ಸ್ಪೀಕರ್‌ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ?


Team Udayavani, Jul 18, 2019, 3:10 AM IST

bjp-logo

ಬೆಂಗಳೂರು: ಸುಪ್ರೀಂಕೋರ್ಟ್‌ ಮಧ್ಯಂತರ ತೀರ್ಪಿನ ಬೆನ್ನಲ್ಲೇ ಬಿಜೆಪಿ ನಾಯಕರು ಸಕ್ರಿಯರಾಗಿದ್ದು, ಮುಖ್ಯಮಂತ್ರಿಗಳು ಬಹುಮತ ಸಾಬೀತುಪಡಿಸುವಲ್ಲಿ ವಿಫ‌ಲವಾದರೆ ಸ್ವಲ್ಪವೂ ತಡ ಮಾಡದೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಅವರು ಪ್ರಮಾಣ ವಚನ ಸ್ವೀಕರಿಸಿ ಸರ್ಕಾರ ರಚನೆಗೆ ಮುಂದಾಗಲು ಬಿಜೆಪಿ ನಿರ್ಧರಿಸಿದೆ.

ಜತೆಗೆ ಸ್ಪೀಕರ್‌ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆಗೆ ಪ್ರಸ್ತಾವ ಸಲ್ಲಿಸಲು ಬುಧವಾರ ಚರ್ಚಿಸಿದ್ದ ಬಿಜೆಪಿಯು ಅಗತ್ಯಬಿದ್ದರೆ ಗುರುವಾರ ಇಲ್ಲವೇ ಪರಿಸ್ಥಿತಿ ಅವಲೋಕಿಸಿ ಸೂಕ್ತ ಸಂದರ್ಭದಲ್ಲಿ ಸ್ಪೀಕರ್‌ ವಿರುದ್ಧವೂ ಅವಿಶ್ವಾಸ ನಿರ್ಣಯ ಮಂಡಿಸುವ ಆಯ್ಕೆಯನ್ನೂ ಇಟ್ಟುಕೊಂಡಿದೆ. ಆ ಮೂಲಕ ಸರ್ಕಾರ ರಚನೆಯ ಅವಕಾಶ ಯಾವ ರೀತಿಯಿಂದಲೂ ಕೈತಪ್ಪದಂತೆ ಎಚ್ಚರಿಕೆಯಿಂದ ಮುಂದುವರಿಯುವ ಕಾರ್ಯತಂತ್ರವನ್ನು ಕಮಲ ಪಾಳಯ ಹೆಣೆದಿದೆ.

ಕಾಂಗ್ರೆಸ್‌, ಜೆಡಿಎಸ್‌ನ 12 ಶಾಸಕರು ಜು.6ರಂದು ಏಕಕಾಲಕ್ಕೆ ರಾಜೀನಾಮೆ ನೀಡುತ್ತಿದ್ದಂತೆ ಮೈತ್ರಿ ಸರ್ಕಾರದ ಸಂಖ್ಯಾಬಲ ದಿಢೀರ್‌ ಇಳಿಕೆಯಾಗಿತ್ತು. ಆದರೆ ಶಾಸಕರ ರಾಜೀನಾಮೆ ಅಂಗೀಕಾರ ಇಲ್ಲವೇ ತಿರಸ್ಕಾರ ಹಾಗೂ ಅನರ್ಹತೆ ಕುರಿತಂತೆ ಸ್ಪೀಕರ್‌ ವಿಚಾರಣೆ ನಡೆಸಿದ ಬಳಿಕವಷ್ಟೇ ತೀರ್ಮಾನಿಸುವುದಾಗಿ ಪ್ರಕಟಿಸಿದರು.

ಆದರೆ ತ್ವರಿತವಾಗಿ ರಾಜೀನಾಮೆ ಅಂಗೀಕರಿಸುವಂತೆ ಅತೃಪ್ತ ಶಾಸಕರು ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ್ದರು. ಸುಪ್ರೀಂಕೋರ್ಟ್‌ ಬುಧವಾರ ನೀಡಿರುವ ಮಧ್ಯಂತರ ತೀರ್ಪಿನಿಂದ ರಾಜೀನಾಮೆ ಸಲ್ಲಿಸಿರುವ ಅತೃಪ್ತ ಶಾಸಕರು ನಿರಾಳರಾದಂತಿದ್ದಾರೆ. ಇನ್ನೊಂದೆಡೆ ಬಿಜೆಪಿ ನಾಯಕರಲ್ಲಿ ಆತ್ಮವಿಶ್ವಾಸ ಹೆಚ್ಚಾಗಿದ್ದು, ಸರ್ಕಾರ ರಚಿಸಿಯೇ ತೀರುವ ಉತ್ಸಾಹದಲ್ಲಿದ್ದಾರೆ.

ಗುರುವಾರ ಮುಖ್ಯಮಂತ್ರಿಗಳು ವಿಶ್ವಾಸ ಮತ ಯಾಚನೆಗೆ ಸಂಬಂಧಪಟ್ಟಂತೆ ಚರ್ಚೆ ಆರಂಭಿಸಲಿದ್ದಾರೆ. ಅವರ ಮಾತಿನ ಧಾಟಿ, ತೆಗೆದುಕೊಳ್ಳುವ ಸಮಯ ಇತರೆ ಅಂಶಗಳನ್ನು ಆಧರಿಸಿ ಬಿಜೆಪಿಯೂ ಚರ್ಚೆಯಲ್ಲಿ ಯಾವ ರೀತಿಯಲ್ಲಿ ಪಾಲ್ಗೊಳ್ಳಬೇಕೆಂಬ ಬಗ್ಗೆ ನಿರ್ಧರಿಸಲಿದೆ. ಮುಖ್ಯಮಂತ್ರಿಗಳು ಸುದೀರ್ಘ‌ವಾಗಿ ಗಂಟೆ ಗಟ್ಟಲೇ ಚರ್ಚೆಗೆ ಮುಂದಾದರೆ ಬಿಜೆಪಿ ವತಿಯಿಂದ ನಾಯಕರು ಚುಟುಕಾಗಿ ಮಾತನಾಡಿ ಚರ್ಚೆ ಮುಗಿಸಲು ಚಿಂತಿಸಿದ್ದಾರೆ.

ಇದೇ ಅಧಿವೇಶನದಲ್ಲಿ ಮುಖ್ಯಮಂತ್ರಿಗಳು ವಿಶ್ವಾಸ ಮತ ಯಾಚಿಸಬೇಕಿರುವ ಹಿನ್ನೆಲೆಯಲ್ಲಿ ಬಿಜೆಪಿಯು ತಾಳ್ಮೆಯಿಂದಲೇ ಕಲಾಪದಲ್ಲಿ ಪಾಲ್ಗೊಳ್ಳಲು ಚಿಂತಿಸಿದೆ. ಅತೃಪ್ತ ಶಾಸಕರು ಈವರೆಗೆ ತೋರಿದ ಧೋರಣೆಯನ್ನು ಇನ್ನು ಮುಂದೆ ಕೂಡ ಮುಂದುವರಿಸಿ ವಿಶ್ವಾಸಮತ ಯಾಚನೆ ಸಂದರ್ಭದಲ್ಲಿ ಕಲಾಪದಿಂದ ದೂರ ಉಳಿದರೆ ಸರ್ಕಾರಕ್ಕೆ ಬಹುಮತ ಸಾಬೀತುಪಡಿಸುವುದು ಅಸಾಧ್ಯವಾಗಲಿದೆ.

ತಕ್ಷಣವೇ ಪ್ರಮಾಣ ವಚನ ಸ್ವೀಕಾರ: ಬಹುಮತ ಸಾಬೀತುಪಡಿಸಲಾಗದೆ ಮೈತ್ರಿ ಸರ್ಕಾರ ಪತನವಾದರೆ ಸ್ವಲ್ಪವೂ ತಡ ಮಾಡದೆ ಬಿ.ಎಸ್‌.ಯಡಿಯೂರಪ್ಪ ಅವರು ರಾಜ್ಯಪಾಲರನ್ನು ಭೇಟಿಯಾಗಿ ಸರ್ಕಾರ ರಚನೆಗೆ ಅವಕಾಶ ಕೋರುವುದು, ಅವಕಾಶ ನೀಡಿದರೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿ ಕಾಲಮಿತಿಯಲ್ಲಿ ಬಹುಮತ ಸಾಬೀತುಪಡಿಸಲು ಅವಕಾಶ ಕೋರುವ ಬಗ್ಗೆ ಪಕ್ಷದ ವಲಯದಲ್ಲಿ ಚರ್ಚೆಯಾಗಿದೆ.

ಸ್ಪೀಕರ್‌ ವಿರುದ್ಧ ಅವಿಶ್ವಾಸ ನಿರ್ಣಯ: ಮೈತ್ರಿ ಸರ್ಕಾರ ಬಹುಮತ ಕಳೆದುಕೊಂಡಿರುವುದರಿಂದ ಸ್ಪೀಕರ್‌ ಕೂಡ ಆ ಸ್ಥಾನದಲ್ಲಿ ಮುಂದುವರಿಯುವುದು ಸೂಕ್ತವಲ್ಲ ಎಂಬುದು ಬಿಜೆಪಿ ವಾದ. ಹಾಗಾಗಿ ಮುಖ್ಯಮಂತ್ರಿಗಳು ರಾಜೀನಾಮೆ ನೀಡುತ್ತಿದ್ದಂತೆ ಸ್ಪೀಕರ್‌ ಕೂಡ ರಾಜೀನಾಮೆ ನೀಡಬೇಕೆಂಬ ನಿರೀಕ್ಷೆಯಲ್ಲಿದೆ. ಬುಧವಾರವೇ ಸ್ಪೀಕರ್‌ ವಿರುದ್ಧ ಅವಿಶ್ವಾಸ ನಿರ್ಣಯ ಪ್ರಸ್ತಾಪಕ್ಕೆ ಬಿಜೆಪಿ ಚಿಂತಿಸಿದರೂ ಆ ನಿಟ್ಟಿನಲ್ಲಿ ಮುಂದುವರಿದಿಲ್ಲ

ಗುರುವಾರ ಇಲ್ಲವೇ ಮುಂದಿನ ದಿನಗಳಲ್ಲಿ ಸ್ಪೀಕರ್‌ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿ ಬಳಿಕ ಹಂಗಾಮಿ ಸ್ಪೀಕರ್‌ ಆಯ್ಕೆ ನಂತರವಷ್ಟೇ ಮುಂದಿನ ಪ್ರಕ್ರಿಯೆ ನಡೆಯುವಂತೆ ನೋಡಿಕೊಳ್ಳುವುದು ಬಿಜೆಪಿಯ ಸದ್ಯದ ಕಾರ್ಯತಂತ್ರ. ಹಂಗಾಮಿ ಸ್ಪೀಕರ್‌ ನೇಮಕಗೊಂಡರೆ ಮುಂದಿನ ಪ್ರಕ್ರಿಯೆಗಳನ್ನು ಅವರು ಕೈಗೊಳ್ಳಲಿದ್ದು, ಸಹಜವಾಗಿಯೇ ಅದು ಬಿಜೆಪಿಗೆ ಪೂರಕವಾಗಿಯೂ ನಡೆದುಕೊಂಡರೆ ಅಚ್ಚರಿ ಇಲ್ಲ!

ಅತೃಪ್ತರ ಪರಿಸ್ಥಿತಿ ಆಧರಿಸಿ ಮುಂದಿನ ಕ್ರಮ: ಅತೃಪ್ತ ಶಾಸಕರು ರಾಜೀನಾಮೆ ನೀಡಿದ್ದು, ಅದನ್ನು ಸ್ಪೀಕರ್‌ ಅಂಗೀಕರಿಸುವ, ತಿರಸ್ಕರಿಸುವ ಇಲ್ಲವೇ ಅನರ್ಹತೆಗೊಳಿಸುವಂತೆ ಕೈಗೊಳ್ಳುವ ನಿರ್ಧಾರ ಆಧರಿಸಿ ಮುಂದಿನ ಹೆಜ್ಜೆ ಇಡಲು ಬಿಜೆಪಿ ತೀರ್ಮಾನಿಸಿದೆ. ರಾಜೀನಾಮೆ ಅಂಗೀಕಾರವಾದರೆ ಯಾವುದೇ ಸಮಸ್ಯೆ ಇಲ್ಲದೇ ಅತೃಪ್ತರ ನಿರೀಕ್ಷೆಗಳಿಗೆ ಬಿಜೆಪಿ ಮುಕ್ತವಾಗಿ ಸ್ಪಂದಿಸಬಹುದು. ಒಂದೊಮ್ಮೆ ರಾಜೀನಾಮೆ ತಿರಸ್ಕಾರವಾದರೆ ಇಲ್ಲವೇ ಅನರ್ಹಗೊಂಡರೆ ಆಗ ಯಾವ ರೀತಿಯಲ್ಲಿ ಸ್ಪಂದಿಸಿ ಮುಂದುವರಿಯ ಬೇಕು ಎಂಬ ಬಗ್ಗೆ ಹಿರಿಯ ನಾಯಕರು ತೀರ್ಮಾನಿಸಲಿದ್ದಾರೆ ಎಂದು ಮೂಲಗಳು ಹೇಳಿವೆ.

ಸುಪ್ರೀಂಕೋರ್ಟ್‌ ಬುಧವಾರ ನೀಡಿರುವ ಮಧ್ಯಂತರ ತೀರ್ಪಿನ ಪ್ರಕಾರ ಅತೃಪ್ತ ಶಾಸಕರಿಗೆ “ವಿಪ್‌’ ಅನ್ವಯವಾಗುವುದಿಲ್ಲ. ಹಾಗಾಗಿ ಮೈತ್ರಿ ಸರ್ಕಾರ ಏನೇ ಕಸರತ್ತು ನಡೆಸಿದರೂ ಬಹುಮತ ಸಾಬೀತುಪಡಿಸುವುದು ಕಷ್ಟ. ಈ ನಡುವೆ ಅಗತ್ಯಬಿದ್ದರೆ ಸ್ಪೀಕರ್‌ ವಿರುದ್ಧವೂ ಅವಿಶ್ವಾಸ ನಿರ್ಣಯ ಮಂಡನೆಗೆ ಪ್ರಯತ್ನ ನಡೆಸುವ ಅವಕಾಶವಿದ್ದು, ಹಂಗಾಮಿ ಸ್ಪೀಕರ್‌ ನೇಮಕಕ್ಕೆ ಒತ್ತಾಯಿಸಲಾಗುವುದು.
-ಡಾ.ವಾಮನ್‌ ಆಚಾರ್ಯ, ರಾಜ್ಯ ಬಿಜೆಪಿ ವಕ್ತಾರ

* ಎಂ. ಕೀರ್ತಿಪ್ರಸಾದ್‌

ಟಾಪ್ ನ್ಯೂಸ್

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.