ನಿರ್ದೇಶಕರು-ಪ್ರೇಕ್ಷಕರಿಗೆ ಹೊಸ ವೇದಿಕೆ

ವಿಭಿನ್ನ ಪ್ರಯೋಗಕ್ಕೆ ಮುಂದಾದ ನಿರ್ದೇಶಕ ಲೂಸಿಯಾ ಪವನ್

Team Udayavani, Jun 7, 2020, 4:20 AM IST

pk lucia

ಕೋವಿಡ್‌ 19 ಲಾಕ್ ಡೌನ್ ವೇಳೆಯಲ್ಲಿ ಚಿತ್ರರಂಗದ ಅನೇಕ ಮಂದಿ ತೆರೆಹಿಂದೆಯೇ ತಮ್ಮದೇಯಾದ ಒಂದಷ್ಟು ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಇದೇ ವೇಳೆ ನಿರ್ದೇಶಕ ಲೂಸಿಯಾ ಪವನ್ ಕುಮಾರ್, ಚಿತ್ರರಂಗದಲ್ಲಿ ಒಂದಷ್ಟು ಬದಲಾವಣೆಗಳಿಗೆ ಪ್ರಯತ್ನಿಸುತ್ತಿದ್ದು, ಅದರಲ್ಲಿ ತಮ್ಮ ಯೋಚನೆಯೊಂದನ್ನು ಚಿತ್ರರಂಗದ ಮುಂದಿಡುವ ಪ್ರಯತ್ನ ಮಾಡಿದ್ದಾರೆ. ಈ ಹಿಂದೆ ಲಾಕ್ ಡೌನ್ ಅವಧಿಯಲ್ಲಿ ಸಂಕಷ್ಟದಲ್ಲಿರುವ ಚಿತ್ರರಂಗದ ಅನೇಕರಿಗೆ ನೆರವಾಗಲು ತಮ್ಮದೇ ರೀತಿಯಲ್ಲಿ ದೇಣಿಗೆ ಸಂಗ್ರಹಿಸಿದ್ದ ಅವರು, ಇದೀಗ ಸಿನಿಮಾ ಮೇಕರ್ಸ್ ಮತ್ತು ಪ್ರೇಕ್ಷಕರನ್ನು ಹತ್ತಿರ ತರಲು ಹೊಸ ಯೋಜನೆಯನ್ನು ತರಲು ಮುಂದಾಗಿದ್ದಾರೆ.

ಫಿಲ್ಮ್ ಮೇಕರ್ಸ್ ಯುನೈಟೆಡ್ ಕ್ಲಬ್ (ಎಫ್‍ಯುಸಿ) ಎಂಬ ಹೊಸ ವೇದಿಕೆಯನ್ನು ಪವನ್ ರೂಪಿಸಿದ್ದಾರೆ. ಈ ವೇದಿಕೆಯಲ್ಲಿ ಅನೇಕ ಜನಪ್ರಿಯ ನಿರ್ದೇಶಕರು ಹಾಗೂ ಚಿತ್ರರಂಗದ ಅಭಿಮಾನಿಗಳು ಚಿತ್ರಗಳು ಮತ್ತು ಪ್ರದರ್ಶನಗಳ ಕುರಿತು ಸಂವಾದ ನಡೆಸಲಿದ್ದಾರೆ. ಈ ಬಗ್ಗೆ ಮಾತನಾಡುವ ಪವನ್ ಕುಮಾರ್, ಈ ಮೂಲಕ ಸಮಾನ ಮನಸ್ಕ ನಿರ್ದೇಶಕರು ಹಾಗೂ ಪ್ರೇಕ್ಷಕರು ಜತೆಗೂಡಿ ಸಿನಿಮಾ ನಿರ್ಮಾಣದ ಗಡಿಗಳನ್ನು ವಿಸ್ತರಿಸುವ, ಜತೆಯಾಗಿ ಸಿನಿಮಾ ನೋಡುವ, ಅದರ ಕುರಿತು ಕಲಿಯುವ ಸಾಧ್ಯತೆಯನ್ನು ಹೆಚ್ಚಿಸಲಿದೆ ಎಂದು ತಿಳಿಸಿದ್ದಾರೆ

ಇನ್ನು ಈ ವೇದಿಕೆಯಲ್ಲಿ ಕ್ಲಬ್ ಸದಸ್ಯರಿಂದ ಸಿನಿಮಾ ನಿರ್ಮಾಣಕ್ಕೆ ಬೇಕಾದ ಫಂಡ್ ಕೂಡ ಸಂಗ್ರಹವಾಗಲಿದೆ. ಈ ಹಣವನ್ನು ನಿರ್ದೇಶಕರು ಪ್ರಾಮಾಣಿಕ ಸಿನಿಮಾ ಮಾಡಲು ಲಭ್ಯವಾಗಲಿದೆ. ಕ್ಲಬ್ ಸದಸ್ಯರಿಗೆ ವಿಭಿನ್ನವಾದ ಕಂಟೆಂಟ್‍ಗಳನ್ನು ಇಲ್ಲಿ ತೋರಿಸಲಾಗುತ್ತದೆಯಂತೆ. ಇನ್ನು ಸಿನಿಮಾ ವಿಶ್ಲೇಷಣೆ, ವಿಮರ್ಶೆ, ನಿರ್ದೇಶಕರ ಸಂದರ್ಶನಗಳು, ಸಿನಿಮಾ ಇತಿಹಾಸದ ಸ್ಮರಣೆ ಮುಂತಾದ ಚಿತ್ರರಂಗಕ್ಕೆ ಸಂಬಂಧಿಸಿದಂತೆ ಹತ್ತಾರು ಚಟುವಟಿಕೆಗಳು ನಡೆಯಲಿವೆಯಂತೆ. ಅದನ್ನು ಹೊರತುಪಡಿಸಿ, ಚಿತ್ರರಂಗದ ಹೊರತಾದ ಯಾವುದೇ ಚಟುವಟಿಕೆಗಳು, ಚರ್ಚೆಗಳು ನಡೆಯುವುದಿಲ್ಲ ಎನ್ನುವುದು ಪವನ್ ಕುಮಾರ್ ಮಾತು.

ಇನ್ನು ಈ ವೇದಿಕೆಯಲ್ಲಿ ಸಿನಿಮಾ ಬಗ್ಗೆ ಆಸಕ್ತರು ಒಂದೇ ಕಡೆ ಸೇರುವ ಅವಕಾಶವಿರುತ್ತದೆ. ಇಲ್ಲಿ ತಮಾಷೆಯಾಗಿ ಹರಟುತ್ತಾ, ಹೊಸ ಸಂಗತಿಗಳು, ಆವಿಷ್ಕಾರಗಳ ಬಗ್ಗೆ ಚರ್ಚಿಸುತ್ತಾ ಕಲಿಕೆ ನಡೆಯುತ್ತದೆ. ಯೂಟ್ಯೂಬ್ ಚಾನೆಲ್‍ನಲ್ಲಿ ಈ ಚಟುವಟಿಕೆಗಳು ನಡೆಯಲಿದ್ದು, ವೆಬ್‍ಸೈಟ್ ಮತ್ತು ಸೋಶಿಯಲ್ ಮೀಡಿಯಾಗಳನ್ನು ಕೂಡ ಇದಕ್ಕೆ ಸಂಪರ್ಕಿಸಲಾಗಿದೆ. ಒಂದು ತಿಂಗಳಿನಿಂದ ಈ ಬಗ್ಗೆ ಯೋಜನೆಗಳು, ಚರ್ಚೆಗಳು ನಡೆದಿದ್ದು ಈಗ ಅಧಿಕೃತವಾಗಿ ಇದಕ್ಕೆ ಚಾಲನೆ ಸಿಕ್ಕಿದೆ ಎನ್ನುತ್ತಾರೆ ಪವನ್ ಕುಮಾರ್.

ನಿರ್ದೇಶಕರಾದ ಪವನ್ ಕುಮಾರ್, ಅರವಿಂದ್ ಶಾಸ್ತ್ರಿ, ಅಭಯ ಸಿಂಹ, ಈರೇ ಗೌಡ, ಮಂಸೋರೆ, ಕೆ.ಎಂ ಚೈತನ್ಯ, ಆದರ್ಶ್ ಈಶ್ವರಪ್ಪ, ಜಯತೀರ್ಥ ಮುಂತಾದ ನಿರ್ದೇಶಕರು ಈಗಾಗಲೇ ಈ ಕ್ಲಬ್‍ನಲ್ಲಿ ಸೇರಿಕೊಂಡಿದ್ದಾರೆ. ಇನ್ನೂ ಅನೇಕ ಪ್ರಯೋಗಾತ್ಮಕ ಚಿತ್ರಗಳನ್ನು ನೀಡಿರುವ ನಿರ್ದೇಶಕರು ಮುಂದಿನ ದಿನಗಳಲ್ಲಿ ಸೇರಿಕೊಳ್ಳಲಿದ್ದಾರೆ. ಇದರಿಂದ ಹೊಸ ಮಾದರಿಯ ಸಿನಿಮಾ ಪ್ರಯತ್ನಗಳಿಗೆ ಉತ್ತೇಜನ ಸಿಗಲಿದೆ ಎನ್ನುವುದು ಈ ವೇದಿಕೆಯ ಹಿಂದಿನ ಆಶಯ.

ಟಾಪ್ ನ್ಯೂಸ್

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

choo mantar kannada movie

Sharan; ಮೇ 10ಕ್ಕೆ ‘ಛೂ ಮಂತರ್‌’ ತೆರೆಗೆ ಸಿದ್ಧ

aditya;s kangaroo movie

Aditya; ಟ್ರೇಲರ್ ನಲ್ಲಿ ‘ಕಾಂಗರೂ’ ದರ್ಶನ; ಮೇ.3ರಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.