ಬಂಡಾಯ ತಪ್ಪಿಸಲು ಬೀದರ್‌ನಲ್ಲಿ ಆಣೆ-ಪ್ರಮಾಣ!


Team Udayavani, Mar 18, 2023, 1:07 PM IST

aane praman

ಬೀದರ: ವಿಧಾನಸಭೆ ಮಹಾ ಕದನಕ್ಕೆ ದಿನಗಳು ಸಮೀಪಿಸುತ್ತಿದ್ದಂತೆ ಜಿಲ್ಲೆಯ ಭಾಲ್ಕಿ ಕ್ಷೇತ್ರದಲ್ಲಿ ಚುನಾವಣೆ ಕಾವು ಹೆಚ್ಚಿದೆ. ಕ್ಷೇತ್ರದಲ್ಲಿ ಈ ಬಾರಿ ಕಮಲ ಅರಳಿಸಲು ಪಣ ತೊಟ್ಟಿರುವ ಬಿಜೆಪಿ, ಶಾಸಕ ಈಶ್ವರ ಖಂಡ್ರೆ ಅವರನ್ನು ಸೋಲಿಸಲು ತಂತ್ರ ರೂಪಿಸುತ್ತಿದೆ. ಅಷ್ಟೇ ಅಲ್ಲ ಟಿಕೆಟ್‌ ವಂಚಿತರು ಪಕ್ಷದ ವಿರುದ್ಧ ಬಂಡಾಯ ಏಳುವುದನ್ನು ತಪ್ಪಿಸಲು ದೇವರ ಮೇಲೆ ಆಣೆ-ಪ್ರಮಾಣದ ರಾಜಕೀಯಕ್ಕೆ ಮೊರೆ ಹೋಗಿದೆ. ಭಾಲ್ಕಿ ಖಂಡ್ರೆದ್ವಯರ ಕಾದಾಟದಿಂದ ರಾಜ್ಯ ರಾಜಕೀಯದಲ್ಲಿ ಗಮನ ಸೆಳೆಯುವ ಕ್ಷೇತ್ರ.

ಸತತ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಕಾಂಗ್ರೆಸ್‌ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಅವರನ್ನು ಈ ಬಾರಿ ಮಣಿಸಲು ಬಿಜೆಪಿ ಸಜ್ಜಾಗಿ ಕಾರ್ಯತಂತ್ರ ಹಣೆಯುತ್ತಿದೆ. ಪ್ರಬಲ ಆಕಾಂಕ್ಷಿಗಳಾಗಿರುವ ಮಾಜಿ ಶಾಸಕ ಪ್ರಕಾಶ ಖಂಡ್ರೆ ಮತ್ತು ಪರಾಜಿತ ಅಭ್ಯರ್ಥಿ ಡಿ.ಕೆ. ಸಿದ್ರಾಮ್‌ ಸದ್ಯ ಒಗ್ಗಟ್ಟಿನ ಮಂತ್ರ ಜಪಿಸುತ್ತಿದ್ದು, ಶಾಸಕ ಖಂಡ್ರೆ ವಿರುದ್ಧ ಚುನಾವಣಾ ಪ್ರಚಾರ ನಡೆಸುತ್ತಿದ್ದಾರೆ. ಕೇಂದ್ರ ಸಚಿವ ಖೂಬಾ ಸಾರಥ್ಯ: ಆದರೆ ಕ್ಷೇತ್ರದಲ್ಲಿ ಕೇಸರಿ ಪಡೆಯಲ್ಲಿ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಾಗಿರುವುದು ವರಿಷ್ಠರಿಗೆ ಕಗ್ಗಂಟಾಗಿದ್ದಲ್ಲದೇ ಟಿಕೆಟ್‌ ವಂಚಿತರು ಬಂಡಾಯ ಇಲ್ಲವೇ ಬೇರೆ ಪಕ್ಷಕ್ಕೆ ಹಾರುವ ಭೀತಿಯೂ ಇದೆ. ಪ್ರತಿ ಬಾರಿ ಟಿಕೆಟ್‌ ವಂಚಿತರ ಮುನಿಸಿನಿಂದಾಗಿ ಪಕ್ಷ ಸೋಲುಣ್ಣುತ್ತ ಬಂದಿದೆ. ಹಾಗಾಗಿ ಇದನ್ನು ತಪ್ಪಿಸಲು ಪಕ್ಷದ ನಾಯಕರು ದೇವರ ಮೇಲೆ ಪ್ರಮಾಣ ಮಾಡಿಸಿದ್ದಾರೆ. ಇದಕ್ಕೆ ಕೇಂದ್ರ ಸಚಿವ ಭಗವಂತ ಖೂಬಾ ಸಾರಥ್ಯ ವಹಿಸಿದ್ದರೆ, ಜಿಲ್ಲೆಯ ಬಿಜೆಪಿ
ಹಿರಿಯ ನಾಯಕರು ಸಾಕ್ಷಿಯಾಗಿದ್ದಾರೆ.

ಪ್ರಮಾಣ ಮಾಡಿಸಿದ್ದು ಎಲ್ಲಿ?: ಕ್ಷೇತ್ರದಲ್ಲಿ ಸದ್ಯ ಬಿಜೆಪಿಯಿಂದ ಪ್ರಕಾಶ ಖಂಡ್ರೆ, ಡಿ.ಕೆ.ಸಿದ್ರಾಮ್‌ ಜತೆಗೆ ಮರಾಠಾ ಸಮಾಜದ ಮುಖಂಡ ಡಾ|ದಿನಕರ ಮೊರೆ ಸೇರಿ ಐದಾರು ಜನ ಆಕಾಂಕ್ಷಿಗಳಿದ್ದಾರೆ. ದಕ್ಷಿಣ ಕಾಶಿ ಖ್ಯಾತಿಯ ಭಾಲ್ಕಿ ತಾಲೂಕಿನ ಶ್ರೀ ಮೈಲಾರ ಮಲ್ಲಣ್ಣ ದೇವಸ್ಥಾನದಲ್ಲಿ ಪ್ರಮಾಣ ಮಾಡಿಸಲಾಗಿದೆ. “ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಕ್ಷೇತ್ರದಿಂದ ಪಕ್ಷ ಯಾರಿಗೆ ಟಿಕೆಟ್‌ ನೀಡಿದರೂ ನಾನು ಮತ್ತು ನನ್ನ ಪರಿವಾರ ಆ ಅಭ್ಯರ್ಥಿ ಗೆಲುವಿಗೆ ಶ್ರಮಿಸುತ್ತೇವೆ ಎಂದು ನಮ್ಮ ಮನೆ ದೇವರು ಮತ್ತು ಮೈಲಾರ ಮಲ್ಲಣ್ಣ ದೇವರ ಮೇಲೆ ಆಣೆ ಮಾಡುತ್ತೇನೆ’ ಎಂದು ಆಕಾಂಕ್ಷಿಗಳಿಂದ ಪ್ರತ್ಯೇಕವಾಗಿ ಪ್ರಮಾಣ ಮಾಡಿಸಲಾಗಿದೆ.

ಖೂಬಾ-ಈಶ್ವರ ಖಂಡ್ರೆ ಜಿದ್ದಾಜಿದ್ದಿ
ಶಾಸಕ ಈಶ್ವರ ಖಂಡ್ರೆ ಮತ್ತು ಕೇಂದ್ರ ಸಚಿವ ಭಗವಂತ ಖೂಬಾ ಮಧ್ಯದ ರಾಜಕೀಯ ಕುಸ್ತಿ ದಿನ ಕಳೆದಂತೆ ಹೆಚ್ಚುತ್ತಿದ್ದು, ಭಾಲ್ಕಿ ಕ್ಷೇತ್ರದಲ್ಲಿ ಈಶ್ವರ ಅವರನ್ನು ಶತಾಯ ಗತಾಯ ಸೋಲಿಸಲು ಕಸರತ್ತು ನಡೆಸುತ್ತಿದ್ದಾರೆ. ಆಣೆ-ಪ್ರಮಾಣದ ಹೆಸರಿನಲ್ಲಿ ಟಿಕೆಟ್‌ ಘೋಷಣೆಗೂ ಮುನ್ನವೇ ಅಭ್ಯರ್ಥಿಗಳನ್ನು ಒಂದುಗೂಡಿಸಿ ಪಕ್ಷವನ್ನು ಬಲಿಷ್ಠಗೊಳಿಸುವುದರ ಜತೆಗೆ ಮುಂದೆ ಎದುರಾಗಬಹುದಾದ ಬಂಡಾಯ ಶಮನ ಮಾಡುವ ಪ್ರಯತ್ನ ಮಾಡಿದ್ದಾರೆ

ಶಶಿಕಾಂತ ಬಂಬುಳಗೆ

ಟಾಪ್ ನ್ಯೂಸ್

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.