ಸಲುವಾಗಿ ಕಟ್ಟಡದ ಒಳ ಭಾಗಕ್ಕೆ ಹೊಸ ಸ್ವರೂಪ ನೀಡಲು ಬಿಬಿಎಂಪಿ ಮುಂದಾಗಿದೆ. 1928ರ ಬ್ರಿಟಿಷರ ಕಾಲದಲ್ಲಿ ನಿರ್ಮಿಸಿದ ಪಾರಂಪರಿಕ ಕೆ.ಆರ್‌.ಮಾರುಕಟ್ಟೆ ಕಟ್ಟಡದ ಹೊರವಿನ್ಯಾಸಕ್ಕೆ ಯಾವುದೇ ಧಕ್ಕೆ ಬರದಂತೆ, ಒಳಾಂಗಣಕ್ಕೆ ಸ್ಮಾರ್ಟ್‌ ಸಿಟಿ ಯೋಜನೆಯಡಿ ಆಧುನಿಕ ಸ್ಪರ್ಶ ನೀಡಲಾಗುತ್ತಿದೆ.

ಕೆ.ಆರ್‌.ಮಾರುಕಟ್ಟೆಯ ಒಳ ಪ್ರದೇಶದಲ್ಲಿ ಸುಮಾರು 800 ಮಳಿಗೆಗಳು ಹಾಗೂ ಹೊರಭಾಗದಲ್ಲಿಯೂ ನೂರಾರು ಮಳಿಗೆಗಳಿದ್ದು, ಕಟ್ಟಡದಲ್ಲಿನ ಫ್ಲೋರಿಂಗ್‌ ಹಾನಿಗೊಳಗಾಗಿದೆ. ಇದರಿಂದ ವ್ಯಾಪಾರಸ್ಥರಿಗೆ ಹಾಗೂ ಗ್ರಾಹಕರಿಗೆ ತೊಂದರೆಯಾಗುತ್ತಿದೆ. ಹೀಗಾಗಿ ಮಾರುಕಟ್ಟೆಯ ಒಳಾಂಗಣದ ಫ್ಲೋರಿಂಗ್‌ ಗೆ ಗ್ರ್ಯಾನೈ ಟ್‌ ಹಾಕಲಾಗುತ್ತಿದೆ ಎಂದು ಸ್ಮಾರ್ಟ್‌ಸಿಟಿ ಯೋಜನೆಯ ಅಧಿಕಾರಿ ತಿಳಿಸುತ್ತಾರೆ.

ಮಳೆ ಸುರಿದ ಸಂದರ್ಭದಲ್ಲಿ ಬೇಸ್ಮೆಂಟ್‌ ಜಲಾವೃತವಾಗಿ, ವಾಹನ ನಿಲುಗಡೆಗೆ ಸಮಸ್ಯೆ ಯುಂಟಾಗುತ್ತಿತ್ತು. ಆದ್ದರಿಂದ ಇದೀಗ ಮಳೆ ನೀರನ್ನು ಹೊರ ಹಾಕಲು ನಾಲ್ಕು ಪಂಪ್‌ ಮಾಡುವ ಘಟಕಗಳನ್ನು ಸ್ಥಾಪಿಸಲಾಗಿದೆ. ಹಾಗೂ ನೆಲಕ್ಕೆ ಗ್ರ್ಯಾನೈಟ್‌ಗಳನ್ನು ಹಾಕಲಾಗಿದೆ ಎಂದು ತಿಳಿಸುತ್ತಾರೆ.

ಮಾರುಕಟ್ಟೆಯ ಪ್ರತಿ ಫ್ಲೋರ್‌ನಲ್ಲಿ ಎರಡು ಕುಡಿಯುವ ನೀರಿನ ವ್ಯವಸ್ಥೆ ಹಾಗೂ ಪ್ರತಿ ಹಂತ ಗಳಲ್ಲಿಯೂ ನಾಲ್ಕು ಶೌಚಾಲಯಗಳನ್ನು ನಿರ್ಮಿಸಲಾಗುತ್ತಿದೆ. ಅಗ್ನಿಶಾಮಕ ರಕ್ಷಣಾ ವ್ಯವಸ್ಥೆ, ಅಪ್‌ ಗ್ರೇಡ್‌ ವಿದ್ಯುತ್‌ ವ್ಯವಸ್ಥೆ, ಡೀಸೆಲ್‌ ಜನರೇಟರ್‌ ವ್ಯವಸ್ಥೆ, ಸುರಕ್ಷಿತ ಸ್ಟೋರೇಜ್‌ ವ್ಯವಸ್ಥೆ ಸೇರಿದಂತೆ ಹಲವು ಸೌಲಭ್ಯಗಳನ್ನು ಕಲ್ಪಿಸಲಾಗುತ್ತಿದೆ ಎಂದು ಹೇಳುತ್ತಾರೆ.

ವ್ಯವಸ್ಥಿತವಾದ ಪಾರ್ಕಿಂಗ್‌: ಕೆ.ಆರ್‌. ಮಾರುಕಟ್ಟೆಯ ಗ್ರೌಂಡ್‌ ಫ್ಲೋರ್‌ನಲ್ಲಿ ಇದ್ದ ಪಾರ್ಕಿಂಗ್‌ ಸೌಲಭ್ಯ ಅವ್ಯವಸ್ಥೆಯಾಗಿದ್ದು, ದಿನದ 24 ಗಂಟೆಗಳ ಕಾಲ ಕಾರ್ಯಚಟುವಟಿಕೆಗಳು ನಡೆಯುವ ಆ ಪ್ರದೇಶದಲ್ಲಿ ಅಕ್ರಮ ಚಟುವಟಿಕೆಗಳು ಹೆಚ್ಚಾಗಿ ನಡೆಯುತ್ತಿದ್ದವು. ಇದನ್ನು ತಡೆಗಟ್ಟುವ ಉದ್ದೇಶ ದಿಂದ ವಿದ್ಯುತ್‌ ವ್ಯವಸ್ಥೆ ಹಾಗೂ ಪಾರ್ಕಿಂಗ್‌ ಸ್ಥಳದಿಂದ ಏಳು ಮೀ. ಅಗಲವಾಗಿ ಇಳಿಜಾರು ಮಾಡಲಾಗಿದ್ದು, ಸುಲಭವಾಗಿ ವಾಹನ ಸಂಚರಿಸಬಹುದಾಗಿದೆ. ಈ ಪ್ರದೇಶದಲ್ಲಿ
ಸುಮಾರು 168 ನಾಲ್ಕುಚಕ್ರದ ವಾಹನ ಮತ್ತು 279 ದ್ವಿಚಕ್ರ ವಾಹನ ಗಳನ್ನು ನಿಲ್ಲಿಸಬಹುದಾಗಿದೆ.

ಜನರಿಗೆ ಹಾಗೂ ಸರಕು ಸಾಗಣೆಗೆ ಪ್ರತ್ಯೇಕ ಲಿಫ್ಟ್ 
ಜತೆಗೆ, ಮಾರುಕಟ್ಟೆಯ ಎಲ್ಲರಿಗೂ ಅನುಕೂಲವಾಗಲೆಂದು ನಾಲ್ಕು ಭಾಗಗಳಲ್ಲಿ ನಾಲ್ಕು ಜನರಿಗೆ ಹಾಗೂ ಎರಡು ಗೂಡ್ಸ್‌ ಸಾಗಿಸುವ ಲಿಫ್ಟ್ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ಜನರ ಸುರಕ್ಷತೆಗಾಗಿ ಕಬ್ಬಣದ ಕಂಬಿ ಹಾಗೂ ಇತರೆ ವಸ್ತುಗಳನ್ನು ತೆಗೆದು, ಸ್ಟೀಲ್‌ ವಸ್ತುಗಳನ್ನು ಬಳಕೆ ಮಾಡಲಾಗಿದೆ. ಜೊತೆಗೆ ಮಳೆಯ ನೀರು ಒಳಗೆ ಬರದಂತೆ ಮಾರುಕಟ್ಟೆಯ ಮುಂಭಾಗದಲ್ಲಿ ದಪ್ಪ ಹಾಗೂ ಗುಣಮಟ್ಟದ ಗಾಜು ಬಳಸಲಾಗಿದ್ದು, ಈಗಾಗಲೇ ಗಾಜು ಛಾವಣಿಯ ಕೆಲಸ ಶೇ.90ರಷ್ಟು ಪೂರ್ಣಗೊಂಡಿದೆ. ಒಟ್ಟು 1,200 ಅಡಿ ಪ್ರದೇಶವನ್ನು ವಾಟರ್‌ಪ್ರೂಫ್ ವ್ಯವಸ್ಥೆ ಮಾಡಲಾಗುತ್ತಿದೆ ಎನ್ನುತ್ತಾರೆ.

ಸ್ಮಾರ್ಟ್‌ ಸಿಟಿ ಯೋಜನೆಯಡಿ ಕೈಗೊಂಡಿರುವ ಕೆ.ಆರ್‌. ಮಾರುಕಟ್ಟೆಯ ಕಟ್ಟಡದ ಅಭಿವೃದ್ಧಿ ಕಾಮಗಾರಿಯು ಕೊರೊನಾ ಹಾಗೂ ಮಳೆಯ ಕಾರಣದಿಂದಾಗಿ ತಡವಾಗಿದ್ದರೂ, ಈಗಾಗಲೇ ಶೇ.80ರಷ್ಟು ಕಾಮಗಾರಿ ಮುಗಿದಿದ್ದು, ನವೆಂಬರ್‌ ಅಂತ್ಯದೊಳಗೆ ಪೂರ್ಣಗೊಳಿಸುವ ಯೋಚನೆಯಿದೆ.
ವಿನಾಯಕ್‌ ಸೂಗರ್‌, ಸ್ಮಾರ್ಟ್‌ ಸಿಟಿ ಯೋಜನೆ
ಮುಖ್ಯ ಇಂಜಿನಿಯರ್‌

ಕೆ.ಆರ್‌.ಮಾರುಕಟ್ಟೆಯಲ್ಲಿ ನಡೆಯುತ್ತಿರುವ ಸ್ಮಾರ್ಟ್‌ ಸಿಟಿ ಕಾಮಗಾರಿಯೂ ಕೋವಿಡ್‌, ಮಳೆ ಕಾರಣದಿಂದ ನಿಧಾನಗತಿಯಲ್ಲಿ ನಡೆಯುತ್ತಿದ್ದು, ಆದಷ್ಟು ಬೇಗ ಕಾಮಗಾರಿಯನ್ನು ಪೂರ್ಣಗೊಳಿಸಿದರೆ, ವ್ಯಾಪಾರಸ್ಥರಿಗೆ ಮತ್ತು ಗ್ರಾಹಕರಿಗೆ ಅನುಕೂಲವಾಗುತ್ತದೆ.
●ದಿವಾಕರ್‌, ಕೆ.ಆರ್‌.ಮಾರುಕಟ್ಟೆ ಅಧ್ಯಕ್ಷ

●ಭಾರತಿ ಸಜ್ಜನ್‌

ಟಾಪ್ ನ್ಯೂಸ್

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.