Notice: ತಂಬಾಕು ಉತ್ಪನ್ನಗಳಿಗೆ ರಾಯಭಾರ- ಶಾರುಖ್, ಅಕ್ಷಯ್, ದೇವಗನ್ಗೆ ನೋಟಿಸ್
ಅಲಹಾಬಾದ್ ಹೈಕೋರ್ಟ್ಗೆ ಕೇಂದ್ರದ ಅರಿಕೆ
Team Udayavani, Dec 10, 2023, 10:05 PM IST
ಅಲಹಾಬಾದ್/ನವದೆಹಲಿ: ಆರೋಗ್ಯಕ್ಕೆ ಹಾನಿಕರವಾದ ತಂಬಾಕು ಉತ್ಪನ್ನಗಳಿಗೆ ಜಾಹೀರಾತು ನೀಡುವುದನ್ನು ಮುಂದುವರಿಸಿರುವ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್, ಅಕ್ಷಯ್ ಕುಮಾರ್ಗೆ ಅ.20ರಂದೇ ನೋಟಿಸ್ ನೀಡಲಾಗಿದೆ ಎಂದು ಕೇಂದ್ರ ಸರ್ಕಾರ ಅಲಹಾಬಾದ್ ಹೈಕೋರ್ಟ್ನ ಲಕ್ನೋ ಪೀಠಕ್ಕೆ ಅರಿಕೆ ಮಾಡಿದೆ.
ಪದ್ಮ ಪ್ರಶಸ್ತಿ ಪುರಸ್ಕೃತ ನಟರು ಸಾರ್ವಜನಿಕರ ಆರೋಗ್ಯಕ್ಕೆ ಹಾನಿಕರವಾದ ಉತ್ಪನ್ನಗಳಿಗೆ ಜಾಹೀರಾತು ನೀಡುತ್ತಿದ್ದಾರೆ, ಅದನ್ನು ನಿಲ್ಲಿಸಬೇಕು ಎಂದು ವಕೀಲ ಮೋತಿಲಾಲ್ ಹೈಕೋರ್ಟ್ಗೆ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದರು. ಈ ಬಗ್ಗೆ ಆದೇಶವಿದ್ದರೂ ಸರ್ಕಾರ ಅದನ್ನು ಪಾಲಿಸಿಲ್ಲ ಎಂದು ದೂರಿದ್ದರು. ಆ ಅರ್ಜಿಯ ವಿಚಾರಣೆ ಲಕ್ನೋ ಪೀಠದ ಮುಂದೆ ವಿಚಾರಣೆ ನಡೆದಿತ್ತು. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ಸರ್ಕಾರ ನಟರಿಗೆ ನೋಟಿಸ್ ನೀಡಲಾಗಿದೆ ಎಂದು ಹೇಳಿತು. ದೇಶದಲ್ಲಿ ಭಾರತದಲ್ಲಿ ತಂಬಾಕು ಉತ್ಪನ್ನಗಳಿಗೆ ಜಾಹೀರಾತು ನೀಡುವುದಕ್ಕೆ ನಿಷೇಧವಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್ಗೆ 48 ಗಂಟೆ ಪ್ರಚಾರ ನಿಷೇಧ
Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್ ಮೈಂಡ್; ಗೋಲ್ಡಿ ಬ್ರಾರ್ ಶೂಟೌಟ್ – ವರದಿ
ಸಲ್ಮಾನ್ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ
Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
MUST WATCH
ಹೊಸ ಸೇರ್ಪಡೆ
Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ
Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್ಗೆ 48 ಗಂಟೆ ಪ್ರಚಾರ ನಿಷೇಧ
Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ
Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್ ಹೇಳಿಕೆ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…