Lok Sabha Polls; ಮಂಡ್ಯದಿಂದ ಸ್ಪರ್ಧಿಸೋದಿಲ್ಲ: ನಿಖಿಲ್ ಕುಮಾರಸ್ವಾಮಿ
Team Udayavani, Mar 20, 2024, 11:19 PM IST
ರಾಮನಗರ: ಮಂಡ್ಯದಿಂದ ನಾನು ಸ್ಪರ್ಧಿಸುವ ಪ್ರಶ್ನೆಯೇ ಇಲ್ಲ. ಕುಮಾರಸ್ವಾಮಿ ಅವರಿಗೆ ಆರೋಗ್ಯ ಸರಿ ಇಲ್ಲ. ಇನ್ನು 35 ದಿನ ಚುನಾವಣೆಗೆ ಸಮಯ ಇದೆ. ಮಂಡ್ಯ ಕ್ಷೇತ್ರಕ್ಕೆ ಇಬ್ಬರು ಅಭ್ಯರ್ಥಿಗಳ ಹೆಸರು ಕುಮಾರಸ್ವಾಮಿ ಅವರ ಮನಸ್ಸಿನಲ್ಲಿದೆ. ನಾವು ರಾಷ್ಟ್ರ ನಾಯಕರ ಅಭಿಪ್ರಾಯದ ಜತೆಗೆ ಸ್ಥಳೀಯ ಕಾರ್ಯಕರ್ತರ ಮಾತಿಗೂ ಮನ್ನಣೆ ನೀಡಬೇಕಾಗುತ್ತದೆ. ಎಲ್ಲವನ್ನೂ ಕ್ರೋಢೀಕರಿಸಿ ವರಿಷ್ಠರು ನಿರ್ಧಾರ ಕೈಗೊಳ್ಳುತ್ತಾರೆ ಎಂದು ಜೆಡಿಎಸ್ ನಾಯಕ ನಿಖಿಲ್ ಕುಮಾರಸ್ವಾಮಿ ತಿಳಿಸಿದರು.
ಸುಮಲತಾ ಅವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡುತ್ತೇವೆ. ಮೈತ್ರಿ ಧರ್ಮಕ್ಕೆ ನಮ್ಮ ಪಕ್ಷ ಬದ್ಧವಾಗಿದ್ದು, ಎರಡೂ ಪಕ್ಷದ ಮುಖಂಡರನ್ನು ಒಗ್ಗೂಡಿಸಿಕೊಂಡು ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸುತ್ತೇವೆ ಎಂದರು.
10 ಲಕ್ಷ ಕುಕ್ಕರ್ ಹಂಚಲು ಕೈ ಸಿದ್ಧತೆ: ನಿಖಿಲ್ ಆರೋಪ
ರಾಮನಗರ: ಕಾಂಗ್ರೆಸ್ ನವರು ಕಳೆದ 20 ದಿನಗಳಿಂದ ಮತದಾರರಿಗೆ ಗಿಫ್ಟ್ ಗಳನ್ನು ನೀಡುತ್ತಿದ್ದಾರೆ. ಹಾರೋಹಳ್ಳಿಯ ಸ್ಟೌವ್ ಕ್ರಾಪ್ಟ್ ಕಾರ್ಖಾನೆಯಲ್ಲಿ 10 ಲಕ್ಷ ಕುಕ್ಕರ್, ತವಾಗಳನ್ನು ಸಿದ್ಧಪಡಿಸಿದ್ದು, ಈ ಪೈಕಿ 5 ಲಕ್ಷ ಹಂಚಿಕೆಯಾಗಿವೆ. ಕ್ಷೇತ್ರದಲ್ಲಿ ಚುನಾವಣ ಅಕ್ರಮ ಯಾವ ರೀತಿ ನಡೆಯುತ್ತಿದೆ ಎಂಬುದಕ್ಕೆ ಇದು ಸಾಕ್ಷಿಯಾಗಿದೆ ಎಂದು ಜೆಡಿಎಸ್ ಯುವ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆರೋಪಿಸಿದರು.
ನಗರದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಜಿಲ್ಲೆಯಲ್ಲಿ ಮಂಗಳವಾರ ರಾತ್ರಿ ವಶಪಡಿಸಿಕೊಂಡಿರುವ ಸೀರೆಗಳು ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ಗೆ ಸೇರಿದ್ದಾಗಿದೆ. ನಗರದ ಗೋದಾಮಿನಲ್ಲಿ 3,600 ಸೀರೆ ಮತ್ತು ಚೂಡಿದಾರ್ಗಳನ್ನು ವಶಪಡಿಸಿಕೊಂಡಿದ್ದು, ಇವುಗಳನ್ನು ಸೂರತ್ನಿಂದ ಖರೀದಿಸಿದ್ದು. ಇದನ್ನು ಎ.ಎಂ. ಗ್ರಾನೈಟ್ ಕಂಪೆನಿ ಖರೀದಿ ಮಾಡಿರುವ ದಾಖಲೆಗಳು ಲಭ್ಯವಾಗಿವೆ. ಈ ಗ್ರಾನೈಟ್ ಕಂಪೆನಿಯ ಮಾಲಕರು ಇಕ್ಬಾಲ್ ಹುಸೇನ್ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್ ಶಾ
MUST WATCH
ಹೊಸ ಸೇರ್ಪಡೆ
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್