ಇನ್ನು ಆಯಾ ಜಿಲ್ಲೆಗಳಲ್ಲೇ KFD ಪರೀಕ್ಷೆ


Team Udayavani, Feb 1, 2024, 1:27 AM IST

monkey

ಶಿವಮೊಗ್ಗ: ಮಂಗನಕಾಯಿಲೆ (ಕೆಎಫ್‌ಡಿ) ವಿಚಾರದಲ್ಲಿ ಆರೋಗ್ಯ ಇಲಾಖೆ ಮಹತ್ವದ ಹೆಜ್ಜೆ ಇಟ್ಟಿದ್ದು, ಇನ್ಮುಂದೆ ರೋಗಿಗಳ ಮಾದರಿ ಪರೀಕ್ಷೆಗೆ ಶಿವಮೊಗ್ಗ ವಿಡಿಎಲ್‌ ಲ್ಯಾಬ್‌ ಅವಲಂಬಿಸಬೇಕಾಗಿಲ್ಲ.

ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ, ದಕ್ಷಿಣಕನ್ನಡ ಮತ್ತು ಉತ್ತರಕನ್ನಡ ಜಿಲ್ಲೆಗಳಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಕ್ಯಾಸನೂರು ಫಾರೆಸ್ಟ್‌ ಡಿಸೀಸ್‌(ಕೆಎಫ್‌ಡಿ)ಮನುಷ್ಯರ ಪಾಲಿಗೆ ನರಕವಾಗಿದೆ. ಈವರೆಗೆ ಗಂಭೀರವಾದ ಪ್ರಯತ್ನಗಳು ನಡೆಯದ ಪರಿಣಾಮ ಆರು ದಶಕಗಳಾದರೂ ಈ ಕಾಯಿಲೆ ಜನರ ಜೀವ ಹಿಂಡುತ್ತಿದೆ. ಆರೋಗ್ಯ ಇಲಾಖೆ ದಶಕಗಳ ಹಿಂದೆ ಶಿವಮೊಗ್ಗದಲ್ಲಿ ವಿಡಿಎಲ್‌ ಲ್ಯಾಬ್‌ ಸ್ಥಾಪಿಸುವ ಮೂಲಕ ಕೆಎಫ್‌ಡಿ ಪೀಡಿತ ಪ್ರದೇಶದ ಜನರ ರಕ್ತ ಮಾದರಿ ಪರೀಕ್ಷೆಯನ್ನು ಆರಂಭಿಸಿತು.

ಈವರೆಗೂ ಕೆಎಫ್‌ಡಿ ಪೀಡಿತ ಪ್ರದೇಶಗಳಲ್ಲಿ ಯಾರಿಗೆ ಜ್ವರ ಬಂದರೂ ಇಲ್ಲಿಗೆ ಸ್ಯಾಂಪಲ್‌ ಕಳುಹಿಸಲಾಗುತ್ತಿದೆ. ಮಾದರಿ ಸಂಗ್ರಹಿಸಿ ಕಳುಹಿಸಿದ ಒಂದೆರಡು ದಿನದಲ್ಲಿ ಫಲಿತಾಂಶ ಸಿಗುತ್ತಿದೆ. ಈ ಆಧಾರದಲ್ಲಿ ಚಿಕಿತ್ಸೆ ಆರಂಭಿಸಲಾಗುತ್ತಿದೆ. ಶಿವಮೊಗ್ಗಕ್ಕೆ ಮಾದರಿ ಕಳುಹಿಸುವುದರಿಂದ ಆರ್ಥಿಕವಾಗಿ ಹೊರೆ-ಸಮಯ ಹೆಚ್ಚು ತೆಗೆದುಕೊಳ್ಳುತ್ತದೆ ಎಂದು ಭಾವನೆ ಇದೆ. ಇದನ್ನು ತಪ್ಪಿಸುವ ಸಲುವಾಗಿ ಆರೋಗ್ಯ ಇಲಾಖೆ ಆಯಾ ಜಿಲ್ಲೆಗಳಲ್ಲೇ ಪರೀಕ್ಷೆ ನಡೆಸಲು ಬೇಕಾದ ಲ್ಯಾಬ್‌ ಲಭ್ಯತೆ, ಇತರ ವಿಷಯಗಳ ಕುರಿತು ಡಿಎಚ್‌ಒಗಳಿಗೆ ಸಂದೇಶ ಕಳುಹಿಸಿದೆ.

ಕೋವಿಡ್‌ ಸಂದರ್ಭ ಎಲ್ಲ ಜಿಲ್ಲೆಗಳಲ್ಲಿ ಆರ್‌ಟಿಸಿಪಿಆರ್‌ ಲ್ಯಾಬ್‌ಗಳನ್ನು ಮಂಜೂರು ಮಾಡಲಾಗಿದ್ದು, ಅವುಗಳು ಕಾರ್ಯಾಚರಿಸುತ್ತಿವೆ. ಈ ಲ್ಯಾಬ್‌ಗಳಲ್ಲೇ ಕೆಎಫ್‌ಡಿ ಟೆಸ್ಟ್‌ ನಡೆಸಬಹುದು. ಟೆಸ್ಟ್‌ ನಡೆಸುವ ಸಿಬಂದಿಗೆ ಬೇಕಾದ ತರಬೇತಿ, ಸಹಕಾರವನ್ನು ಎನ್‌ಐವಿ (ನ್ಯಾಷನಲ್‌ ಇನ್‌ಸ್ಟಿಟ್ಯೂಟ್‌ ಆಫ್‌ ವೈರಾಲಜಿ) ಪುಣೆಯಿಂದ ಪಡೆಯಲು ಕೂಡ ಸೂಚಿಸಲಾಗಿದೆ. ಕೆಎಫ್‌ಡಿ ಅವಧಿ ಜೂನ್‌ವರೆಗೂ ಇರಲಿದ್ದು, ಅಷ್ಟರೊಳಗೆ ಸ್ಥಳೀಯವಾಗಿ ಪರೀಕ್ಷೆ ಆರಂಭವಾಗುವ ಸಾಧ್ಯತೆ ಇದೆ.

ಕೆಎಫ್‌ಡಿ ಹೆಚ್ಚಳ
ಜ.30ರ ವರೆಗೆ ಉತ್ತರಕನ್ನಡ 19, ಶಿವಮೊಗ್ಗ 12, ಚಿಕ್ಕಮಗಳೂರು ಇಬ್ಬರಿಗೆ ಕೆಎಫ್ಡಿ ತಗಲಿದ್ದು, ಒಬ್ಬರು ಮೃತಪಟ್ಟಿದ್ದಾರೆ. ಡಿಸೆಂಬರ್‌ನಲ್ಲಿ ಎರಡು ಪ್ರಕರಣ ಬಿಟ್ಟರೆ ಯಾವುದೂ ವರದಿಯಾಗಿರಲಿಲ್ಲ. ಜನವರಿಯಲ್ಲೇ ಅಬ್ಬರಿಸುತ್ತಿರುವ ಕೆಎಫ್‌ಡಿ ಮಾರ್ಚ್‌-ಎಪ್ರಿಲ್‌ನಲ್ಲಿ ರುದ್ರನರ್ತನ ಮಾಡುವ ಸಾಧ್ಯತೆ ಹೆಚ್ಚಾಗಿದೆ. ಅಷ್ಟರೊಳಗೆ ಲ್ಯಾಬ್‌ ಆರಂಭವಾದರೆ ಜನರಿಗೆ ವೇಗವಾಗಿ ಫಲಿತಾಂಶ ಕೊಡುವ ಜತೆಗೆ ಸೂಕ್ತ ಚಿಕಿತ್ಸೆ ನೀಡಲು ಸಹಾಯಕವಾಗುತ್ತದೆ.

ಟಾಪ್ ನ್ಯೂಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

15

UV Fusion: ಜೀವನವನ್ನು ಪ್ರೀತಿಸೋಣ

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.