ನಿರ್ದೇಶಕರು-ಪ್ರೇಕ್ಷಕರಿಗೆ ಹೊಸ ವೇದಿಕೆ

ವಿಭಿನ್ನ ಪ್ರಯೋಗಕ್ಕೆ ಮುಂದಾದ ನಿರ್ದೇಶಕ ಲೂಸಿಯಾ ಪವನ್

Team Udayavani, Jun 7, 2020, 4:20 AM IST

pk lucia

ಕೋವಿಡ್‌ 19 ಲಾಕ್ ಡೌನ್ ವೇಳೆಯಲ್ಲಿ ಚಿತ್ರರಂಗದ ಅನೇಕ ಮಂದಿ ತೆರೆಹಿಂದೆಯೇ ತಮ್ಮದೇಯಾದ ಒಂದಷ್ಟು ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಇದೇ ವೇಳೆ ನಿರ್ದೇಶಕ ಲೂಸಿಯಾ ಪವನ್ ಕುಮಾರ್, ಚಿತ್ರರಂಗದಲ್ಲಿ ಒಂದಷ್ಟು ಬದಲಾವಣೆಗಳಿಗೆ ಪ್ರಯತ್ನಿಸುತ್ತಿದ್ದು, ಅದರಲ್ಲಿ ತಮ್ಮ ಯೋಚನೆಯೊಂದನ್ನು ಚಿತ್ರರಂಗದ ಮುಂದಿಡುವ ಪ್ರಯತ್ನ ಮಾಡಿದ್ದಾರೆ. ಈ ಹಿಂದೆ ಲಾಕ್ ಡೌನ್ ಅವಧಿಯಲ್ಲಿ ಸಂಕಷ್ಟದಲ್ಲಿರುವ ಚಿತ್ರರಂಗದ ಅನೇಕರಿಗೆ ನೆರವಾಗಲು ತಮ್ಮದೇ ರೀತಿಯಲ್ಲಿ ದೇಣಿಗೆ ಸಂಗ್ರಹಿಸಿದ್ದ ಅವರು, ಇದೀಗ ಸಿನಿಮಾ ಮೇಕರ್ಸ್ ಮತ್ತು ಪ್ರೇಕ್ಷಕರನ್ನು ಹತ್ತಿರ ತರಲು ಹೊಸ ಯೋಜನೆಯನ್ನು ತರಲು ಮುಂದಾಗಿದ್ದಾರೆ.

ಫಿಲ್ಮ್ ಮೇಕರ್ಸ್ ಯುನೈಟೆಡ್ ಕ್ಲಬ್ (ಎಫ್‍ಯುಸಿ) ಎಂಬ ಹೊಸ ವೇದಿಕೆಯನ್ನು ಪವನ್ ರೂಪಿಸಿದ್ದಾರೆ. ಈ ವೇದಿಕೆಯಲ್ಲಿ ಅನೇಕ ಜನಪ್ರಿಯ ನಿರ್ದೇಶಕರು ಹಾಗೂ ಚಿತ್ರರಂಗದ ಅಭಿಮಾನಿಗಳು ಚಿತ್ರಗಳು ಮತ್ತು ಪ್ರದರ್ಶನಗಳ ಕುರಿತು ಸಂವಾದ ನಡೆಸಲಿದ್ದಾರೆ. ಈ ಬಗ್ಗೆ ಮಾತನಾಡುವ ಪವನ್ ಕುಮಾರ್, ಈ ಮೂಲಕ ಸಮಾನ ಮನಸ್ಕ ನಿರ್ದೇಶಕರು ಹಾಗೂ ಪ್ರೇಕ್ಷಕರು ಜತೆಗೂಡಿ ಸಿನಿಮಾ ನಿರ್ಮಾಣದ ಗಡಿಗಳನ್ನು ವಿಸ್ತರಿಸುವ, ಜತೆಯಾಗಿ ಸಿನಿಮಾ ನೋಡುವ, ಅದರ ಕುರಿತು ಕಲಿಯುವ ಸಾಧ್ಯತೆಯನ್ನು ಹೆಚ್ಚಿಸಲಿದೆ ಎಂದು ತಿಳಿಸಿದ್ದಾರೆ

ಇನ್ನು ಈ ವೇದಿಕೆಯಲ್ಲಿ ಕ್ಲಬ್ ಸದಸ್ಯರಿಂದ ಸಿನಿಮಾ ನಿರ್ಮಾಣಕ್ಕೆ ಬೇಕಾದ ಫಂಡ್ ಕೂಡ ಸಂಗ್ರಹವಾಗಲಿದೆ. ಈ ಹಣವನ್ನು ನಿರ್ದೇಶಕರು ಪ್ರಾಮಾಣಿಕ ಸಿನಿಮಾ ಮಾಡಲು ಲಭ್ಯವಾಗಲಿದೆ. ಕ್ಲಬ್ ಸದಸ್ಯರಿಗೆ ವಿಭಿನ್ನವಾದ ಕಂಟೆಂಟ್‍ಗಳನ್ನು ಇಲ್ಲಿ ತೋರಿಸಲಾಗುತ್ತದೆಯಂತೆ. ಇನ್ನು ಸಿನಿಮಾ ವಿಶ್ಲೇಷಣೆ, ವಿಮರ್ಶೆ, ನಿರ್ದೇಶಕರ ಸಂದರ್ಶನಗಳು, ಸಿನಿಮಾ ಇತಿಹಾಸದ ಸ್ಮರಣೆ ಮುಂತಾದ ಚಿತ್ರರಂಗಕ್ಕೆ ಸಂಬಂಧಿಸಿದಂತೆ ಹತ್ತಾರು ಚಟುವಟಿಕೆಗಳು ನಡೆಯಲಿವೆಯಂತೆ. ಅದನ್ನು ಹೊರತುಪಡಿಸಿ, ಚಿತ್ರರಂಗದ ಹೊರತಾದ ಯಾವುದೇ ಚಟುವಟಿಕೆಗಳು, ಚರ್ಚೆಗಳು ನಡೆಯುವುದಿಲ್ಲ ಎನ್ನುವುದು ಪವನ್ ಕುಮಾರ್ ಮಾತು.

ಇನ್ನು ಈ ವೇದಿಕೆಯಲ್ಲಿ ಸಿನಿಮಾ ಬಗ್ಗೆ ಆಸಕ್ತರು ಒಂದೇ ಕಡೆ ಸೇರುವ ಅವಕಾಶವಿರುತ್ತದೆ. ಇಲ್ಲಿ ತಮಾಷೆಯಾಗಿ ಹರಟುತ್ತಾ, ಹೊಸ ಸಂಗತಿಗಳು, ಆವಿಷ್ಕಾರಗಳ ಬಗ್ಗೆ ಚರ್ಚಿಸುತ್ತಾ ಕಲಿಕೆ ನಡೆಯುತ್ತದೆ. ಯೂಟ್ಯೂಬ್ ಚಾನೆಲ್‍ನಲ್ಲಿ ಈ ಚಟುವಟಿಕೆಗಳು ನಡೆಯಲಿದ್ದು, ವೆಬ್‍ಸೈಟ್ ಮತ್ತು ಸೋಶಿಯಲ್ ಮೀಡಿಯಾಗಳನ್ನು ಕೂಡ ಇದಕ್ಕೆ ಸಂಪರ್ಕಿಸಲಾಗಿದೆ. ಒಂದು ತಿಂಗಳಿನಿಂದ ಈ ಬಗ್ಗೆ ಯೋಜನೆಗಳು, ಚರ್ಚೆಗಳು ನಡೆದಿದ್ದು ಈಗ ಅಧಿಕೃತವಾಗಿ ಇದಕ್ಕೆ ಚಾಲನೆ ಸಿಕ್ಕಿದೆ ಎನ್ನುತ್ತಾರೆ ಪವನ್ ಕುಮಾರ್.

ನಿರ್ದೇಶಕರಾದ ಪವನ್ ಕುಮಾರ್, ಅರವಿಂದ್ ಶಾಸ್ತ್ರಿ, ಅಭಯ ಸಿಂಹ, ಈರೇ ಗೌಡ, ಮಂಸೋರೆ, ಕೆ.ಎಂ ಚೈತನ್ಯ, ಆದರ್ಶ್ ಈಶ್ವರಪ್ಪ, ಜಯತೀರ್ಥ ಮುಂತಾದ ನಿರ್ದೇಶಕರು ಈಗಾಗಲೇ ಈ ಕ್ಲಬ್‍ನಲ್ಲಿ ಸೇರಿಕೊಂಡಿದ್ದಾರೆ. ಇನ್ನೂ ಅನೇಕ ಪ್ರಯೋಗಾತ್ಮಕ ಚಿತ್ರಗಳನ್ನು ನೀಡಿರುವ ನಿರ್ದೇಶಕರು ಮುಂದಿನ ದಿನಗಳಲ್ಲಿ ಸೇರಿಕೊಳ್ಳಲಿದ್ದಾರೆ. ಇದರಿಂದ ಹೊಸ ಮಾದರಿಯ ಸಿನಿಮಾ ಪ್ರಯತ್ನಗಳಿಗೆ ಉತ್ತೇಜನ ಸಿಗಲಿದೆ ಎನ್ನುವುದು ಈ ವೇದಿಕೆಯ ಹಿಂದಿನ ಆಶಯ.

ಟಾಪ್ ನ್ಯೂಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಇದು ಮರ್ಯಾದೆ ಪ್ರಶ್ನೆ!

Sandalwood: ಇದು ಮರ್ಯಾದೆ ಪ್ರಶ್ನೆ!

15

Pawan Wadeyar: ವೆಂಕ್ಯಾನ ಹಿಂದೆ ಸಾಗರ್‌-ಪವನ್‌

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.