ಗಡಿ ಬಂದ್ ಸಡಿಲಿಕೆ ಇಲ್ಲ : ಬಿಎಸ್ವೈ
Team Udayavani, Apr 5, 2020, 10:21 AM IST
ಬೆಂಗಳೂರು: ಕೋವಿಡ್ 19 ಭೀತಿ ಹೆಚ್ಚಾಗಿರುವುದರಿಂದ ಕರ್ನಾಟಕ-ಕೇರಳ ಗಡಿ ಬಂದ್ ಸಡಿಲಗೊಳಿಸಲು ಸಾಧ್ಯವೇ ಇಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.
ಕರ್ನಾಟಕ-ಕೇರಳ ಗಡಿ ತೆರವು ಸಂಬಂಧ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದರು. ಈ ಪತ್ರಕ್ಕೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ, ಕರ್ನಾಟಕದ ಪ್ರತಿಯೊಬ್ಬರ ಪ್ರಾಣ ರಕ್ಷಣೆ ನನ್ನ ಸರಕಾರದ ಹೊಣೆಯಾಗಿದೆ ಎಂದು ಹೇಳಿದರು.
ಗಂಭೀರ ಅಧ್ಯಯನ
ಗಡಿ ಬಂದ್ ಮಾಡುವ ನಿರ್ಧಾರವನ್ನು ಏಕಾಏಕಿ ತೆಗೆದು ಕೊಂಡಿಲ್ಲ. ಗಡಿ ಭಾಗದ ಜನರ ಆರೋಗ್ಯ ಸಮಸ್ಯೆಯನ್ನು ಗಂಭೀರವಾಗಿ ಅಧ್ಯಯನ ಮಾಡಿ, ಸಂಬಂಧಿಸಿದ ಪೂರಕ ದಾಖಲೆಗಳ ಆಧಾರದ ಮೇಲೆ ಗಡಿ ಮುಚ್ಚಲಾಗಿದೆ. ಗಡಿ ಬಂದ್ ತೆರವುಗೊಳಿಸಿದರೆ ಕರ್ನಾಟಕದ ಸಾವಿರಾರು ಮುಗ್ಧ ಜನರ ಆರೋಗ್ಯಕ್ಕೆ ಧಕ್ಕೆಯಾಗುವ ಸಾಧ್ಯತೆಯಿದೆ. ಹೀಗಾಗಿ ವಾಪಸ್ ಪಡೆಯವ ನಿರ್ಧಾರ ಸದ್ಯಕ್ಕೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ