ಸಿಇಒಗಳನ್ನು ಬಂಧನ ಮಾಡುವಂತಿಲ್ಲ: ಕೇಂದ್ರ
Team Udayavani, Apr 25, 2020, 5:45 AM IST
ಸಾಂದರ್ಭಿಕ ಚಿತ್ರ
ಹೊಸದಿಲ್ಲಿ: ಸಂಸ್ಥೆಯೊಂದರ ಸಿಬ್ಬಂದಿಗೆ ಕೋವಿಡ್-19 ಪಾಸಿಟಿವ್ ವರದಿ ಬಂದರೆ, ಆ ಸಂಸ್ಥೆಯ ಸಿಇಒ ಅವರನ್ನು ಬಂಧಿಸುವ ಅಥವಾ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಯಾವುದೇ ಷರತ್ತು ಅಥವಾ ಅಧಿನಿಯಮದ ಬಗ್ಗೆ ಏ.15ರಂದು ಹೊರಡಿಸಲಾದ ಕೋವಿಡ್-19 ಮಾರ್ಗಸೂಚಿಯಲ್ಲಿ ಉಲ್ಲೇಖವಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ.
ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಭಲ್ಲಾ ಎಲ್ಲಾ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳಿಗೆ ಗುರುವಾರ ಪತ್ರ ಬರೆದು ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಮಾರ್ಗ ಸೂಚಿಯ ಬಗ್ಗೆ ಯಾವುದೇ ಅನುಮಾನ ಅಥವಾ ಆತಂಕ ಬೇಡ. ಅಧಿಕಾರಿ ಗಳು ಈ ಮಾರ್ಗಸೂಚಿಗಳನ್ನು ದುರ್ಬಳಕೆ ಮಾಡಿಕೊಳ್ಳುವಂತಿಲ್ಲ. ಇದನ್ನು ಬಳಸಿಕೊಂಡು ಕಂಪನಿಗಳ ಆಡಳಿತ ಮಂಡಳಿಯ ಸದಸ್ಯರಿಗೆ ಯಾವುದೇ ರೀತಿಯ ಕಿರುಕುಳ ನೀಡುವಂತಿಲ್ಲ ಎಂದು ಪತ್ರದಲ್ಲಿ ಸ್ಪಷ್ಟಪಡಿಸಿದ್ದಾರೆ.