ಸಾಂಕ್ರಾಮಿಕ ರೋಗಗಳ‌ ಬಗ್ಗೆಯೂ ಇರಲಿ ಕಟ್ಟೆಚ್ಚರ

ಕೋವಿಡ್-19  ಸೋಂಕಿಗೆ ಸೀಮಿತವಾಗದಿರಲಿ ಸಮರ

Team Udayavani, Jun 9, 2020, 5:14 AM IST

ಸಾಂಕ್ರಾಮಿಕ ರೋಗಗಳ‌ ಬಗ್ಗೆಯೂ ಇರಲಿ ಕಟ್ಟೆಚ್ಚರ

ಉಡುಪಿ: ಮಳೆಗಾಲ ಆರಂಭಗೊಂಡಿದೆ. ಸಾಂಕ್ರಾಮಿಕ ರೋಗಗಳಾದ ಮಲೇರಿಯಾ, ಡೆಂಗ್ಯೂ ಹಾವಳಿ ಈ ಸಮಯದಲ್ಲಿ ಹೆಚ್ಚು ಕಾಡುತ್ತದೆ. ಸಾಂಕ್ರಾಮಿಕ ರೋಗ ಬಾರದಂತೆ ಮುನ್ನೆಚ್ಚರಿಕೆ ಕ್ರಮ ಅನುಸರಿಸುವುದರಿಂದ ಈ ರೋಗದ‌ ಹಾವಳಿ ತಡೆಯಬಹುದು.ಜೂನ್‌ನಿಂದ ನವೆಂಬರ್‌ವರೆಗೆ ಮಲೇರಿಯಾ, ಡೆಂಗ್ಯೂ ಅತಿ ಹೆಚ್ಚು ಬಾಧಿ ಸುವ ಸಮಯವಾಗಿದೆ.

ಮುಂಜಾಗ್ರತೆ ಅಗತ್ಯ
ಮಳೆಗಾಲದಲ್ಲಿ ಹರಡುವ ಇತರ ಸಾಂಕ್ರಾಮಿಕ ರೋಗಗಳು ತಗಲದಂತೆ ಮುನ್ನೆಚ್ಚರಿಕೆ ವಹಿಸಿ ಮುಂಜಾಗ್ರತಾ ಕ್ರಮ ಅನುಸರಿಸುವುದು ಅತ್ಯಗತ್ಯ.

ಪರಿಸರ ಸ್ವಚ್ಛವಾಗಿಟ್ಟು ಕೊಳ್ಳಿ
ನಮ್ಮ ಸುತ್ತಮುತ್ತಲ ಪರಿಸರ ಸ್ವಚ್ಛವಾಗಿರಲಿ, ಮುಚ್ಚಳವಿಲ್ಲದ ಒವರ್‌ಹೆಡ್‌, ಸಿಮೆಂಟ್‌ ಟ್ಯಾಂಕ್‌ಗಳು, ತೆಂಗಿನ ಚಿಪ್ಪು, ಕುಡಿದು ಬಿಸಾಡಿದ ಎಳನೀರು ಚಿಪ್ಪು, ಮನೆಯ ಸುತ್ತಮುತ್ತ ಎಸೆದ ಪ್ಲಾಸ್ಟಿಕ್‌, ಟಯರ್‌ ಸಹಿತ ನೀರುನಿಲ್ಲುವ ಅವಕಾಶವಿರುವ ಎಲ್ಲ ಪರಿಕರ ಗಳು ಸೊಳ್ಳೆಗಳ ಉತ್ಪತ್ತಿ ತಾಣಗಳು. ಮನೆ, ಪರಿಸರದಲ್ಲಿ ಸೊಳ್ಳೆಗಳ ಉತ್ಪತ್ತಿಗೆ ಅವಕಾಶವಾಗದಂತೆ ಎಚ್ಚರ ವಹಿಸುವುದು ಅಗತ್ಯ.

ವೈದ್ಯರ ಸಲಹೆ ಪಡೆಯಿರಿ
ಜ್ವರ ಯಾವುದೇ ಇರಲಿ. ರಕ್ಷ ಪರೀಕ್ಷೆ ಮಾಡಿಸಿಕೊಳ್ಳುವ ಮೂಲಕ ಖಾತ್ರಿ ಪಡಿಸಿಕೊಳ್ಳುವುದು ಒಳ್ಳೆಯದು. ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಸರಕಾರಿ ಆಸ್ಪತ್ರೆಗಳಲ್ಲಿ ರಕ್ತ ತಪಾಸಣೆಯನ್ನು ಮಾಡಿಸಿಕೊಳ್ಳಬಹುದು.

ಸೊಳ್ಳೆಗಳಿಂದ ರಕ್ಷಣೆ ಹೇಗೆ?
ಡೆಂಗ್ಯೂ ಹರಡುವ ಈಡಿಸ್‌ ಸೊಳ್ಳೆಗಳು ಸಾಮಾನ್ಯವಾಗಿ ಹಗಲಿನಲ್ಲಿ ಕಚ್ಚುತ್ತವೆ. ಮಲೇರಿಯಾ ಹರಡುವ ಅನಾಫೆಲಿಸ್‌ ಸೊಳ್ಳೆ ರಾತ್ರಿ ಸಮಯದಲ್ಲಿ ಕಚ್ಚುತ್ತದೆ. ಹೀಗಾಗಿ ಸೊಳ್ಳೆಗ ಳಿಂದ ನಮ್ಮನ್ನು ರಕ್ಷಿಸಿ ಕೊಳ್ಳಲು ಕೆಲವು ಕ್ರಮ ಪಾಲಿಸು ವುದು ಅಗತ್ಯ. ಸಂಜೆ ಹೊತ್ತು ಕಿಟಿಕಿ ಬಾಗಿಲುಗಳನ್ನು ಭದ್ರವಾಗಿ ಮುಚ್ಚುವುದು ಅಥವಾ ಜಾಲರಿಗಳನ್ನು ಅಳವಡಿಸುವುದು, ಔಷಧ ಲೇಪನ ಮುಂತಾದ ಕ್ರಮಗಳನ್ನು ಅನುಸರಿಸುವ ಮೂಲಕ ಸೊಳ್ಳೆಗಳಿಂದ ರಕ್ಷಣೆ ಪಡೆಯಬಹುದು. ಮನೆಯ ಸುತ್ತ ಫಾಗಿಂಗ್‌ ಮಾಡಿಸುವುದು, ಸೊಳ್ಳೆ ನಿರೋಧಕ ಔಷಧ ಸಿಂಪಡಣೆ, ಸೊಳ್ಳೆ ಪರದೆಗಳ ಬಳಕೆ ಮಾಡುವುದು ಒಳಿತು.

ಇದನ್ನೆಲ್ಲ ಈಗಲೇ ಮಾಡಿ
ಓವರ್‌ಹೆಡ್‌ ಟ್ಯಾಂಕ್‌, ಸಿಮೆಂಟ್‌ ಟ್ಯಾಂಕ್‌ಗಳನ್ನು ಭದ್ರವಾಗಿ ಮುಚ್ಚಿಡಿ. ಮನೆ ಸುತ್ತ ಎಸೆದ ಪ್ಲಾಸ್ಟಿಕ್‌, ಟಯರ್‌, ತೆಂಗಿನ ಚಿಪ್ಪು ಗಳನ್ನು ತತ್‌ಕ್ಷಣ ವಿಲೇವಾರಿ ಮಾಡಿ, ಪಾತ್ರೆಗಳನ್ನು ಕವುಚಿ ಹಾಕಬೇಕು.ಮನೆ ಒಳಗೆ, ಹೊರಗೆ ಇರುವ ಹೂವಿನ ಕುಂಡ, ಮನಿಪ್ಲಾಂಟ್‌ ಚಟ್ಟಿಗಳು, ಏರ್‌ಕೂಲರ್‌ಗಳಲ್ಲೂ ಸೊಳ್ಳೆಗಳು ಉತ್ಪತ್ತಿಯಾಗುತ್ತವೆ. ಹೀಗಾಗಿ ಇವುಗಳ ನೀರನ್ನು ಪ್ರತಿ ವಾರ ಖಾಲಿ ಮಾಡುತ್ತಿರಬೇಕು.

ಮನೆ ಮನೆಗೆ ತೆರಳಿ ಜಾಗೃತಿ
ಆರೋಗ್ಯ ಇಲಾಖೆಯಿಂದ ಜಿಲ್ಲೆಯಲ್ಲಿ ಮಲೇರಿಯಾ ಸಹಿತ ಸಾಂಕ್ರಾಮಿಕ ರೋಗಗಳ ಬಗ್ಗೆ ಮನೆ-ಮನೆಗೆ ತೆರಳಿ ಜಾಗೃತಿ ಮೂಡಿಸಲಾಗುತ್ತಿದೆ. ರೋಗ ಲಕ್ಷಣಗಳು ಕಂಡುಬಂದಲ್ಲಿ ಪ್ರಾ. ಆರೋಗ್ಯ ಕೇಂದ್ರಗಳಲ್ಲಿ ಉಚಿತ ರಕ್ತ ತಪಾಸಣೆ ಮಾಡಿಸಿಕೊಳ್ಳಬೇಕು.
– ಡಾ| ಪ್ರಶಾಂತ್‌, ಜಿಲ್ಲಾ ಮಲೇರಿಯಾ ಅಧಿಕಾರಿ

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

10-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.