ಹಿಂದೂ ರಾಷ್ಟ್ರ ಮಾಡಲು ಸಂಚು ಅಗತ್ಯವಿಲ್ಲ:ಸಿ.ಟಿ.ರವಿ
Team Udayavani, Apr 4, 2019, 6:04 AM IST
ಬೆಂಗಳೂರು : ಭಾರತವನ್ನು ಹಿಂದೂ ರಾಷ್ಟ್ರವಾಗಿಸಲು ಸಂಚು ಮಾಡಬೇಕೆಂದಿಲ್ಲ. ಇಲ್ಲಿ ಬಹುಸಂಖ್ಯಾತರು ಹಿಂದೂಗಳೇ ಇರುವುದರಿಂದ ಇದು ಹಿಂದೂ ರಾಷ್ಟ್ರವೇ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರಿಗೆ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಟಾಂಗ್ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಗರು ಭಾರತವನ್ನು ಹಿಂದೂ ರಾಷ್ಟ್ರ ಮಾಡಲು ಹೊರಟಿದ್ದಾರೆ. ನಾವಿದನ್ನು ತಡೆದು, ಜಾತ್ಯಾತೀತ ರಾಷ್ಟ್ರ ಮಾಡಬೇಕು ಎಂದು ಎಚ್.ಡಿ.ದೇವೇಗೌಡರು ಹೇಳಿಕೆ ನೀಡಿದ್ದಾರೆ. ಆದರೆ, ನಾವ್ಯಾಕೆ ಭಾರತವನ್ನು ಹಿಂದೂ ರಾಷ್ಟ್ರ ಮಾಡಬೇಕು. ಇಲ್ಲಿ ಶೇ.80ಕಕ್ಕಿಂತಲು ಹೆಚ್ಚು ಹಿಂದುಗಳಿದ್ದಾರೆ. ಇದು ಹುಂದು ರಾಷ್ಟ್ರವೇ ಆಗಿದೆ. ಹೀಗಾಗಿ ಹಿಂದು ರಾಷ್ಟ್ರವಾಗಿ ಮಾಡಲು ಬಿಜೆಪಿಗರು ಸಂಚು ಮಾಡುವ ಅಗತ್ಯವಿಲ್ಲ ಎಂದು ಹೇಳಿದರು.
ದೇವೇಗೌಡರು ಒಂದೊಂದು ಬೀದಿಗೆ ಹೋದಾಗ ಅಲ್ಲಿ ಯಾವ ಸಮುದಾಯದವರಿದ್ದಾರೆ ಎಂಬುದನ್ನು ನೋಡಿಕೊಂಡು ಮಾತನಾಡುತ್ತಾರೆ. ಒಂದು ಬೀದಿಯಲ್ಲಿ ಶಿವನ ನೆನಪು, ಇನ್ನೊಂದು ಬೀದಿಯಲ್ಲಿ ಬೇರೆ ಧರ್ಮದ ದೇವರು ನೆನಪಾಗುತ್ತಾರೆ. ಭಾರತವನ್ನು ದುರ್ಬಲಗೊಳಿಸುವವರ ಜತೆ ಸೇರಿಕೊಂಡು ಹೀಗೆಲ್ಲಾ ಮಾತಾಡುತ್ತಿದ್ದಾರೆ. ದೇಶ ವಿಭಜನೆ ಹೇಗಾಯಿತು ಎಂಬುದಕ್ಕೆ ಉತ್ತರ ನೀಡುತ್ತಿರಾ ಎಂದು ಪ್ರಶ್ನಿಸಿದರು.
ಚುನಾವಣಾ ರಾಜಕೀಯ
ಮೈತ್ರಿ ಸರ್ಕಾರ ಚುನಾವಣಾ ರಾಜಕೀಯಕ್ಕಾಗಿ ಸಮಾಜಘಾತುಕ ಚಟುವಟಿಕೆಯಲ್ಲಿ ತೊಡಗಿಸಿಕೊಂಡವರ ಮೇಲಿದ್ದ 142 ಪ್ರಕರಣವನ್ನು ವಜಾ ಮಾಡಿದೆ. ದೇಶ ವಿರೋಧ ಚಟುವಟಿಕೆಯಲ್ಲಿ ಭಾಗಿಯಾದವರ ಮೇಲಿದ್ದ ಪ್ರಕರಣವನ್ನು ರದ್ದು ಮಾಡಿದ್ದು ಇನ್ನಷ್ಟು ಆಘಾತ ಸೃಷ್ಟಿಸಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ಕಾಂಗ್ರೆಸ್ ಯಾಕೆ ದಲಿತರಿಗೆ ಗ್ಯಾರಂಟಿ ನೀಡಲಿಲ್ಲ: ಛಲವಾದಿ ನಾರಾಯಣ ಸ್ವಾಮಿ
Pen Drive Case; ಪ್ರಜ್ವಲ್ ರೇವಣ್ಣ ವಿರುದ್ಧ ಲುಕ್ಔಟ್ ನೋಟಿಸ್ ಹೊರಡಿಸಿದ ಎಸ್ಐಟಿ
Lok Sabha Polls: ಮೋದಿ ಪ್ರಧಾನಿಯಾಗುವುದನ್ನು ತಡೆಯಲು ಸಾಧ್ಯವಿಲ್ಲ: ಬಿ.ವೈ. ರಾಘವೇಂದ್ರ
Lok Sabha Election: ಕಾಂಗ್ರೆಸ್ ಅಭ್ಯರ್ಥಿಗೆ ಸೋಲಿನ ಭೀತಿ: ಗಾಯತ್ರಿ ಸಿದ್ದೇಶ್ವರ
Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ
MUST WATCH
ಹೊಸ ಸೇರ್ಪಡೆ
Prajwal Revanna ವಿದೇಶಕ್ಕೆ ತೆರಳಲು ಕ್ಲಿಯರೆನ್ಸ್ ಕೇಳಿಲ್ಲ: ವಿದೇಶಾಂಗ ಸಚಿವಾಲಯ
ರೈತರಿಗೆ ತಂತ್ರಜ್ಞಾನದ ಕೊಡುಗೆ ಕೊಟ್ಟರೆ ಪ್ರಗತಿ ಸಾಧ್ಯ: ಹಂದೆ
UP; ಬ್ರಿಜ್ ಭೂಷಣ್ ಪುತ್ರನನ್ನು ಕಣಕ್ಕಿಳಿಸಿದ ಬಿಜೆಪಿ: ರಾಯ್ ಬರೇಲಿಯಿಂದ ಸಚಿವ
B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು
ಬಿಜೆಪಿ ಶಾಸಕ ಯತ್ನಾಳ ಶುಗರ್ ಫ್ಯಾಕ್ಟ್ರಿ ಹೆಂಗ್ ಕಟ್ಟಿದ್ರು: ಶಿವಾನಂದ ಪಾಟೀಲ