“ಲೋಕಲ್‌ ಫೈಟ್‌’ಗೆ ಇಂದು ಅಧಿಸೂಚನೆ ಪ್ರಕಟ


Team Udayavani, May 9, 2019, 3:04 AM IST

local

ಬೆಂಗಳೂರು: ಮೇ 29ರಂದು ಮತದಾನ ನಡೆಯಲಿರುವ ರಾಜ್ಯದ 63 ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಗುರುವಾರ ಅಧಿಕೃತವಾಗಿ ಅಧಿಸೂಚನೆ ಹೊರಬೀಳಲಿದ್ದು, ಆಯಾ ಜಿಲ್ಲಾಧಿಕಾರಿಗಳು ಅಧಿಸೂಚನೆ ಹೊರಡಿಸಲಿದ್ದಾರೆ.

ಅದರಂತೆ ಮೇ 9ರಿಂದಲೇ ಎಲ್ಲಾ ಕಡೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭಗೊಳ್ಳಲಿದೆ. 2019ರ ಮಾರ್ಚ್‌ ಹಾಗೂ ಜುಲೈನಲ್ಲಿ ಅವಧಿ ಪೂರ್ಣಗೊಳ್ಳಲಿರುವ ರಾಜ್ಯದ 103 ನಗರ ಸ್ಥಳೀಯ ಸಂಸ್ಥೆಗಳ ಪೈಕಿ ನ್ಯಾಯಾಲಯದಲ್ಲಿ ಅರ್ಜಿ ವಿಚಾರಣೆ ಬಾಕಿ ಇರುವ 39 ನಗರ ಸ್ಥಳೀಯ ಸಂಸ್ಥೆಗಳನ್ನು ಹೊರತುಪಡಿಸಿ, ಉಳಿದ 63 ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ರಾಜ್ಯ ಚುನಾವಣಾ ಆಯೋಗ ಮೇ 2ರಂದು ವೇಳಾಪಟ್ಟಿ ಪ್ರಕಟಿಸಿತ್ತು.

ರಾಜ್ಯದ 22 ಜಿಲ್ಲೆಗಳಲ್ಲಿ 8 ನಗರಸಭೆ, 33 ಪುರಸಭೆ ಹಾಗೂ 22 ಪಟ್ಟಣ ಪಂಚಾಯಿತಿಗಳು ಸೇರಿ ಒಟ್ಟು 63 ನಗರ ಸ್ಥಳೀಯ ಸಂಸ್ಥೆಗಳ 1,361 ವಾರ್ಡ್‌ಗಳಲ್ಲಿ ಚುನಾವಣೆ ನಡೆಯಲಿದೆ. ಇದರ ಜೊತೆಗೆ ಬಿಬಿಎಂಪಿಯ ಎರಡು ವಾರ್ಡ್‌, ತುಮಕೂರು ಮಹಾನಗರ ಪಾಲಿಕೆ, ಬೆಂಗಳೂರು ನಗರ ಜಿಲ್ಲೆಯ ಹೆಬ್ಬಗೋಡಿ ನಗರಸಭೆ, ಬೆಳಗಾವಿ ಜಿಲ್ಲೆಯ ಸದಲಗಾ ಪುರಸಭೆ ಮತ್ತು ಮುಗಳಖೋಡ ಪುರಸಭೆಯ ಒಂದೊಂದು ವಾರ್ಡ್‌ಗೆ ಉಪ ಚುನಾವಣೆ ನಡೆಯಲಿದೆ.

ಮೇ 29ಕ್ಕೆ ಮತದಾನ: ಮೇ 29ರಂದು ಮತದಾನ ನಡೆಯಲಿದ್ದು, ನಾಮಪತ್ರ ಸಲ್ಲಿಸಲು ಮೇ 16 ಕೊನೆ ದಿನ. ಮೇ 17ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ನಾಮಪತ್ರ ವಾಪಸ್‌ ಪಡೆದುಕೊಳ್ಳಲು ಮೇ 20 ಕೊನೆ ದಿನ. ಮೇ 31ರಂದು ಮತಗಳ ಎಣಿಕೆ ನಡೆಯಲಿದೆ.

ಎಲ್ಲೆಲ್ಲಿ ಚುನಾವಣೆ?
8 ನಗರಸಭೆ: ಹಿರಿಯೂರು, ಹರಿಹರ, ಶಿಡ್ಲಘಟ್ಟ, ಸಾಗರ, ತಿಪಟೂರು, ನಂಜನಗೂಡು, ಬಸವಕಲ್ಯಾಣ, ಶಹಾಪುರ.

33 ಪುರಸಭೆ: ಆನೇಕಲ್‌, ದೇವನಹಳ್ಳಿ, ನೆಲಮಂಗಲ, ಬಂಗಾರಪೇಟೆ, ಶ್ರೀನಿವಾಸಪುರ, ಮಾಲೂರು, ಬಾಗೇಪಲ್ಲಿ, ಶಿಕಾರಿಪುರ, ಪಾವಗಡ, ಕುಣಿಗಲ್‌, ಕೆ.ಆರ್‌. ನಗರ, ಬನ್ನೂರು, ಕಡೂರು, ಮೂಡಬಿದಿರೆ, ಮಳವಳ್ಳಿ, ಕೆ.ಆರ್‌. ಪೇಟೆ, ಶ್ರೀರಂಗಪಟ್ಟಣ, ಗುಂಡ್ಲುಪೇಟೆ, ಬಾಗೇವಾಡಿ, ಇಂಡಿ, ತಾಳಿಕೋಟೆ, ನವಲಗುಂದ, ಮುಂಡರಗಿ, ನರಗುಂದ, ಬ್ಯಾಡಗಿ, ಶಿಗ್ಗಾಂವ, ಭಟ್ಕಳ, ಭಾಲ್ಕಿ, ಹುಮ್ನಾಬಾದ್‌, ಚಿಟಗುಪ್ಪ, ಸಂಡೂರು, ಹರಪನಹಳ್ಳಿ, ಹೂವಿನಹಡಗಲಿ.

22 ಪಟ್ಟಣ ಪಂಚಾಯಿತಿ: ಮೊಳಕಾಲ್ಮೂರು, ಹೊಳಲ್ಕೆರೆ, ಶಿರಾಳಕೊಪ್ಪ, ಸೊರಬ, ಹೊಸನಗರ, ತುರುವೇಕೆರೆ, ಕೊಪ್ಪ, ಶೃಂಗೇರಿ, ಮೂಡಿಗೆರೆ, ನರಸಿಂಹರಾಜಪುರ, ಮೂಲ್ಕಿ, ಸುಳ್ಯ, ಆಲೂರು, ಅರಕಲಗೂಡು, ಯಳಂದೂರು, ಹನೂರು, ಕಲಘಟಗಿ, ಅಳ್ನಾವರ, ಹೊನ್ನಾವರ, ಸಿದ್ದಾಪುರ, ಔರಾದ್‌, ಕಮಲಾಪುರ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.