ಮರಾಠರಿಗೆ OBC ಸೌಲಭ್ಯ: ಉಪವಾಸ ನಿಲ್ಲಿಸಿದ ಜಾರಂಗೆ
ಪ್ರಮಾಣ ಪತ್ರ ನೀಡುವ ಬಗ್ಗೆ ಸರಕಾರದಿಂದ ಆದೇಶ- ಮುಖ್ಯಮಂತ್ರಿ ಮನವಿಗೆ ಸ್ಪಂದಿಸಿದ ಹೋರಾಟಗಾರ
Team Udayavani, Jan 28, 2024, 12:58 AM IST
ಮುಂಬಯಿ: “ಮರಾಠ ಸಮುದಾಯಕ್ಕೆ ಮೀಸಲು ಸಿಗುವವರೆಗೆ, ಒಬಿಸಿಗೆ ಸಿಗುವ ಎಲ್ಲ ಸೌಲಭ್ಯಗಳನ್ನು ಸಮುದಾಯಕ್ಕೆ ಕಲ್ಪಿಸಲಾಗುವುದು’ ಎಂದು ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಶನಿವಾರ ಭರವಸೆ ನೀಡಿದ್ದಾರೆ. ಇದಾದ ಬಳಿಕ ಮೀಸಲು ಹೋರಾಟಗಾರ ಮನೋಜ್ ಜಾರಂಗೆ ತಮ್ಮ ಅನಿರ್ದಿಷ್ಟಾವಧಿ ಉಪವಾಸವನ್ನು ಅಂತ್ಯಗೊಳಿಸಿದ್ದಾರೆ.
ಮೀಸಲು ಕಲ್ಪಿಸುವಂತೆ ಆಗ್ರಹಿಸಿ ಸಾವಿರಾರು ಬೆಂಬಲಿಗರೊಂದಿಗೆ ಮನೋಜ್ ಜಾರಂಗೆ ಜಲಾ° ಜಿಲ್ಲೆಯ ಅಂತರವಾಲಿ ಗ್ರಾಮದಿಂದ ಮುಂಬಯಿ ವರೆಗೆ ಜಾಥಾ ಮೂಲಕ ಬಂದು ಶುಕ್ರವಾರದಿಂದ ನವೀ ಮುಂಬಯಿಯಲ್ಲಿ ಉಪವಾಸ ನಡೆಸುತ್ತಿದ್ದರು.
ಮಹಾರಾಷ್ಟ್ರ ಸರಕಾರದ ನಿಯೋಗವು ಶುಕ್ರವಾರ ರಾತ್ರಿಯೇ ಧರಣಿ ನಡೆಯುವ ಸ್ಥಳಕ್ಕೆ ಭೇಟಿ ನೀಡಿ ಮನೋಜ್ ಜಾರಂಗೆ ಅವರಿಗೆ ಸತ್ಯಾಗ್ರಹ ವಾಪಸು ಪಡೆಯುವಂತೆ ಮನವಿ ಮಾಡಿತು.
ಶನಿವಾರ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಭೇಟಿ ನೀಡಿ, ಶೀಘ್ರದಲ್ಲೇ ಮರಾಠ ಸಮುದಾಯಕ್ಕೆ ಕುಣುಬಿ ಪ್ರಮಾಣಪತ್ರ ನೀಡುವ ಬಗ್ಗೆ ಆದೇಶ ಹೊರಡಿಸಿದ ಬಳಿಕ ಮನೋಜ್ ಜಾರಂಗೆ ಅವರು ಉಪವಾಸ ಸತ್ಯಾಗ್ರಹ ಹಿಂಪಡೆದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
MUST WATCH
ಹೊಸ ಸೇರ್ಪಡೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ