ಮೃತರ ಡಿಎನ್ಎ ನಡೆಸಿ ಹಸ್ತಾಂತರಕ್ಕೆ ಸೂಚನೆ
ತುಮಕೂರಿನಲ್ಲಿ ಕೊಲೆಯಾದವರ ಮನೆಗೆ ವಿಧಾನ ಸಭಾಪತಿ ಖಾದರ್ ಭೇಟಿ
Team Udayavani, Mar 26, 2024, 1:08 AM IST
ಬೆಳ್ತಂಗಡಿ: ತುಮಕೂರಿನಲ್ಲಿ ಅಮಾನುಷವಾಗಿ ಮೂವರನ್ನು ಕೊಲ್ಲಲ್ಪಟ್ಟ ಬೆಳ್ತಂಗಡಿ ತಾಲೂಕಿನ ನಿವಾಸಿಗಳ ಮನೆಗೆ ಸೋಮವಾರ ಸಭಾಪತಿ ಯು.ಟಿ.ಖಾದರ್ ಭೇಟಿ ನೀಡಿ ಸಾಂತ್ವನ ಹೇಳಿದರು.
ಈ ಸಂದರ್ಭ ಅವರು ಮಾತನಾಡಿ, ಅಪರಾಧಿಗಳಿಗೆ ಕಠಿನ ಶಿಕ್ಷೆ ನೀಡುವಲ್ಲಿ ಸಂಬಂಧಪಟ್ಟ ಉನ್ನತ ಪೊಲೀಸ್ ಅಧಿಕಾರಿಗಳ ಬಳಿ ಮಾತಾಡಿದ್ದೇನೆ, ಮೃತ ಶರೀರಗಳ ಡಿಎನ್ಎ ಪರೀಕ್ಷೆ ಮಾಡಿಸಿ ತ್ವರಿತವಾಗಿ ಕುಟುಂಬಕ್ಕೆ ಒಪ್ಪಿಸಲು ತುಮಕೂರು ಎಸ್ಪಿಗೆ ಸೂಚಿಸಿದ್ದೇನೆ ಎಂದು ಹೇಳಿದರು.
ನೊಂದ ಕುಟುಂಬಗಳಿಗೆ ಸರಕಾರದ ವತಿಯಿಂದ ನ್ಯಾಯ ಸಿಗುವಂತೆ ಎಲ್ಲ ಪ್ರಯತ್ನಗಳು ಮಾಡಲಾಗುವುದು ಮತ್ತು ಯುವಕರು ಇಂತಹ ಮೋಸಕ್ಕೆ ಬಲಿಬೀಳಬಾರದು ಎಂದು ಅವರು ಹೇಳಿದರು.
ಪ್ರಕರಣಕ್ಕೆ ಸಂಬಂಧಿಸಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ತುಮಕೂರಿಗೆ ಹೋಗಿ ಅಲ್ಲಿಯ ಎಸ್ಪಿಯನ್ನು ಮಾತನಾಡಿಸಿ, ಅನಂತರ ಗೃಹ ಮಂತ್ರಿಯನ್ನು ಭೇಟಿ ಮಾಡಿ ಪ್ರಕರಣದಲ್ಲಿ ಭಾಗಿಯಾದ ಎಲ್ಲರನ್ನು ಬಂಧಿಸಬೇಕೆಂದು ಮನವಿ ಮಾಡಿದ್ದಾರೆ ಎಂದು ಖಾದರ್ ತಿಳಿಸಿದರು.
ಈ ಸಂದರ್ಭ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾಕ ಘಟಕದ ಅಧ್ಯಕ್ಷ ಸಾಹುಲ್ ಹಮೀದ್, ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಘಟಕದ ಅಧ್ಯಕ್ಷ ನಾಗೇಶ್ ಕುಮಾರ್ ಗೌಡ, ಜಿ.ಪಂ. ಮಾಜಿ ಉಪಾಧ್ಯಕ್ಷ ಧರಣೇಂದ್ರ ಕುಮಾರ್, ಪ್ರಮುಖರಾದ ಹಕೀಮ್ ಕೊಕ್ಕಡ, ಜೈಸನ್ ಪಟ್ಟೇರಿಲ್, ಪ್ರವೀಣ್ ಫೆರ್ನಾಂಡಿಸ್, ಇಸ್ಮಾಯಿಲ್ ಕೆ. ಪೆರಿಂಜೆ, ಕರೀಂ ಗೇರುಕಟ್ಟೆ, ಹನೀಫ್ ಉಜಿರೆ, ಅಯೂಬ್ ಕಾಣಿಯೂರು, ರಾಜಶೇಖರ್ ಶೆಟ್ಟಿ ಮಡಂತ್ಯಾರು, ಅಶ್ರಫ್ ನೆರಿಯ, ಅಬ್ಬೊನು ಮದ್ದಡ್ಕ, ಸೇಕುಞ ಬೆಳ್ತಂಗಡಿ, ಬಿ.ಎಂ.ಹಮೀದ್ ಉಜಿರೆ, ಯು.ಹಮೀದ್ ಉಜಿರೆ, ಸುನಿಲ್ ಜೈನ್, ಸಂದೀಪ್ ನೀರಲ್ಕೆ ಮತ್ತು ಗಣ್ಯರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು
Road Mishap;ಅರಂತೋಡು: ಕಾರು – ಬೈಕ್ ಢಿಕ್ಕಿ: ಸವಾರ ಸಾವು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
MUST WATCH
ಹೊಸ ಸೇರ್ಪಡೆ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ