NIA: ಪಂಜಾಬ್, ಹರ್ಯಾಣದ 14 ಸ್ಥಳಗಳಲ್ಲಿ ಎನ್ಐಎ ಶೋಧ
Team Udayavani, Nov 22, 2023, 10:03 PM IST
ನವದೆಹಲಿ: ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಅಧಿಕಾರಿಗಳು ಬುಧವಾರ ಪಂಜಾಬ್ ಹಾಗೂ ಹರ್ಯಾಣದ 14 ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಈ ವರ್ಷ ಅಮೆರಿಕದ ಸ್ಯಾನ್ ಫ್ರಾನ್ಸಿಸ್ಕೋದಲ್ಲಿರುವ ಭಾರತೀಯ ದೂತಾವಾಸದ ಮೇಲೆ ಖಲಿಸ್ತಾನಿ ಬೆಂಬಲಿಗರಿಂದ ದಾಳಿ ನಡೆದಿತ್ತು. ಈ ಹಿನ್ನೆಲೆಯಲ್ಲಿ ಎನ್ಐಎ ಶೋಧ ನಡೆಸಿದೆ. ರಾಯಭಾರ ಕಚೇರಿಯ ಅಧಿಕಾರಿಗಳಿಗೆ ಹಾನಿಯುಂಟು ಮಾಡುವ ಉದ್ದೇಶದಿಂದ ಮಾ.19 ಮತ್ತು ಜು.12ರಂದು ನಡೆಸಲಾದ ದಾಳಿಗಳಲ್ಲಿ ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದ್ದು, ಈ ಹಿಂಸಾತ್ಮಕ ಕೃತ್ಯಗಳ ಹಿಂದೆ ದೊಡ್ಡ ಪಿತೂರಿಯೇ ಇರುವ ಶಂಕೆ ಇದೆ.
ಈ ನಿಟ್ಟಿನಲ್ಲಿ ಪಿತೂರಿಯನ್ನು ಬಹಿರಂಗ ಪಡಿಸಲು ಈ ಕಾರ್ಯಾಚರಣೆ ನಡೆಸಿರುವುದಾಗಿ ಎನ್ಐಎ ಅಧಿಕಾರಿಗಳು ಹೇಳಿದ್ದಾರೆ. ಕಾರ್ಯಾಚರಣೆ ಭಾಗವಾಗಿ ಪಂಜಾಬ್ನ ಮೊಗಾ, ಜಲಂಧರ್, ಲುಧಿಯಾನ, ಗುರುದಾಸಪುರ, ಮೊಹಾಲಿ ಮತ್ತು ಪಟಿಯಾಲ ಜಿಲ್ಲೆಗಳ ಜತೆಗೆ ಹರ್ಯಾಣದ ಕುರುಕ್ಷೇತ್ರ ಮತ್ತು ಯಮುನಾನಗರ ಜಿಲ್ಲೆಗಳಲ್ಲಿ ಶೋಧ ನಡೆಸಲಾಗಿದೆ. ಈ ವೇಳೆ ಆರೋಪಿಗಳಿಗೆ ಸಂಬಂಧಿಸಿದ ಮಾಹಿತಿಗಳಿರುವ ಡಿಜಿಟಲ್ ದತ್ತಾಂಶಗಳು ಮತ್ತು ಇನ್ನಿತರ ಹಲವು ದೋಷಾರೋಪಣೆಯ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದೂ ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್