ಸೌಹಾರ್ದ ಸಹಕಾರಿ ಪ್ರಾಥಮಿಕ ಸೊಸೈಟಿಗೆ ಹಸ್ತಕ್ಷೇಪ‌ ಮಾಡಲ್ಲ: ಕೃಷ್ಣಾ‌ ರೆಡ್ಡಿ


Team Udayavani, Nov 9, 2021, 12:39 PM IST

12bank

ಶಿರಸಿ: ಯಾವುದೇ ಕಾರಣಕ್ಕೂ ಪ್ರಾಥಮಿಕ ಪತ್ತಿನ ಸೇವಾ ಸಹಕಾರಿ ಸಂಘಗಳ ವ್ಯಾಪ್ತಿಯಲ್ಲಿ ಸೌಹಾರ್ದ ಸಹಕಾರಿ ಹಸ್ತ ಕ್ಷೇಪ‌ ಮಾಡುವುದಿಲ್ಲ ಎಂದು ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ರಾಜ್ಯ ಅಧ್ಯಕ್ಷ ಬಿ.ಎಚ್.ಕೃಷ್ಣ ರೆಡ್ಡಿ ಹೇಳಿದರು.

ಮಂಗಳವಾರ ನಗರದ ಮಧು ವನದಲ್ಲಿ ‌ಸುದ್ದಿಗೋಷ್ಡಿ ನಡೆಸಿ ಮಾತನಾಡಿ, ಸಹಕಾರಿ ಕ್ಷೇತ್ರಕ್ಕೆ ಇರುವ ಆದಾಯ ತೆರಿಗೆ ವಿನಾಯಿತಿ ವ್ಯಾಪ್ತಿಗೆ ಮಾತ್ರ ಸೌಹಾರ್ದ ಸಹಕಾರಿ ಸೇರಿದೆ. ಉಳಿದಂತೆ ಅವುಗಳ ಕಾರ್ಯ, ನಮ್ಮ ಕಾರ್ಯಗಳೇ ಬೇರೆ. ಸಹಕಾರ ಭಾರತಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯೂ ಆಗಿರುವುದರಿಂದ ಪ್ರಾಥಮಿಕ ಸಹಕಾರಿ, ಮಾರ್ಕೇಟಿಂಗ್ ಸಹಕಾರಿಗಳ ಸಮಸ್ಯೆ‌ ಕೂಡ ಕೇಂದ್ರ ಸಹಕಾರಿ ಸಚಿವ ಅಮಿತ್ ಶಾ ಅವರ ಬಳಿ‌ ಸಮಾಲೋಚನೆ ನಡೆಸುತ್ತೇವೆ. ಈಗಿರುವ ಗೊಂದಲ‌ ನಿವಾರಿಸಿ ಕೆಲಸ‌ ಮಾಡುವುದಾಗಿ ಹೇಳಿದರು.

ಪಂಜಾಬ್, ಮಹಾರಾಷ್ಟ್ರ ಸಹಕಾರ ಬ್ಯಾಂಕ್, ಶ್ರೀಗುರು ರಾಘವೇಂದ್ರ ಸಹಕಾರ ಬ್ಯಾಂಕ್ ಹಗರಣ ನಂತರ ರಾಜ್ಯದ ಸಹಕಾರ ಕ್ಷೇತ್ರದ ವಿಶ್ವಾಸದ ಕೊರತೆ ಎದುರಿಸುತ್ತಿದೆ. ಸಹಕಾರ ಕ್ಷೇತ್ರದ ವಿಶ್ವಾಸ ಮರು ಸ್ಥಾಪನೆ, ಠೇವಣಿದಾರರ ಹಿತರಕ್ಷಣೆಗೆ ಸೌಹಾರ್ದ ಸಹಕಾರ ಮಹತ್ವದ ಹೆಜ್ಜೆ ಇಟ್ಟಿದೆ ಎಂದು ವಿವರಿಸಿದ ಅವರು, ಸೌಹಾರ್ದ ಸಹಕಾರಿ ದೂರು ನೀಡಲು, ಹಾಗೂ ಹಣಕಾಸು ಅವ್ಯವಹಾರದಲ್ಲಿ ತೊಡಗಿದ ಸಂಸ್ಥೆಗಳ ಮೇಲೆ ಕಠಿಣ ಕ್ರಮ ಜಾರಿಗೊಳಿಸಲು ಉನ್ನತ ಅಧಿಕಾರಿಗಳ ವಿಶೇಷ ಕಾರ್ಯಪಡೆ ಜಾರಿಗೆ ತರಲಾಗಿದೆ ಎಂದೂ ವಿವರಿಸಿದರು‌.

ಇದನ್ನೂ ಓದಿ: ಬೆಳ್ತಂಗಡಿ: ಹಳ್ಳ ದಾಟುವ ವೇಳೆ ಕಾಲು ಜಾರಿ ನೀರಲ್ಲಿ ಮುಳುಗಿ ವ್ಯಕ್ತಿ ಸಾವು

ಆರಂಭಿಕ ಹಂತದಲ್ಲೇ ಸಹಕಾರಿ ಅವ್ಯವಹಾರ ತಡೆಗಟ್ಟಲು ಆರಂಭದಲ್ಲೇ ಪ್ರಯತ್ನ ಮಾಡಲಾಗುತ್ತದೆ. ಅದಕ್ಕಾಗಿ ಈ ವಿಶೇಷ ಟಾಸ್ಕ್ ಫೊರ್ಸ್ ಎಂದ ಅವರು, ಬೆಂಗಳೂರಿನ‌ ಕೇಂದ್ರ ಕಛೇರಿ‌ ಕಟ್ಟಡವನ್ನು ಕೇಂದ್ರ ಸಚಿವ ಅಮಿತ್ ಶಾ ಉದ್ಘಾಟಿಸಲು ಡಿಸೆಂಬರ್ ಗೆ ಬರಲಿದ್ದಾರೆ. ಕಲಬುರ್ಗಿ, ಬೆಳಗಾವಿಯಲ್ಲಿ ಸ್ವಂತ ಕಟ್ಟಡ ಆಗಿದ್ದು, ಮೈಸೂರಿನಲ್ಲೂ ಶೀಘ್ರ ಆಗಲಿದೆ ಎಂದರು.

ರಾಜ್ಯದಲ್ಲಿ 5300ಕ್ಕೂ ಹೆಚ್ಚು ಸೌಹಾರ್ದ ಸಹಕಾರಿ ಸಂಘಗಳು ಕೆಲಸ‌ ಮಾಡುತ್ತಿವೆ. 50 ಲಕ್ಷಕ್ಕೂ ಅಧಿಕ ಸದಸ್ಯರು ಇದ್ದಾರೆ‌. 60 ಸಾವಿರಕ್ಕೂ ಅಧಿಕ ಜನರಿಗೆ ಉದ್ಯೋಗ ಸಿಕ್ಕಿದೆ. 750 ಕೋಟಿ ರೂ.ಗಳ ಪಾಲು ಬಂಡವಾಳ, 15000 ಕೋಟಿ ರೂ. ಠೇವಣಿ, 100 ಕೋ.ರೂ.ನಿಧಿ, 230 ಕೋಟಿ ರೂ ಲಾಭ ಆಗಿದೆ‌. 1300ಕ್ಕೂ ಅಧಿಕ ಕೇಂದ್ರ ಗಳಲ್ಲಿ ಇ ಸ್ಟಾಂಪಿಂಗ್ ಸೇವೆ ಇದೆ ಎಂದರು.

ಈ ವೇಳೆ ರಾಜ್ಯ‌ ನಿರ್ದೇಶಕಿ ಸರಸ್ವತಿ ಎನ್.ರವಿ, ಸಹಕಾರ ಭಾರತಿ ರಾಜ್ಯ‌ ನಿರ್ದೇಶಕ ಶಂಭುಲಿಂಗ ಹೆಗಡೆ, ಸೌಹಾರ್ದ ಫೆಡರಲ್ ಜಿಲ್ಲಾ ಅಧ್ಯಕ್ಷ ‌ಪ್ರಮೋದ ಹೆಗಡೆ, ಕಾರ್ಯದರ್ಶಿ ಕೆ.ವಿ.ನಾಯ್ಕ ಇತರರು ಇದ್ದರು.

ಸಹಕಾರಿ ಭಾರತಿ, ಸೌಹಾರ್ದ ಸಹಕಾರಿ ಎರಡೂ ಬೇರೆ. ಇಲ್ಲಿ ಸಮ್ಮಿಶ್ರ‌ ಮಾಡುವುದಿಲ್ಲ. ಸಹಕಾರಿ ಭಾರತಿ‌ ಕೂಡ ರಾಜಕೀಯೇತರ ಸಂಸ್ಥೆ. -ಕೃಷ್ಣಾ ರೆಡ್ಡಿ,‌ ಅಧ್ಯಕ್ಷರು ಸೌಹಾರ್ದ ಸಹಕಾರಿ

ಟಾಪ್ ನ್ಯೂಸ್

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

1-weqwwqe

Joida Tragedy: ನದಿಗಿಳಿದ ಒಂದೇ ಕುಟುಂಬದ 6 ಮಂದಿ ಮೃತ್ಯು!

shiv Hebbar

BJP ಪರ ಪ್ರಚಾರಕ್ಕೆ ಹೋಗಲ್ಲ: ಶಾಸಕ ಶಿವರಾಮ್‌ ಹೆಬ್ಬಾರ್

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.