ನೈಟ್ ಕರ್ಫ್ಯೂ, ವೀಕೆಂಡ್ ಲಾಕ್ಡೌನ್ ಪ್ರಯೋಜನವಿಲ್ಲ: ಡಿಕೆಶಿ
Team Udayavani, Aug 7, 2021, 9:30 PM IST
ಬೆಂಗಳೂರು: ಕೋವಿಡ್ ನಿಯಂತ್ರಣ ನಿಟ್ಟಿನಲ್ಲಿ ನೈಟ್ ಕರ್ಫ್ಯೂ, ವೀಕೆಂಡ್ ಲಾಕ್ಡೌನ್ನಿಂದ ಯಾವುದೇ ಪ್ರಯೋಜನವಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರಕ್ಕೆ ಬದ್ಧತೆ ಇದ್ದರೆ, ನೀವು ಕೇಂದ್ರ ಸರ್ಕಾರದ ಮೇಲೆ ಒತ್ತಡ ತಂದು ಕೂಡಲೇ ಹೆಚ್ಚಿನ ಪ್ರಮಾಣದಲ್ಲಿ ಲಸಿಕೆ ತಂದು ಒಂದು ಅಥವಾ ಎರಡು ತಿಂಗಳ ಕಾಲಮಿತಿಯಲ್ಲಿ ಎಲ್ಲರಿಗೂ ಲಸಿಕೆ ನೀಡಲಿ. ಆಗ ಮಾತ್ರ ಪರಿಸ್ಥಿತಿ ನಿಯಂತ್ರಣಕ್ಕೆ ಬರುತ್ತದೆ ಎಂದು ತಿಳಿಸಿದರು.
ಕೇಂದ್ರದವರು ಲಸಿಕೆ ಪೂರೈಸುತ್ತಿಲ್ಲ, ನಿಮ್ಮ ಕೈಲಿ ಪರಿಸ್ಥಿತಿ ನಿಯಂತ್ರಿಸಲು ಸಾಧ್ಯವಾಗುತ್ತಿಲ್ಲ. ಲಸಿಕೆಗಾಗಿ ಜನ ಇಂದಿಗೂ ಸರದಿ ಸಾಲಿನಲ್ಲಿ ನಿಂತು ಪರದಾಡುತ್ತಿದ್ದಾರೆ. ಬಿಜೆಪಿಯವರಿಗೆ ಆಡಳಿತ ಮಾಡಲು ಗೊತ್ತಿಲ್ಲ. ಸಾಮಾನ್ಯ ಪ್ರಜ್ಞೆಯೂ ಇಲ್ಲ. ನಾವು ನೆರೆ ರಾಜ್ಯಗಳ ಜತೆ ಉತ್ತಮ ಸಂಬಂಧ ಇಟ್ಟುಕೊಳ್ಳಬೇಕೇ ಹೊರತು ಯಾರನ್ನೂ ಶತ್ರುಗಳಂತೆ ಕಾಣಬಾರದು ಎಂದು ಹೇಳಿದರು.
ಇದನ್ನೂ ಓದಿ:ಶಿರಾಡಿ ಘಾಟಿಯಲ್ಲಿ ಇನ್ನೆರಡು ವಾರದಲ್ಲಿ ಲಘು ವಾಹನ ಸಂಚಾರ ಸಾಧ್ಯತೆ
ದೌರ್ಜನ್ಯ ನಿಲ್ಲಲಿ
ಆಸ್ತಿ ತೆರಿಗೆ ವಿಚಾರದಲ್ಲಿ ಬಿಬಿಎಂಪಿ ತಪ್ಪಿದ್ದರೂ 78 ಸಾವಿರ ಜನರಿಗೆ ನೋಟೀಸ್ ನೀಡಲಾಗಿದೆ. ಕೋವಿಡ್ ಸಂಕಷ್ಟದ ಸಮಯದಲ್ಲಿ ಜನರ ಮೇಲೆ ದೌರ್ಜನ್ಯ ನಡೆಸುವಂತಹ ನಿರ್ಧಾರವನ್ನು ಖಂಡಿಸುತ್ತೇವೆ. ಈ ರೀತಿ ದೌರ್ಜನ್ಯಕ್ಕೆ ಒಳಗಾಗುವ ಜನರ ರಕ್ಷಣೆಗೆ ನಾವು ನಿಲ್ಲುತ್ತೇವೆ. ಈಗ ನೀಡಿರುವ ನೋಟೀಸ್ ಅನ್ನು ಹಿಂಪಡೆಯಬೇಕು. 2020ರಲ್ಲಿ ತಂದ ಹೊಸ ಕಾಯ್ದೆ ಆಧಾರದ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ