6 ತಿಂಗಳಲ್ಲಿ ಕೋವಿಡ್ ಪ್ರಕರಣ ದುಪ್ಪಟ್ಟು
ಈ ತಿಂಗಳ ಮೊದಲ ವಾರ ಜಾಗತಿಕ ಪ್ರಕರಣಗಳ ಸಂಖ್ಯೆ 20 ಕೋಟಿಗೇರಿಕೆ
Team Udayavani, Aug 14, 2021, 10:30 PM IST
ನವದೆಹಲಿ: ಜಗತ್ತಿಗೆ ಕೋವಿಡ್ ಸೋಂಕು ಪ್ರವೇಶ ಪಡೆದು 18 ತಿಂಗಳುಗಳೇ ಕಳೆದರೂ, ಪರಿಸ್ಥಿತಿ ನಿಯಂತ್ರಿಸಲು ಸಾಧ್ಯವಾಗಿಲ್ಲ. ಪ್ರಸಕ್ತ ತಿಂಗಳ ಮೊದಲ ವಾರದಲ್ಲಿ ಜಾಗತಿಕ ಕೋವಿಡ್ ಪ್ರಕರಣಗಳ ಸಂಖ್ಯೆ 20 ಕೋಟಿಗೇರಿದೆ. ವಿಶೇಷವೆಂದರೆ, ಕಳೆದ 6 ತಿಂಗಳಲ್ಲಿ ಸೋಂಕಿತರ ಸಂಖ್ಯೆ ದುಪ್ಪಟ್ಟಾಗಿ 20 ಕೋಟಿಗೆ ತಲುಪಿದೆ. ಇದಕ್ಕೆ ಕಾರಣ, ಕೋವಿಡ್ ಡೆಲ್ಟಾ ರೂಪಾಂತರಿ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ.
ಈ ವರ್ಷದ ಫೆಬ್ರವರಿಯಲ್ಲಿ ಭಾರತದಲ್ಲಿ ಈ ರೂಪಾಂತರಿ ಪತ್ತೆಯಾಗಿದ್ದು, ಈಗ 140ಕ್ಕೂ ಹೆಚ್ಚು ದೇಶಗಳಲ್ಲಿ ವ್ಯಾಪಿಸಿದೆ. ಅಮೆರಿಕದ ಒಟ್ಟಾರೆ ಪ್ರಕರಣಗಳ ಪೈಕಿ ಶೇ.96ರಷ್ಟು ಡೆಲ್ಟಾ ರೂಪಾಂತರಿಗೆ ಸಂಬಂಧಿಸಿದ್ದಾಗಿದ್ದರೆ, ಯುಕೆ, ರಷ್ಯಾ, ಇಂಡೋನೇಷ್ಯಾ, ಭಾರತದಲ್ಲಿ ಶೇ.100ರಷ್ಟು ಪ್ರಕರಣಗಳು ಇದೇ ರೂಪಾಂತರಿಯದ್ದು. ಇನ್ನು, ಬ್ರೆಜಿಲ್ನಲ್ಲಿ ಗಾಮಾ ರೂಪಾಂತರಿ ಸದ್ದು ಮಾಡುತ್ತಿದ್ದು, ಶೇ.75ರಷ್ಟು ಮಂದಿಗೆ ಈ ಸೋಂಕು ದೃಢಪಟ್ಟಿದೆ ಎಂದೂ ಸಂಸ್ಥೆ ತಿಳಿಸಿದೆ.
ಇದನ್ನೂ ಓದಿ:ಕೋವಿಡ್: ದಕ್ಷಿಣ ಕನ್ನಡದಲ್ಲಿ 411 ಸೇರಿ ರಾಜ್ಯದಲ್ಲಿಂದು 1632 ಪ್ರಕರಣಗಳು ಪತ್ತೆ
ಇದೇ ವೇಳೆ, ಭಾರತದಲ್ಲಿ ಶುಕ್ರವಾರದಿಂದ ಶನಿವಾರಕ್ಕೆ 38,667 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 478 ಮಂದಿ ಸಾವಿಗೀಡಾಗಿ ದ್ದಾರೆ. ಸತತ 48 ದಿನಗಳಿಂದಲೂ 50 ಸಾವಿರಕ್ಕಿಂತ ಕಡಿಮೆ ಪ್ರಕರಣಗಳು ದೃಢ ಪಡುತ್ತಿವೆ ಎಂದು ಕೇಂದ್ರ ಆರೋಗ್ಯ ಇಲಾಖೆ ಹೇಳಿದೆ.
ಪ್ರವೇಶಕ್ಕೆ ಷರತ್ತು:
ಇನ್ನು, ಪಂಜಾಬ್ನಲ್ಲಿ ಸೋಮವಾರದಿಂದ ಕೋವಿಡ್ ಲಸಿಕೆಯ ಎರಡೂ ಡೋಸ್ ಪಡೆದವರಿಗೆ ಮತ್ತು ಆರ್ಟಿ ಪಿಸಿಆರ್ ಪರೀಕ್ಷೆಯ ನೆಗೆಟಿವ್ ವರದಿ ಹೊಂದಿರುವವರಿಗೆ ಮಾತ್ರವೇ ಪ್ರವೇಶಕ್ಕೆ ಅನುಮತಿ ನೀಡುವುದಾಗಿ ಸರ್ಕಾರ ಘೋಷಿಸಿದೆ. ಜತೆಗೆ, ಹಿಮಾಚಲ ಪ್ರದೇಶ ಮತ್ತು ಜಮ್ಮುವಿನಿಂದ ಬರುವವರ ಮೇಲೆ ಹೆಚ್ಚಿನ ನಿಗಾ ಇಡಲಾಗುವುದು ಎಂದೂ ಸಿಎಂ ಕ್ಯಾ.ಅಮರೀಂದರ್ ಸಿಂಗ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!
Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್ ಮಧ್ವರಾಜ್