ಖಾಸಗಿ ಕಂಪನಿಗಳಿಗೆ ಈಗ “ಬೆಳೆ ವಿಮೆ’ ಸುಗ್ಗಿ


Team Udayavani, Aug 16, 2019, 3:07 AM IST

klhasagi

ಕಲಬುರಗಿ: ಕೇಂದ್ರ ಸರ್ಕಾರದ ಸ್ವಾಮ್ಯದಲ್ಲಿದ್ದ ಭಾರತೀಯ ಕೃಷಿ ವಿಮಾ ಯೋಜನೆ (ಎನ್‌ಎಐಎಸ್‌) ನಾಲ್ಕು ವರ್ಷಗಳ ಹಿಂದೆ ರದ್ದು ಮಾಡಿ “ಕೃಷಿ ವಿಮಾ ಯೋಜನೆ’ ಎಂದು ಬದಲಿಸಿ ಬಂಡವಾಳ ಹೂಡಿಕೆ ಕಂಪನಿಗಳ ಕೈಗೆ ನೀಡಿ ಖಾಸಗೀಕರಣಗೊಳಿಸಿದ ನಂತರ ಅತಿವೃಷ್ಟಿ-ಅನಾವೃಷ್ಟಿಯಿಂದ ಹಾನಿಗೀಡಾದ ಬೆಳೆಗೆ ಸೂಕ್ತ ಬೆಳೆ ವಿಮೆ ಸಿಗದಂತಾಗಿದೆ. ಬೆಳೆ ವಿಮೆ ಖಾಸಗೀಕರಣ ಮಾಡಿದರೂ ಪ್ರಿಮಿಯಂ ಮೊತ್ತ ಅರ್ಧಕ್ಕೆ ಇಳಿಸಲಾಗಿದೆ.

“ಭಾರತೀಯ ಕೃಷಿ ವಿಮೆ’ ಎಂದು ಇದ್ದಿದ್ದನ್ನು “ಪ್ರಧಾನ ಮಂತ್ರಿ ಕೃಷಿ ಫ‌ಸಲ್‌ ಬಿಮಾ ಯೋಜನೆ’ ಎಂದು ಬದಲಾಯಿಸಲಾಯಿತು. 2018ರಲ್ಲಿ ರೈತರಿಂದ 38 ಸಾವಿರ ಕೋಟಿ ರೂ. ಪ್ರಿಮಿಯಂ ತುಂಬಿಕೊಂಡಿದ್ದು, ಕೇವಲ 4000 ಕೋಟಿ ರೂ. ಪರಿಹಾರ ಕೊಟ್ಟಿದ್ದೇ ಇದಕ್ಕೆ ಸಾಕ್ಷಿ. ಇದಕ್ಕೂ ಮುನ್ನ ಕೇಂದ್ರ ಸರ್ಕಾರದ ಅಧೀನದಲ್ಲಿದ್ದಾಗ ಪ್ರಿಮಿಯಂ 60 ರೂ. ತುಂಬಿಸಿಕೊಂಡಿದ್ದರೆ 40 ರೂ. ಪರಿಹಾರ ದೊರಕುತ್ತಿತ್ತು.

ಈಗ 100 ರೂ. ತುಂಬಿಸಿಕೊಂಡರೂ 10 ರೂ. ಪರಿಹಾರವೂ ಸಿಗುತ್ತಿಲ್ಲ. ರಾಜ್ಯ ಸರ್ಕಾರದಿಂದಲೇ ವಿಮಾ ಕಂಪನಿ ಸ್ಥಾಪಿಸಲು ಯೋಚಿಸಲಾಗಿದೆ ಎಂದು ಹಿಂದಿನ ಜೆಡಿಎಸ್‌-ಕಾಂಗ್ರೆಸ್‌ ಸಮ್ಮಿಶ್ರ ಸರ್ಕಾರದಲ್ಲಿ ಕೃಷಿ ಸಚಿವರಾಗಿದ್ದ ಎಚ್‌.ಎನ್‌. ಶಿವಶಂಕರ ರೆಡ್ಡಿ ಹೇಳಿದ್ದರು. ಆದರೆ ಈ ಹೇಳಿಕೆ ಕಾರ್ಯರೂಪಕ್ಕೆ ಬರಲೇ ಇಲ್ಲ. 2018ರ ಮಾರ್ಚ್‌ಗೆ ಮುಕ್ತಾಯವಾದ ಹಣಕಾಸು ವರ್ಷದಲ್ಲಿ 11 ಖಾಸಗಿ ವಿಮಾ ಕಂಪನಿಗಳು 3,000 ಕೋಟಿ ರೂ. ಲಾಭ ಗಳಿಸಿವೆ. ಈ ವರ್ಷದಲ್ಲಿ ಇದೇ 11 ಖಾಸಗಿ ವಿಮಾ ಕಂಪನಿಗಳು 11,509 ಕೋಟಿ ರೂ.ಗಳನ್ನು ಬೆಳೆ ವಿಮೆ ಪ್ರಿಮಿಯಂ ಸಂಗ್ರಹಿಸಿವೆ.

ಹಗಲು ದರೋಡೆ: ಕೇಂದ್ರ ಸರ್ಕಾರ ಪ್ರಧಾನಮಂತ್ರಿ ಫ‌ಸಲ್‌ ಬಿಮಾ ಯೋಜನೆ ಹಾಗೂ ಹವಾಮಾನ ಆಧಾರಿತ ಬೆಳೆ ವಿಮೆ ಎನ್ನುವ ಎರಡು ಯೋಜನೆ ಹೊಂದಿದೆ. ಈ ಎರಡೂ ವಿಮಾ ಯೋಜನೆಗಳ ಶೇ.98ರಷ್ಟು ಪ್ರಿಮಿಯಂನ್ನು ಕೇಂದ್ರ, ರಾಜ್ಯ ಸರ್ಕಾರ ಭರಿಸಿದರೆ, ಶೇ.2ರಷ್ಟನ್ನು ಹಣವನ್ನು ರೈತರು ಪಾವತಿಸುತ್ತಾರೆ. 2018-19ನೇ ಸಾಲಿನಲ್ಲಿ ಕಲಬುರಗಿ ಜಿಲ್ಲೆಯೊಂದರಲ್ಲಿಯೇ ಅಂದಾಜು 16 ಕೋಟಿ ರೂ. ಪ್ರಿಮಿಯಂನ್ನು ರೈತರೇ ತುಂಬಿದ್ದಾರೆ.

ರಾಜ್ಯದ ಮನವಿ ತಿರಸ್ಕಾರ: ಬೆಳೆ ವಿಮೆ ಮಾಡಿಸುವ ದಿನಾಂಕವನ್ನು ವಿಸ್ತರಿಸುವಂತೆ ಆ.1ರಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಕೇಂದ್ರ ಸರ್ಕಾರಕ್ಕೆ ಹಾಗೂ ವಿಮಾ ಕಂಪನಿಗಳಿಗೆ ಪತ್ರ ಬರೆದಿದ್ದರು. ಆದರೆ ವಿಮಾ ಕಂಪನಿಗಳು ಮನವಿ ತಿರಸ್ಕರಿಸಿವೆ.

ಕೇಂದ್ರ ಹಣಕಾಸು ಸಚಿವರೇ ಅಸಹಾಯಕರಾದರು!: ಇತ್ತೀಚೆಗೆ ಬೆಳಗಾವಿ ಸೇರಿದಂತೆ ಉತ್ತರ ಕರ್ನಾಟಕದ ಪ್ರವಾಹ ವೀಕ್ಷಣೆಗೆ ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಆಗಮಿಸಿದ್ದರು. ಈ ವೇಳೆ ಕೃಷಿ ಬೆಳೆ ವಿಮಾ ಕಂಪನಿಗಳು ಬೆಳೆಗಳ ಹಾನಿಗೆ ಮೊದಲ ಹಂತದ ಶೇಕಡಾವಾರು ಪರಿಹಾರ ನೀಡುವಂತೆ ಹಾಗೂ ಬೆಳೆ ವಿಮೆ ಮಾಡಿಸುವ ದಿನ ಜು.31ಕ್ಕೆ ಮುಕ್ತಾಯವಾಗಿದ್ದನ್ನು ವಿಸ್ತರಿಸುವಂತೆ ಮನವಿ ಮಾಡಿದ್ದರು. ಆದರೆ, ಕೃಷಿ ವಿಮೆಯನ್ನು ಖಾಸಗೀಕರಣಗೊಳಿಸಿದ ಪರಿಣಾಮ ಕೇಂದ್ರ ಸಚಿವರೇ ಅಸಹಾಯಕರಾಗುವಂತೆ ಮಾಡಿತು.

ಬೆಳೆ ವಿಮೆಗೆಂದು 18 ಖಾಸಗಿ ಕಂಪನಿಗಳ ಬದಲು ಮೊದಲಿನಂತೆ ಕೇಂದ್ರ ಸರ್ಕಾರ ಅಧೀನದ ಎರಡು ಕಂಪನಿಗಳಿಗೆ ಮಾತ್ರ ಬೆಳೆ ವಿಮೆ ಅಧಿಕಾರ ನೀಡಬೇಕು. ನಾವು ಮೊದಲಿನಿಂದಲೂ ಖಾಸಗೀಕರಣ ವಿರೋಧಿಸುತ್ತಾ ಬಂದಿದ್ದೇವೆ. ರೈತರಿಗೆ ಈಗ ಖಾಸಗೀಕರಣ ಬಿಸಿ ತಟ್ಟುತ್ತಿದೆ. ಈಗಲಾದರೂ ಸರ್ಕಾರ ಎಚ್ಚೆತ್ತುಕೊಳ್ಳಬೇಕು.
-ಮಾರುತಿ ಮಾನ್ಪಡೆ, ಉಪಾಧ್ಯಕ್ಷರು, ಕೆಪಿಆರ್‌ಎಸ್‌

* ಹಣಮಂತರಾವ ಭೈರಾಮಡಗಿ

ಟಾಪ್ ನ್ಯೂಸ್

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Mother Geetha hiremath statement on daughter Neha incident

Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ

8

Mollywood: ಈ ದಿನ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ಬರುವುದು ಖಚಿತ; ಯಾವುದರಲ್ಲಿ ಸ್ಟ್ರೀಮ್?

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ

Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ

O2 movie review

O2 movie review; ಸುಂದರ ಬೀದಿಯ ತಣ್ಣನೆಯ ಗಾಳಿಯಂತೆ…

9

Neha Case: ನೇಹಾ ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.