KCC ಯೋಜನೆಯಡಿ ಸಾಕಷ್ಟು ಹಣ ಮೀಸಲು- ನಿರ್ಮಲಾ ಸೀತಾರಾಮನ್
Team Udayavani, Sep 21, 2023, 11:22 PM IST
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರಕಾರವು ರೈತರಿಗೆ ನೆರವು ನೀಡುವ ನಿಟ್ಟಿನಲ್ಲಿ ಕೆಸಿಸಿ ಯೋಜನೆಯಡಿ ಸಾಕಷ್ಟು ಹಣ ಮೀಸಲಿಟ್ಟಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದರು. ಕಿಸಾನ್ ರಿನ್ ಪೋರ್ಟಲ್, ಕೆಸಿಸಿ ಘರ್ ಘರ್ ಅಭಿಯಾನ, ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆಗೆ ಚಾಲನೆ ನೀಡಿ ಈ ಕುರಿತು ಮಾತನಾಡಿದ ಅವರು, ಘರ್ ಘರ್ ಕೆಸಿಸಿ ಅಭಿಯಾನದ ಯಶಸ್ಸಿಗೆ ಬ್ಯಾಂಕ್ಗಳ ಸಂಪೂರ್ಣ ಸಹಕಾರ ಮುಖ್ಯವಾಗಿದೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರಕಾರ ಕೆಸಿಸಿ ಯೋಜನೆಯಡಿ ಸಾಕಷ್ಟು ಹಣವನ್ನು ಮೀಸಲಿಟ್ಟಿದೆ. ರೈತರಿಗೆ ಸುಲಭವಾದ ಅಲ್ಪಾವಧಿಯ ಸಾಲ ಪಡೆಯಲು ಸಹಕಾರಿಯಾಗಿದೆ. ಬೆಳೆ ವಿಮೆ ಯೋಜನೆಯು 1,40,000 ಕೋಟಿ ರೂ.ಗೂ ಹೆಚ್ಚು ವಿಮಾ ಮೊತ್ತ ಹೊಂದಿದೆ. ಅಕ್ಕಿ ಮತ್ತು ಗೋಧಿ ಬೆಳೆ ಉತ್ಪಾದನೆಗೆ ವಿಸ್ತರಿಸಲು ಕರೆ ನೀಡಿದರು. ಬ್ಯಾಂಕುಗಳು ಮತ್ತು ಸಹಕಾರಿ ಬ್ಯಾಂಕುಗಳ ಸಾಲ ಮಂಜೂರಾತಿ ಮತ್ತು ಸಾಲ ವಿತರಣೆ ಕುರಿತು ಅಧ್ಯಯನ ಮಾಡಲು ಹಣಕಾಸು ಸೇವೆಗಳ ಇಲಾಖೆಗೆ ನಿರ್ದೇಶಿಸಲಾಗಿದೆ ಎಂದರು.
ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್, ಪಿಎಂ ಎಫ್ಬಿಐ ಸಿಇಒ ರಿತೇಶ್ ಚೌಹಾಣ್, ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ, ಕೃಷಿ ಕಾರ್ಯದರ್ಶಿ ಕೈಲಾಶ್ ಚೌಧರಿ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
MUST WATCH
ಹೊಸ ಸೇರ್ಪಡೆ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ