Karnataka: ಸಸ್ಯ ಶ್ಯಾಮಲಾ ಅನುಷ್ಠಾನಕ್ಕೆ ಸೂಚನೆ
Team Udayavani, Sep 9, 2023, 11:07 PM IST
ಬೆಂಗಳೂರು: ಸರಕಾರಿ ಪ್ರಾಥಮಿಕ, ಪ್ರೌಢ ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳ ಆವರಣದ ಸುತ್ತಮುತ್ತ ಇರುವ ಸ್ಥಳಗಳಲ್ಲಿ ಹಾಗೂ ಈ ಶಾಲಾ ಕಾಲೇಜುಗಳಿಗೆ ಸೇರಿದ ಸ್ಥಳಗಳಲ್ಲಿ ವಿದ್ಯಾರ್ಥಿಗಳಿಂದ ಶ್ರಮದಾನದ ಮೂಲಕ ಗಿಡ ನೆಟ್ಟು, ಪೋಷಿಸುವ “ಸಸ್ಯ ಶ್ಯಾಮಲಾ’ ಯೋಜನೆಯನ್ನು ಅನುಷ್ಠಾನಗೊಳಿಸುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆ ಸೂಚನೆ ನೀಡಿದೆ.
ಯೋಜನೆಯನ್ನು ಜಾರಿಗೊಳಿಸಲು ಅರಣ್ಯ ಇಲಾಖೆ ಉಚಿತವಾಗಿ ಪರಿಸರಕ್ಕೆ ಉಪಯುಕ್ತವಾಗುವಂತ ಸಸಿಗಳನ್ನು ಉಚಿತವಾಗಿ ಒದಗಿಸಲಿದೆ. ಗಿಡವನ್ನು ನೆಟ್ಟು ಪೋಷಿಸುವ ಜವಾಬ್ದಾರಿಯನ್ನು ವಿದ್ಯಾರ್ಥಿಗಳು, ಶಿಕ್ಷಕರು, ಎಸ್ಡಿಎಂಸಿ ಸದಸ್ಯರು, ಸ್ಥಳೀಯ ಸಂಸ್ಥೆ ಜನಪ್ರತಿನಿಧಿಗಳು, ಸ್ವಯಂ ಸೇವಾ ಸಂಸ್ಥೆಗಳು ಮತ್ತು ಗ್ರಾಮಗಳ ಅರಣ್ಯ ಸಮಿತಿ ವಹಿಸಿಕೊಳ್ಳಬೇಕಿದೆ. ಅರಣ್ಯ ಇಲಾಖೆಯು ಸಸಿಗಳನ್ನು ನೆಡಲು ಎರಡು ಸಸಿಗಳ ನಡುವೇ ಕನಿಷ್ಠ 5 ಮೀಟರ್ಗಳ ಅಂತರ ಇರಬೇಕು, ಕಟ್ಟಡ, ಆವರಣ ಗೋಡೆಗಳಿಂದ 5 ಮೀಟರ್ ದೂರದಲ್ಲಿ ಗಿಡ ನೆಡಬೇಕು, ಕಟ್ಟಡ ಕಾಮಗಾರಿಗೆ ಗುರುತಿಸಲಾದ ಸ್ಥಳಗಳಲ್ಲಿ ಗಿಡ ನೆಡುವಂತಿಲ್ಲ ಎಂಬ ಮಾರ್ಗಸೂಚಿ ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ
Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್ ಹೇಳಿಕೆ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…
Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ
Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್ಗೆ ಗೆಲುವು: ಮುನಿಯಪ್ಪ ವಿಶ್ವಾಸ
MUST WATCH
ಹೊಸ ಸೇರ್ಪಡೆ
Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್ಗೆ 48 ಗಂಟೆ ಪ್ರಚಾರ ನಿಷೇಧ
Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ
Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್ ಹೇಳಿಕೆ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…
Kollywood: ದಳಪತಿ ವಿಜಯ್ ʼGOATʼ ಸಿನಿಮಾದಲ್ಲಿ ಧೋನಿ, ರುತ್ ರಾಜ್ ನಟನೆ?