ಉತ್ತರ ಕರ್ನಾಟಕದಲ್ಲಿ ಮುಂದುವರಿದ ಮಳೆ! ಸಾವಿರಾರು ಎಕರೆ ಬೆಳೆ ಜಲಾವೃತ


Team Udayavani, Sep 27, 2020, 5:45 AM IST

ಉತ್ತರ ಕರ್ನಾಟಕದಲ್ಲಿ ಮುಂದುವರಿದ ಮಳೆ! ಸಾವಿರಾರು ಎಕರೆ ಬೆಳೆ ಜಲಾವೃತ

ಹುಬ್ಬಳ್ಳಿ: ಉತ್ತರ ಕರ್ನಾಟಕದ ಬಹುತೇಕ ಕಡೆ ಶುಕ್ರವಾರ ರಾತ್ರಿ ಬಳಿಕ ಭಾರೀ ಮಳೆಯಾಗಿದ್ದು, ನೂರಾರು ಮನೆಗಳು ಕುಸಿದು ಜನಜೀವನ ಅಸ್ತವ್ಯಸ್ತವಾಗಿದೆ. ಸಾವಿರಾರು ಎಕರೆ ಬೆಳೆ ಜಲಾವೃತವಾಗಿದೆ.

ಯಾದಗಿರಿ ಜಿಲ್ಲೆಯ ಗುರುಮಠಕಲ್‌ ತಾಲೂಕಿನ ಎಲ್ಲೆರಿ ಗ್ರಾಮದಲ್ಲಿ ಹಳ್ಳ ದಾಟುತ್ತಿದ್ದಾಗ ದ್ವಿಚಕ್ರ ವಾಹನವೊಂದು ನೀರಿನಲ್ಲಿ ಕೊಚ್ಚಿ ಹೋಗಿದ್ದು, ಸವಾರರನ್ನು ಗ್ರಾಮಸ್ಥರು ರಕ್ಷಿಸಿದ್ದಾರೆ. ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಒಂಟಗೋಡಿ ಬಳಿ ಬೈಕ್‌ ಸವಾರ, ಡಿಸಿಸಿ ಬ್ಯಾಂಕ್‌ ಮುಧೋಳ ಶಾಖೆಯ ನೌಕರ ಸಂತೋಷ ಅಡವಿ (27) ಅವರು ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ. ಬೆಳಗಾವಿ ಜಿಲ್ಲೆಯ ಗೋಕಾಕ ಬಳಿ ಲಾರಿಯೊಂದು ನೀರಿನಲ್ಲಿ ಕೊಚ್ಚಿಹೋಗಿದೆ.

ಕಲ್ಯಾಣ ಕರ್ನಾಟಕದಲ್ಲಿ ಜೋರು
ಕಲ್ಯಾಣ ಕರ್ನಾಟಕದ ಕೇಂದ್ರ ಸ್ಥಾನ ಕಲಬುರಗಿ ಜಿಲ್ಲೆಯಲ್ಲೂ ಭಾರೀ ಮಳೆಯಾಗಿದ್ದು, ಅಪಾರ ಹಾನಿ ಉಂಟಾಗಿದೆ. ಕಲಬುರಗಿ -ಸೇಡಂ ಮತ್ತು ಚಿಂಚೋಳಿ -ಬೀದರ್‌ ನಡುವಿನ ರಸ್ತೆ ಸಂಚಾರ ಕಡಿತವಾಗಿದೆ. ಸೇಡಂ ತಾಲೂಕಿನ ಕಾಗಿಣಾ ನದಿಯ ಮಳಖೇಡ ಬಳಿಯ ಸೇತುವೆ ಮುಳುಗಿದೆ.

ಗಡಿನಾಡು ಬೀದರ್‌ನ ಬಹುತೇಕ ತಾಲೂಕುಗಳು ಮಳೆಯಿಂದ ನಲುಗಿವೆ. ನೂರಾರು ಮನೆಗಳು ಕುಸಿದಿವೆ. ಎನಗುಂದಾ-ಚಿಂತಾಕಿ, ಕಮಲನಗರ- ತೋರಣಾ ಮತ್ತು ಬೆಳಕುಣಿ ಸೇತುವೆಗಳು ಮುಳುಗಡೆಯಾಗಿ ಹಲವು ಗ್ರಾಮಗಳಿಗೆ ಸಂಪರ್ಕ ಕಡಿತಗೊಂಡಿದೆ.

ರಾಯಚೂರು ಜಿಲ್ಲೆಯಲ್ಲೂ ಮಳೆ ಜೋರಾಗಿದೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ಗ್ರಾಮೀಣ ಭಾಗಳು ದ್ವೀಪದಂತಾಗಿವೆ. ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಹೆಚ್ಚು ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ನಾರಾಯಣಪುರ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದ್ದು, ಕೃಷ್ಣಾ ನದಿಗೆ 1.55 ಲಕ್ಷ ಕ್ಯೂಸೆಕ್‌ ನೀರು ಹರಿಸಲಾಗಿದೆ.

ಯಾದಗಿರಿ ಜಿಲ್ಲೆಯಲ್ಲೂ ಅಪಾರ ಹಾನಿಯಾಗಿದೆ. ಶಹಾಪುರ ತಾಲೂಕಿನ ಬೀರನೂರ ಹೋಬಳಿಯಲ್ಲಿ ರಾಜ್ಯದಲ್ಲಿಯೇ ದಾಖಲೆಯ 144 ಮಿ.ಮೀ. ಮಳೆಯಾಗಿದೆ.

ಬಾಗಲಕೋಟೆ, ಬೆಳಗಾವಿ, ಧಾರವಾಡ, ವಿಜಯಪುರ, ಗದಗ ಜಿಲ್ಲೆಯಲ್ಲೂ ಸತತ ಮಳೆಯಿಂದಾಗಿ ನೂರಾರು ಎಕರೆ ಬೆಳೆ ನಾಶವಾಗಿದ್ದು, ಹಲವೆಡೆ ರಸ್ತೆ ಸಂಪರ್ಕ ಕಡಿತ ಗೊಂಡಿದೆ. ಹಲವು ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಹಾವೇರಿ ಜಿಲ್ಲಾ ದ್ಯಂತ ಶನಿವಾರ ಜಿಟಿಜಿಟಿ ಮಳೆಯಾಗಿದೆ.

ಮಧ್ಯ ಕರ್ನಾಟಕದ ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ ಹಾಗೂ ಕಲ್ಯಾಣ ಕರ್ನಾಟಕದ ಬಳ್ಳಾರಿ, ಕೊಪ್ಪಳ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಿದೆ.

ಟಾಪ್ ನ್ಯೂಸ್

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.