ನಿರಾಣಿಗೆ ಮಂತ್ರಿಗಿರಿ ಕೊಡದಿದ್ರೆ ಎಚ್ಚರಿಕೆ..


Team Udayavani, Jan 15, 2020, 3:09 AM IST

niranige

ದಾವಣಗೆರೆ: ವಚನಾನಂದ ಸ್ವಾಮೀಜಿ ಭಾಷಣದಲ್ಲಿ ತಮ್ಮ ಸಮಾಜದ ಶಾಸಕರಿಗೆ ಸಚಿವ ಸ್ಥಾನದ ಒತ್ತಡ ಹೇರಿದ್ದರಿಂದ ಸಿಟ್ಟಿಗೆದ್ದ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ, ತಾವು ಸಮಾರಂಭದಿಂದ ಎದ್ದು ಹೋಗುವುದಾಗಿ ಹೇಳಿದ ಪ್ರಸಂಗ ಮಂಗಳವಾರ ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠದಲ್ಲಿನ ಹರ ಜಾತ್ರಾ ಮಹೋತ್ಸವದಲ್ಲಿ ನಡೆಯಿತು.

ಮಧ್ಯಾಹ್ನ 3 ಗಂಟೆಗೆ ಬೆಳ್ಳಿ ಬೆಡಗು ಸಮಾರಂಭದಲ್ಲಿ ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದ ಜಗದ್ಗುರು ವಚನಾನಂದ ಶ್ರೀಗಳು, ತಮ್ಮ ಆಶೀರ್ವಚನದಲ್ಲಿ ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿರುವುದೇ ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜದ ಬಲದಿಂದ.

ಯಡಿಯೂರಪ್ಪ ಅವರು ಪವರ್‌ಫುಲ್‌ ಆಗಿರುವುದೇ ನಮ್ಮ ಸಮಾಜದ ಪವರ್‌ನಿಂದ. ಶೇ.40ರಷ್ಟು ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜದ ಶಾಸಕರು ಇದ್ದಾರೆ. ನ್ಯಾಯಯುತವಾಗಿ ನಾಲ್ವರು ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜದ ಶಾಸಕರಿಗೆ ಸಚಿವ ಸ್ಥಾನ ಕೊಡಲೇಬೇಕು ಎಂದರು. ನಿಮ್ಮ ಪರಿಸ್ಥಿತಿಯೂ ನಮಗೆ ಅರ್ಥವಾಗುತ್ತದೆ. ಮೂವರನ್ನಾದರೂ ಸಚಿವರನ್ನಾಗಿ ಮಾಡಲೇಬೇಕು.

ಪ್ರಥಮಾದ್ಯತೆಯಾಗಿ ವೀರಶೈವ ಲಿಂಗಾಯತ ಪಂಚಮಸಾಲಿ ಪ್ರಶ್ನಾತೀತ ನಾಯಕ, ಸಮಾಜ, ಪೀಠ ಪ್ರಾರಂಭವಾದಾಗಿನಿಂದ ಬೆನ್ನೆಲುಬಾಗಿ ನಿಂತಿರುವ, ಸಮಾಜದ ಬಗ್ಗೆ ಕಳಕಳಿ ಹೊಂದಿರುವ ಮುರುಗೇಶ್‌ ನಿರಾಣಿ ಅವರಿಗೆ ಕೊಡಲೇಬೇಕು. ನೀವೇನಾದರೂ (ಮುರುಗೇಶ್‌ ನಿರಾಣಿಯವರಿಗೆ) ಕೈ ಕೊಟ್ಟರೆ, ಇಡೀ ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜ ನಿಮಗೆ ಕೈ ಕೊಡುತ್ತದೆ ಎಂದರು.

ಸ್ವಾಮೀಜಿ ಮಾತುಗಳಿಂದ ಕೋಪಗೊಂಡ ಸಿಎಂ ಯಡಿಯೂರಪ್ಪ, “ನೀವು ಈ ರೀತಿ ಬೆದರಿಸುವುದಾದರೆ ಸಭೆಯಿಂದ ಎದ್ದು ಹೋಗುತ್ತೇನೆ. ನಿಮ್ಮಿಂದ ಈ ರೀತಿಯ ಮಾತು ನಿರೀಕ್ಷಿಸಿರಲಿಲ್ಲ. ಸಲಹೆ ಕೊಡಿ, ಬೆದರಿಸಿದರೆ ಎದ್ದು ಹೋಗುತ್ತೇನೆ..’ ಎಂದೇಳಿ ಎದ್ದು ನಿಂತರು. “ನೀವು ಮೊದಲು ಕುಳಿತುಕೊಳ್ಳಿ ‘ ಎಂದು ಪದೆ ಪದೇ ಹೇಳುವ ಮೂಲಕ ಸ್ವಾಮೀಜಿ ಸಮಾಧಾನಪಡಿಸಲು ಮುಂದಾದರು.

ಕೊನೆಗೆ ಯಡಿಯೂರಪ್ಪ ಕುಳಿತುಕೊಂಡರು. “ನೀವು ರಿಲ್ಯಾಕ್ಸ್‌ ಆಗಿರಿ. ನಾವು ಕೇಳುತ್ತಿರುವುದು ಸಮಾಜಕ್ಕಾಗಿ’ ಎಂದ ಶ್ರೀಗಳು, ನಮ್ಮ ಸಮಾಜದ ಒತ್ತಡ ನಿಮ್ಮ ಮೂಲಕ ಪ್ರಧಾನಿ, ಅಮಿತ್‌ ಶಾ ಅವರಿಗೆ ತಲುಪಲಿ ಎಂದರು. ದಿಢೀರನೆ ನಡೆದ ಈ ಘಟನೆಯಿಂದ ವೇದಿಕೆಯಲ್ಲಿದ್ದವರು ದಿಗ್ಭ್ರಾಂತರಾಗಿದ್ದರು.

ಟಾಪ್ ನ್ಯೂಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eqewqe

JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

1-qwewweq

K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ 

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.