Home loan: ಗೃಹ ಸಾಲಕ್ಕೆ ಇನ್ನು ಫಿಕ್ಸೆಡ್‌ ಬಡ್ಡಿ- ಸಾಲಕ್ಕೆ ನಿರಖು ಬಡ್ಡಿದರ ಅವಕಾಶ

ಆರ್‌ಬಿಐ ತ್ತೈಮಾಸಿಕ ವಿತ್ತೀಯ ನೀತಿ ಸಭೆಯಲ್ಲಿ ನಿರ್ಣಯ

Team Udayavani, Aug 11, 2023, 6:35 AM IST

rbi

ಮುಂಬಯಿ: ವಾಹನ ಮತ್ತು ಗೃಹ ಸಾಲಗಳಿಗೆ ಕಾಲಾನುಕಾಲಕ್ಕೆ ಬದಲಾಗುವ (ಫ್ಲೋಟಿಂಗ್‌) ಬಡ್ಡಿ ದರದಿಂದ ನಿರಖು (ಫಿಕ್ಸೆಡ್‌) ಬಡ್ಡಿದರಕ್ಕೆ ಬದಲಾವಣೆ ಮಾಡಿಕೊಳ್ಳುವ ಆಯ್ಕೆಯನ್ನು ಗ್ರಾಹಕರಿಗೆ ಒದಗಿಸಬೇಕೆಂಬ ನಿಯಮವನ್ನು ಆರ್‌ಬಿಐ ವಿವಿಧ ಬ್ಯಾಂಕ್‌ಗಳಿಗೆ ವಿಧಿಸಿದೆ. ಈ ನಿಯಮ ಹಾಲಿ ಇರುವ ಮತ್ತು ಹೊಸತಾಗಿ ಪಡೆಯಲಿರುವ ಸಾಲಗಳಿಗೆ ಅನ್ವಯವಾಗಲಿದೆ.

ಮುಂಬಯಿಯಲ್ಲಿ ನಡೆದ ಮೂರು ದಿನಗಳ ದ್ವೆ„ಮಾಸಿಕ ವಿತ್ತೀಯ ನೀತಿ ಪರಿಶೀಲನ ಸಭೆಯ ಮುಕ್ತಾಯದ ಬಳಿಕ ಆರ್‌ಬಿಐ ಗವರ್ನರ್‌ ಶಕ್ತಿಕಾಂತ ದಾಸ್‌ ಈ ಮಾಹಿತಿ ನೀಡಿದ್ದಾರೆ. ಇದರ ಜತೆಗೆ ಪ್ರಸಕ್ತ ವಿತ್ತೀಯ ವಿರ್ಷದಲ್ಲಿ 3ನೇ ಬಾರಿಗೆ ರೆಪೋ ದರವನ್ನು ಯಥಾ ಸ್ಥಿತಿಯಲ್ಲಿ ಇರಿಸಲು ಕೂಡ ತೀರ್ಮಾನಿಸಲಾಗಿದೆ.

ಬ್ಯಾಂಕ್‌ಗಳಿಂದ ಸಾಲ ಪಡೆದುಕೊಂಡವರಿಗೆ ದೀರ್ಘ‌ಕಾಲದಿಂದ ಫ್ಲೋಟಿಂಗ್‌ ಬಡ್ಡಿ ದರದ ಸ್ಥಿತಿಗತಿಯ ಬಗ್ಗೆ ಸೂಕ್ತ ಮಾಹಿತಿ ರವಾನೆಯಾಗುತ್ತಿರಲಿಲ್ಲ. ಬ್ಯಾಂಕ್‌ಗಳು ಗ್ರಾಹಕರಿಂದ ಒಪ್ಪಿಗೆ ಪಡೆಯದೆ ಬಡ್ಡಿದರ ವಿಧಿಸುತ್ತಿವೆ ಎಂಬ ಬಗ್ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಶಕ್ತಿಕಾಂತ ದಾಸ್‌ ಹೇಳಿದ್ದಾರೆ.

ಅನುಕೂಲ ಹೇಗೆ?
ಮಾಹಿತಿ ನೀಡದೆ ಇರುವ ಅಂಶ ಪರಿಹರಿಸಲು ಸೂಕ್ತ ಕಾರ್ಯಸೂಚಿ ಹೊಂದಲು ತೀರ್ಮಾನಿಸಲಾಗಿದೆ. ಜತೆಗೆ ಸಾಲ ಪಡೆದುಕೊಂಡವರ ಅನುಕೂಲಕ್ಕಾಗಿ ಫಿಕ್ಸೆಡ್‌ ಬಡ್ಡಿದರ ಆಯ್ಕೆಗೆ ಅವಕಾಶ ಕಲ್ಪಿಸಲಾಗಿದೆ. ಬ್ಯಾಂಕ್‌ಗಳು ತಮ್ಮ ಗ್ರಾಹಕರಿಗೆ ಬಡ್ಡಿದರ ಮತ್ತು ಇಎಂಐ ಬಗ್ಗೆ ಸಮಗ್ರ ಮಾಹಿತಿ ನೀಡಬೇಕು. ಫಿಕ್ಸೆಡ್‌ ಬಡ್ಡಿದರಕ್ಕೆ ಬದಲಾಯಿಸಿಕೊಳ್ಳುವ ಬಗ್ಗೆ, ಶೀಘ್ರ ಸಾಲ ಮುಗಿಸುವ ಬಗ್ಗೆ, ಗ್ರಾಹಕರಿಗೆ ವಿಧಿಸಲಾಗಿರುವ ಎಲ್ಲ ರೀತಿಯ ಶುಲ್ಕಗಳ ಬಗ್ಗೆ ಪಾರದರ್ಶಕ ಮಾಹಿತಿ ನೀಡಬೇಕು ಎಂದು ಆರ್‌ಬಿಐ ಬ್ಯಾಂಕ್‌ಗಳಿಗೆ ಸೂಚಿಸಿದೆ.

ಮಿತಿ ಏರಿಕೆ
ಯುಪಿಐ ಲೈಟ್‌ ಮೂಲಕ ಆಫ್ಲೈನ್‌ ಆಗಿ ಮಾಡಬಹುದಾದ ಕನಿಷ್ಠ ಪಾವತಿ ಮಿತಿಯನ್ನು 200 ರೂ.ಗಳಿಂದ 500 ರೂ.ಗಳಿಗೆ ಹೆಚ್ಚಿಸಲಾಗಿದೆ. ಗರಿಷ್ಠ ಮಿತಿಯನ್ನು 2 ಸಾವಿರ ರೂ.ಗಳಿಗೆ ಏರಿಸಲಾಗಿದೆ. ಇದು ಸಣ್ಣ ಪ್ರಮಾಣದಲ್ಲಿ ಪಾವತಿ ಮಾಡುವವರಿಗೆ ಅನುಕೂಲ ಮಾಡಿಕೊಡಲಿದೆ. ಇದರಿಂದ ಡಿಜಿಟಲ್‌ ಪಾವತಿ ಕ್ಷೇತ್ರದಲ್ಲಿ ಇನ್ನಷ್ಟು ಪ್ರಗತಿ ಉಂಟಾಗುವ ಸಾಧ್ಯತೆಗಳು ಇವೆ. ಹಲವು ಕಾಲದಿಂದ ಕನಿಷ್ಠ ಮಿತಿ ಹೆಚ್ಚಿಸಬೇಕೆಂಬ ಬೇಡಿಕೆಯನ್ನು ಈಗ ಈಡೇರಿಸಲಾಗಿದೆ ಎಂದು ಆರ್‌ಬಿಐ ಗವರ್ನರ್‌ ಶಕ್ತಿಕಾಂತ ದಾಸ್‌ ಹೇಳಿದ್ದಾರೆ.

ಇದೇ ವೇಳೆ ದೇಶದ ಆರ್ಥಿಕ ಅಭಿವೃದ್ಧಿಯ ದರವನ್ನು ಪ್ರಸಕ್ತ ವಿತ್ತೀಯ ವರ್ಷಕ್ಕೆ ಸಂಬಂಧಿಸಿ ಶೇ. 6.5 ಎಂದು ಆರ್‌ಬಿಐ ನಿಗದಿ ಮಾಡಿದೆ.

 

ಟಾಪ್ ನ್ಯೂಸ್

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.