Ayodhya: ಭೇಟಿ ಬಗ್ಗೆ ಹತ್ತು ದಿನ ಮೊದಲೇ ತಿಳಿಸಿ: ವಿವಿಐಪಿಗಳಿಗೆ ಯೋಗಿ ಸರಕಾರದ ಕೋರಿಕೆ
Team Udayavani, Jan 25, 2024, 1:15 AM IST
ಅಯೋಧ್ಯೆ: ಅಯೋಧ್ಯೆಯ ರಾಮ ಮಂದಿರಕ್ಕೆ ಭೇಟಿ ನೀಡಲು ಇಚ್ಛಿಸುವ ವಿವಿಐಪಿಗಳು 7-10ದಿನಗಳ ಮೊದಲೇ ಪ್ರವಾಸ ಕಾರ್ಯಕ್ರಮ ತಿಳಿಸಬೇಕು ಎಂದು ಉ.ಪ್ರ. ಸರ್ಕಾರ ಮನವಿ ಮಾಡಿದೆ. ಈಗಾಗಲೇ ಹಲವಾರು ಮಂದಿ ದೇಶ ವಿದೇಶಗಳ ಗಣ್ಯರು ರಾಮ ಮಂದಿರ ವೀಕ್ಷಣೆಗೆ ತೆರೆಳಲು ತುದಿಗಾಲಲ್ಲಿ ನಿಂತಿದ್ದಾರೆ.
ಮುನ್ಸೂಚನೆ ನೀಡದೆ ಗಣ್ಯರ ಆಗಮನದಿಂದ ಸಾರ್ವಜನಿಕರ ಹಾಗೂ ಗಣ್ಯರ ಭದ್ರತೆಗೂ ತೊಂದರೆ ಆಗಲಿದೆ. ಅದನ್ನು ತಪ್ಪಿಸಲು ಮುಂಚಿತವಾಗಿ ಗಣ್ಯರು ತಮ್ಮ ಪ್ರವಾಸದ ವಿವರ ನೀಡಲು ಉ.ಪ್ರ ಸರ್ಕಾರ ಮನವಿ ಮಾಡಿದೆ. ಜ.31ರಿಂದ ಮಾ.4ರ ವರೆಗೆ ಬಿಜೆಪಿ ಸರ್ಕಾರದ ಆಡಳಿತ ಇರುವ ರಾಜ್ಯಗಳ ಸಿಎಂಗಳು ತಮ್ಮ ಸಂಪುಟ ಸಚಿವರ ಜತೆಗೆ ರಾಮ ಮಂದಿರಕ್ಕೆ ಭೇಟಿ ನೀಡಲು ನಿರ್ಧರಿಸಿದ್ದಾರೆ. ಅದರ ಬೆನ್ನಲ್ಲಿಯೇ ಈ ಮನವಿ ಮಾಡಲಾಗಿದೆ. ಇದೇ ವೇಳೆ, ಜ.31ರಿಂದ ಮಾ.4ರ ವರೆಗೆ ಬಿಜೆಪಿ ವತಿಯಿಂದ ಕರ್ನಾಟಕ ಸೇರಿದಂತೆ ದೇಶದ ವಿವಿಧ ಭಾಗಗಳಿಂದ ಜನರನ್ನು ಅಯೋಧ್ಯೆಗೆ ಕರೆತರಲು ಬಿಜೆಪಿ ಸಿದ್ಧತೆ ನಡೆಸುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
MUST WATCH
ಹೊಸ ಸೇರ್ಪಡೆ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ