ಕರಾಟೆಯಲ್ಲಿ ಅಂತಾರಾಷ್ಟ್ರೀಯ ಖ್ಯಾತಿಯ ಯುವ ಕರಾಟೆ ಪಟು ನಿವೇದಿತಾ ಕುಲಾಲ್ ವಿಟ್ಲ


Team Udayavani, Dec 3, 2020, 5:25 PM IST

ಕರಾಟೆಯಲ್ಲಿ ಅಂತಾರಾಷ್ಟ್ರೀಯ ಖ್ಯಾತಿಯ ಯುವ ಕರಾಟೆ ಪಟು ನಿವೇದಿತಾ ಕುಲಾಲ್ ವಿಟ್ಲ

ಕರಾಟೆ ಎಂದರೆ ಜಪಾನೀಸ್ ಭಾಷೆಯಲ್ಲಿಖಾಲಿ ಕೈ. ಅಂದರೆ ಶಸ್ತ್ರಾಸ್ತ್ರಗಳನ್ನು ಬಳಸದೇ ಕೈ ಕಾಲು ಮತ್ತಿತರ ಶಾರೀರಿಕ ಭಾಗಗಳನ್ನು ಬಳಸಿಕೊಂಡು ಪ್ರದರ್ಶಿಸುವ ಸಮರ ಕಲೆ. ಪೂರ್ವ ಏಷ್ಯಾದಲ್ಲಿ ಶತಮಾನಗಳ ಹಿಂದೆ ಪ್ರಾರಂಭವಾಗಿ, 1920ರಲ್ಲಿ ಜಪಾನ್ ನಲ್ಲಿ ಅಭಿವೃದ್ಧಿಗೊಂಡ ಕಲೆ, ಇದೀಗ ವಿಶ್ವವ್ಯಾಪಿಯಾಗಿ ಹಬ್ಬಿದ್ದು, ಆತ್ಮರಕ್ಷಣಿಯ ದೃಷ್ಟಿಯಿಂದ ಅತ್ಯಂತ ಪ್ರಾಧಾನ್ಯತೆಯನ್ನು ಹೊಂದಿದೆ.

ಇಂತಹ ಅಂತಾರಾಷ್ಟ್ರೀಯ ಮನ್ನಣೆ ಪಡೆದ ಸಮರ ಕಲೆಯನ್ನು ಅಭ್ಯಸಿಸಿ, ಅಂತಾರಾಷ್ಟ್ರೀಯ ಮಟ್ಟದ ಕರಾಟೆ ಕ್ರೀಡಾ ಕೂಟದಲ್ಲಿ ಭಾರತವನ್ನು ಪ್ರತಿನಿಧಿಕರಿಸಿ, ಎದುರಾಳಿಗಳನ್ನು ನಿರಾತಂಕವಾಗಿ ಮಣಿಸಿ ಪದಕಗಳನ್ನು ತನ್ನದಾಗಿಸಿಕೊಂಡು, ಭಾರತದ ಕೀರ್ತಿ ಪತಾಕೆಯನ್ನು ಬಾನೆತ್ತರಕ್ಕೆ ಹಾರಿಸುವಲ್ಲಿ ಸಫಲರಾಗಿದವರ ಪೈಕಿ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲದ ನಿವೇದಿತಾ ಕುಲಾಲ್ ಕೂಡ ಒಬ್ಬರು.

ಈಕೆ ಮೂಲತಃ ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ ವಿಟ್ಲದ ಕಸಬ ಗ್ರಾಮದ ಅಪ್ಪಯ್ಯ ಮೂಲ್ಯ ಹಾಗೂ ಶಾಲಿನಿ ದಂಪತಿಗಳ ಪ್ರಥಮ ಪುತ್ರಿ.

ಉಕ್ಕುಡ ಸರಕಾರಿ ಶಾಲೆಯಲ್ಲಿ ಶೈಕ್ಷಣಿಕ ಜೀವನ ಪ್ರಾರಂಭಿಸಿದ ಈಕೆ, ನಾಲ್ಕನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಸಂದರ್ಭದಲ್ಲಿ ತನ್ನ ಶಿಕ್ಷಕಿ, ಅತ್ತೆ ಜಯಶ್ರೀ ಪಡಿಬಾಗಿಲು ರವರ ಪ್ರೋತ್ಸಾಹ ಹಾಗೂ ಮಾರ್ಗದರ್ಶನದ ಫಲವಾಗಿ ಖ್ಯಾತ ಕರಾಟೆ ಗುರುಗಳಾದ ಮಾಧವ್ ಅಳಿಕೆ ಯವರಿಂದ ಕರಾಟೆ ತರಬೇತಿ ಪಡೆಯಲು ಪ್ರಾರಂಭಿಸಿದರು.

ಐದನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಸಂದರ್ಭದಲ್ಲಿ ಪ್ರಪ್ರಥಮ ಬಾರಿಗೆ ವಾಮದ ಪದವಿನಲ್ಲಿ ನಡೆದ ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಭಾಗವಹಿಸಿ, ಬೆಳ್ಳಿ ಪದಕ ಗಳಿಸಿದ್ದರು.

ಕಿರು ವಯಸ್ಸಿನಲ್ಲೇ ಕರಾಟೆ ತರಬೇತಿಯೊಂದಿಗೆ ಶಿಕ್ಷಕ ಉಮೇಶ್ ರವರ ಮಾರ್ಗದರ್ಶನದಲ್ಲಿ ಈಜುವಿಕೆ ತರಬೇತಿಯನ್ನು ಕೂಡ ಪಡೆದ ಈಕೆ, ಈಜುವಿಕೆ ಸ್ಪರ್ಧೆಗಳಲ್ಲೂ ಬಹುಮಾನಗಳನ್ನು ಗಳಿಸಿದ್ದರು. ಅದರೊಂದಿಗೆ ವಲಯ ಹಾಗೂ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ತುಳು ಕಂಠಪಾಠ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಶಸ್ತಿಗಳನ್ನು ಗಳಿಸಿದ್ದರು.

ಆರನೇ ತರಗತಿಯಿಂದ ಸೈಂಟ್ ರಿಟ ಇಂಗ್ಲೀಷ್ ಮೀಡಿಯಂ ಶಾಲೆಯಲ್ಲಿ ವಿದ್ಯಾಭ್ಯಾಸ ಪೂರೈಸಿದ ಈಕೆ, ಕರಾಟೆ ಪಂದ್ಯಾವಳಿಗಳಲ್ಲಿ ಮಾತ್ರವಲ್ಲದೆ ತ್ರೋಬಾಲ್, ಶೋಟ್ ಪುಟ್, ಡಿಸ್ಕಸ್ ತ್ರೋ ಮತ್ತಿತರ ಕ್ರೀಡಾ ಸ್ಪರ್ಧೆಗಳಲ್ಲಿ ಹಾಗೂ ಶಾಲಾ ಮಟ್ಟ, ವಲಯ ಮಟ್ಟ, ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯ ತುಳು ಕಂಠಪಾಠ ಸ್ಪರ್ಧೆಯಲ್ಲೂ ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದ್ದರು.

ಬಳಿಕ ವಿಟ್ಲ ಪದವಿಪೂರ್ವ ಕಾಲೇಜಿನಲ್ಲಿ ಪದವಿಪೂರ್ವ ಶಿಕ್ಷಣ ಪೂರೈಸಿದ ಈಕೆ, ಅಂತಾರಾಷ್ಟ್ರೀಯ ಒಕಿನವನ್ ಗೊಜುರ್ಯು ಕರಾಟೆ ಮಲೈಷಿಯಾ ಆಶ್ರಯದಲ್ಲಿ ಮಲೈಷಿಯಾದಲ್ಲಿ ನಡೆದ 2019ನೇ ಸಾಲಿನ ಅಂತಾರಾಷ್ಟ್ರೀಯ ಕರಾಟೆಡು ಓಪನ್ ಚಾಂಪಿಯನ್ ಶಿಪ್ ಕುಮಿಟೆವಿಭಾಗದ ನಲ್ಲಿ ಬೆಳ್ಳಿ ಪದಕ ಹಾಗೂ ಕಾಟವಿಭಾಗದಲ್ಲಿ ನಲ್ಲಿ ಕಂಚಿನ ಪದಕ ಗಳಿಸಿ, ಭಾರತದ ಕೀರ್ತಿ ಪತಾಕೆಯನ್ನು ಬಾನೆತ್ತರಕ್ಕೆ ಹಾರಿಸುವಲ್ಲಿ ಸಫಲರಾಗಿದ್ದರು.

ಅದೇ ರೀತಿ 2016ರಲ್ಲಿ ಮಂಗಳೂರಿನಲ್ಲಿ ನಡೆದ ವೆಸ್ಟರ್ನ್ ನ್ಯಾಷನಲ್ ಲೆವೆಲ್ ಓಪನ್ ಕರಾಟೆ ಪಂದ್ಯಾವಳಿಯಲ್ಲಿ 3 ಚಿನ್ನದ ಪದಕ, 2017ರಲ್ಲಿ 2 ಚಿನ್ನದ ಪದಕ ಹಾಗೂ ಒಂದು ಕಂಚಿನ ಪದಕ, 2018ರಲ್ಲಿ ಚಿನ್ನದ ಪದಕ ಹಾಗೂ ಎರಡು ಬೆಳ್ಳಿ ಪದಕ, 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಸಂದರ್ಭದಲ್ಲಿ ವಾಮದ ಪದವಿನಲ್ಲಿ ನಡೆದ ತಾಲೂಕು ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಬೆಳ್ಳಿ ಪದಕ, ವಾಮಂಜೂರಿನಲ್ಲಿ ನಡೆದ 2018- 19ನೇ ಸಾಲಿನ ಜಿಲ್ಲಾ ಮಟ್ಟದ ಕರಾಟೆಯಲ್ಲಿ ಬೆಳ್ಳಿ ಪದಕ, 2019ರಲ್ಲಿ ಮಂಗಳೂರಿನಲ್ಲಿ ನಡೆದ ರಾಷ್ಟ್ರೀಯ ಮಟ್ಟದ ಮುಕ್ತ ಕರಾಟೆ ಪಂದ್ಯಾವಳಿಯಲ್ಲಿ ಭಾಗವಹಿಸಿ, ‘ಕಟವಿಭಾಗದಲ್ಲಿ ಚಿನ್ನ ಹಾಗೂ ಕುಮಿಟೆವಿಭಾಗದಲ್ಲಿ ಬೆಳ್ಳಿ ಪದಕಗಳನ್ನು, ಮಿಲ್ಗ್ರೀಸ್ ಸಿಬಿಎಸ್ಸಿ ಶಾಲೆಯಲ್ಲಿ ನಡೆದ ಪಂದ್ಯಾವಳಿಯಲ್ಲಿ ಚಿನ್ನ ಹಾಗೂ ಕಂಚಿನ ಪದಕಗಳನ್ನು ಗಳಸಿದ್ದರು.

ಕರಾಟೆ ಕ್ಷೇತ್ರದಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲೇ ಅದ್ವಿತೀಯ ಪ್ರದರ್ಶನ ನೀಡಿದ ಈಕೆಗೆ, ವಿಟ್ಲ ಪದವಿಪೂರ್ವ ಕಾಲೇಜು ಹಾಗೂ ಲಯನ್ಸ್ ಕ್ಲಬ್ ವಿಟ್ಲ, ಕುಲಾಲ ಸಂಘ ವಿಟ್ಲ, ಶಾರದೋತ್ಸವ ಸಮಿತಿ ವಿಟ್ಲ, ಅಯ್ಯಪ್ಪ ಸೇವಾ ಸಮಿತಿ ಗುಂಡಮಜಲು, ಯುವವೇದಿಕೆ ವಿಟ್ಲ ಮತ್ತಿತರ ಸಂಘ ಸಂಸ್ಥೆಗಳ ನೇತೃತ್ವದಲ್ಲಿ ಅಭಿನಂದನಾ ಕಾರ್ಯಕ್ರಮ ನಡೆದಿದೆ.

ಕಿರು ವಯಸ್ಸಿನಲ್ಲಿ ಲಭಿಸಿದ ಪ್ರೋತ್ಸಾಹ, ಮಾರ್ಗದರ್ಶನ, ತರಬೇತಿ ಪೋಷಕರ, ಗೆಳೆಯರ ಹಾಗೂ ಕುಟುಂಬದ ಬೆಂಬಲ ತನ್ನ ಸಾಧನೆಯ ಹಿಂದಿರುವ ಬೆನ್ನೆಲುಬು ಎನ್ನುತ್ತಾರೆ ನಿವೇದಿತಾ ಕುಲಾಲ್.

ಪ್ರಸ್ತುತ ವಿಟ್ಲ ಪದವಿಪೂರ್ವ ಕಾಲೇಜಿನಲ್ಲಿ ದ್ವಿತೀಯ ವರ್ಷ ಪದವಿ ಶಿಕ್ಷಣ ಪೂರೈಸುತ್ತಿರುವ ಈಕೆ, ಈಗಾಗಲೇ 30ಕ್ಕಿಂತಲೂ ಹೆಚ್ಚು ಪದಕಗಳು ಕೈಸೇರಿದ್ದು, ಕರಾಟೆ ಕ್ಷೇತ್ರದಲ್ಲಿ ಮತ್ತಷ್ಟು ಸಾಧನೆ ಎಂಬ ಛಲವನ್ನು ಕೈಬಿಡದೇ, ಎಂಜಿನಿಯರಿಂಗ್ ಶಿಕ್ಷಣ ಪಡೆದು ಎಂಜಿನಿಯರ್ ಆಗಿ ವೃತ್ತಿ ಜೀವನ ಸಾಗಿಸಬೇಕೆಂಬ ಕನಸ್ಸನ್ನು ಹೊತ್ತು ಮುನ್ನಡೆಯುತ್ತಿದ್ದಾರೆ.

ಯಾವ ಕ್ಷೇತ್ರವೇ ಆಗಿರಲಿ, ಯಾವ ವಿಭಾಗವೇ ಆಗಿರಲಿ. ಸಾಧಿಸುವೆನು ಎಂಬ ಅಚಲವಾದ ಛಲವೊಂದಿದ್ದಲ್ಲಿ ಸಾಧಿಸಲು ಅಸಾಧ್ಯವಾದುದು ಯಾವುದೂ ಇಲ್ಲ ಎಂಬುದನ್ನು ನಿವೇದಿತಾ ಕುಲಾಲ್ ರವರ ಸಾಧನೆಯ ಹಾದಿಯನ್ನು ಗಮನಿಸುವಾಗ ಕಂಡುಕೊಳ್ಳಬಹುದು.

ಪ್ರತಿಭೆಗಳ ಪ್ರೋತ್ಸಾಹಕ್ಕೆ ಇನ್ನಷ್ಟು ಸಂಘ ಸಂಸ್ಥೆಗಳು, ವ್ಯಕ್ತಿಗಳು ಮುಂದೆ ಬರುವಂತಾಗಲಿ. ಕಿರು ವಯಸ್ಸಿನಲ್ಲೇ ಪ್ರತಿಭೆಗಳ ಹೊರಹೊಮ್ಮುವಿಕೆಗೆ ಸೂಕ್ತ ಮಾರ್ಗದರ್ಶನ ಹಾಗೂ ವೇದಿಕೆ ಲಭಿಸುವಂತಾಗಲಿ. ಪ್ರತಿಭೆಗಳ ಸಾಧನೆಯ ಹಾದಿ ಸುಗಮವಾಗಿ ಸಾಗಲಿ ಎಂದು ಹಾರೈಸೋಣ.

– ️ ಪ್ರದೀಪ್ ಎಸ್. ಕುಲಾಲ್.

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.