Honnavar: ಬಂದರು ಸರ್ವೇ ಕಾರ್ಯಕ್ಕೆ ಅಡ್ಡಿ; ಲಾಠಿ ಪ್ರಹಾರ
Team Udayavani, Feb 1, 2024, 1:44 AM IST
ಹೊನ್ನಾವರ: ಕೇಂದ್ರ ಸರಕಾರದ ಸಾಗರಮಾಲಾ ಯೋಜನೆಯಡಿ ಉತ್ತರ ಕನ್ನಡ ಜಿಲ್ಲೆ ಹೊನ್ನಾವರದ ಕಾಸರಕೋಡಿನಲ್ಲಿ ಬಂದರು ನಿರ್ಮಾಣ ಕಾಮಗಾರಿಯ ಸರ್ವೇ ಕಾರ್ಯಕ್ಕೆ ಅಡ್ಡಿಪಡಿಸಿದ ಪ್ರತಿಭಟನಕಾರರ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿದ್ದು, ಹತ್ತಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಕೆಲವು ವರ್ಷಗಳಿಂದ ಈ ಯೋಜನೆ ಜಾರಿಗೆ ಪರ-ವಿರೋಧ ನಡೆಯುತ್ತಲೇ ಇದ್ದು, ವಾಣಿಜ್ಯ ಬಂದರು ಪ್ರದೇಶ ವ್ಯಾಪ್ತಿಯಲ್ಲಿ ಮೀನುಗಾರರು ಮತ್ತು ಅ ಧಿಕಾರಿಗಳ ಜಟಾಪಟಿ ಬುಧವಾರ ಪುನಃ ಆರಂಭವಾಗಿದೆ. ಬೆಳಗ್ಗೆ ಅಧಿಕಾರಿಗಳು ಸರ್ವೇ ಕಾರ್ಯಕ್ಕೆ ಆಗಮಿಸಲಿದ್ದಾರೆ ಎಂಬ ಸುದ್ದಿ ತಿಳಿದ ಕೂಡಲೇ 300ಕ್ಕೂ ಅಧಿ ಕ ಜನ ಜಮಾಯಿಸಿದ್ದಾರೆ. ಅಧಿಕಾರಿಗಳು ಪೊಲೀಸರೊಂದಿಗೆ ಸರ್ವೇಗೆ ಮುಂದಾದ ಹಿನ್ನೆಲೆಯಲ್ಲಿ ಮೀನುಗಾರರು ತೀವ್ರ ಪ್ರತಿಭಟನೆ ನಡೆಸಿದರು.
ಸಹಾಯುಕ್ತ ಆಯುಕ್ತೆ ನಯನಾ ಅವರು ಮೀನು ಗಾರರ ಜತೆ ಮಾತುಕತೆ ನಡೆಸಿದರೂ ಪ್ರತಿಭಟನ ಕಾರರು ಪಟ್ಟು ಬಿಡಲಿಲ್ಲ. ಮಧ್ಯಾಹ್ನದವರೆಗೂ ಸರ್ವೇಗೆ ಅವಕಾಶ ನೀಡಲಿಲ್ಲ. ಬಳಿಕ ಅಧಿಕಾರಿಗಳು ಪೊಲೀಸ್ ಬಂದೋಬಸ್ತ್ ಮೂಲಕ ಸ್ಥಳಕ್ಕೆ ಆಗಮಿಸಿ ಹೈಟೈಡ್ ಲೈನ್ ಸರ್ವೇಗೆ ಮುಂದಾಗುತ್ತಿದ್ದಂತೆ ಪುನಃ ವಿರೋಧ ವ್ಯಕ್ತವಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ