Odisha train tragedy: ನಿದ್ದೆ ಇಲ್ಲದ ಆ ಮೂರು ರಾತ್ರಿಗಳು!

ರೈಲ್ವೆ ಸಚಿವ ಅಶ್ವಿ‌ನಿ ವೈಷ್ಣವ್‌ರಿಂದ ನಿರಂತರ, ಬಿಡುವಿಲ್ಲದ ಕಾರ್ಯಾಚರಣೆ

Team Udayavani, Jun 6, 2023, 8:15 AM IST

Odisha train tragedy: ನಿದ್ದೆ ಇಲ್ಲದ ಆ ಮೂರು ರಾತ್ರಿಗಳು!

ಬಾಲಸೋರ್‌ ರೈಲು ದುರಂತ ನಡೆದಾಗಿನಿಂದ ರಕ್ಷಣಾ ಕಾರ್ಯಾಚರಣೆ ಮತ್ತು ಅಪಘಾತದ ತನಿಖೆಯ ಮೇಲ್ವಿಚಾರಣೆ ವಹಿಸಿಕೊಂಡಿದ್ದ ರಕ್ಷಣಾ ಸಚಿವ ಅಶ್ವಿ‌ನಿ ವೈಷ್ಣವ್‌ ಘಟನೆ ನಡೆದಾಗಿನಿಂದ ನಿದ್ದೆಯನ್ನು ಮಾಡದೇ ಸಂಪುರ್ಣ ಜವಾಬ್ದಾರಿ ವಹಿಸಿಕೊಂಡಿದ್ದರು. ಶನಿವಾರ ಮುಂಜಾನೆಯಿಂದ ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದರು.

ಸಂಪೂರ್ಣ ಉಸ್ತುವಾರಿ
ರೈಲುಗಳ ದುರಂತ ಸಂಭವಿಸಿದ ಒಡಿಶಾದ ಬಾಲಸೋರ್‌ ಜಿಲ್ಲೆಯ ಬಹನಾಗದಲ್ಲಿ ರೈಲ್ವೆ ಸಚಿವ ಅಶ್ವಿ‌ನಿ ವೈಷ್ಣವ್‌ ಅವರು ಕಳೆದ ಮೂರು ದಿನಗಳಿಂದ ಘಟನಾ ಸ್ಥಳದಲ್ಲೇ ಇದ್ದರು. ಗಾಯಗೊಂಡ ಪ್ರಯಾಣಿಕರ ರಕ್ಷಣೆ ಮತ್ತು ಸಂಪುರ್ಣ ಕಾರ್ಯಾಚರಣೆಯನ್ನು ಅವರು ಹತ್ತಿರದಲ್ಲೇ ಇದ್ದು ನಿರ್ವಹಿಸಿದ್ದಾರೆ. ಯಶವಂತಪುರ-ಹೌರಾ ಸೂಪರ್‌ಫಾಸ್ಟ್‌ ಎಕ್ಸ್‌ಪ್ರೆಸ್‌, ಶಾಲಿಮಾರ್‌-ಚೆನ್ನೈ ಸೆಂಟ್ರಲ್‌ ಕೋರಮಂಡಲ್‌ ಎಕ್ಸ್‌ಪ್ರೆಸ್‌ ಮತ್ತು ಗೂಡ್ಸ್‌ ರೈಲು ಡಿಕ್ಕಿಯಾಗಿ ಕನಿಷ್ಠ 275 ಮಂದಿ ನಾಗರಿಕರು ಮೃತಪಟ್ಟು, 1,100ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡ ಈ ಪ್ರಕರಣದಲ್ಲಿ ರೈಲ್ವೆ ಸಚಿವರ ಕಾರ್ಯದಕ್ಷತೆ ಎಲ್ಲರ ಮೆಚ್ಚುಗೆಗೆ ಕಾರಣವಾಗಿದೆ.

ಗೋವಾದಿಂದ ದೆಹಲಿ ರಾತ್ರೋರಾತ್ರಿ ಯಾನ
ಶುಕ್ರವಾರ ಸಂಜೆ ಈ ಘಟನೆ ನಡೆದಾಗ ಅಶ್ವಿ‌ನಿ ವೈಷ್ಣವ್‌ ಅವರು ಗೋವಾದಲ್ಲಿ ಇದ್ದರು. ಪಣಜಿ-ಮುಂಬೈ ವಂದೇ ಭಾರತ್‌ ರೈಲು ಉದ್ಘಾಟನೆಗಾಗಿ ಅವರು ಅಲ್ಲಿಗೆ ಹೋಗಿದ್ದರು. ಅಪಘಾತದ ಬಗ್ಗೆ ಶನಿವಾರ ಸಂಜೆ 7 ಗಂಟೆ ಸುಮಾರಿಗೆ ಅವರ ಮೊಬೈಲ್‌ಗೆ ಅಧಿಕಾರಿಗಳು ಕರೆ ಮಾಡಿ ವಿಷಯ ತಿಳಿಸಿದರು. ಸಚಿವರು ಮತ್ತು ಅವರ ತಂಡ ಕೂಡಲೇ ದೆಹಲಿಗೆ ವಿಮಾನದಲ್ಲಿ ತಲುಪಿತು.

ದೆಹಲಿ ನಿಲ್ದಾಣದಲ್ಲೇ ಕಾದು ವಿಮಾನವೇರಿದರು
ಶನಿವಾರ ಮುಂಜಾನೆ 4 ಗಂಟೆಗೆ ಒಡಿಶಾಗೆ ದೆಹಲಿಯಿಂದ ಮೊದಲ ವಿಮಾನ ಇತ್ತು. ಅವರು ತಮ್ಮ ನಿವಾಸಕ್ಕೆ ತೆರಳದೆ ದೆಹಲಿ ವಿಮಾನ ನಿಲ್ದಾಣದಲ್ಲೇ ಕಾದರು. ಬೆಳಗ್ಗೆ 3 ಗಂಟೆಗೆ ಅವರು ವಿಶೇಷ ವಿಮಾನ ಹತ್ತಿದರು. ಮೊದಲು ಬಾಲಸೋರ್‌ ತಲುಪಿ, ಅಲ್ಲಿಂದ ಘಟನಾ ಸ್ಥಳವನ್ನು ತಲುಪಿದರು. ಅಲ್ಲಿಯವರೆಗೂ ಘಟನೆ ಕುರಿತು ಕ್ಷಣಕ್ಷಣದ ಮಾಹಿತಿಯನ್ನು ಅಧಿಕಾರಿಗಳಿಂದ ಪಡೆದು, ತೆಗೆದುಕೊಳ್ಳಬೇಕಾದ ತುರ್ತು ಕ್ರಮಗಳ ಕುರಿತು ಫೋನಿನಲ್ಲೇ ಸೂಚಿಸುತ್ತಿದ್ದರು.

ಗಾಯಾಳುಗಳ ಪರಿಸ್ಥಿತಿ ಅವಲೋಕನ
ನಂತರ ಸ್ಥಳದಲ್ಲೇ ಖುದ್ದು ಇದ್ದು, ರಕ್ಷಣಾ ಕಾರ್ಯಾಚರಣೆಯ ಮೇಲ್ವಿಚಾರಣೆ ನಡೆಸಿದರು. ಅಲ್ಲದೇ ಆಗ್ನೇಯ ವಿಭಾಗದ ರೈಲ್ವೆ ಸುರಕ್ಷತಾ ಆಯುಕ್ತ ಎ.ಎಂ.ಚೌಧರಿ ಅವರ ನೇತೃತ್ವದಲ್ಲಿ ತನಿಖೆಗೆ ಆದೇಶಿಸಿದರು. ಇದೇ ವೇಳೆ ರಕ್ಷಣಾ ಸಚಿವರ ತಂಡವು, ಪ್ರಧಾನಿ ನರೇಂದ್ರ ಮೋದಿ ಮತ್ತು ಸರ್ಕಾರದ ಉನ್ನತ ಸಚಿವರಿಗೆ ಕ್ಷಣ ಕ್ಷಣದ ಮಾಹಿತಿ ಹಂಚಿಕೊಂಡರು. ಪ್ರಧಾನಿ ಮೋದಿ ಅವರು ಖುದ್ಧು ಸ್ಥಳಕ್ಕೆ ಭೇಟಿ ನೀಡಿದಾಗ, ಅವರೊಂದಿಗೆ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಪರಿಸ್ಥಿತಿಯನ್ನು ಅವಲೋಕಿಸಿದರು.

ನಿದ್ದೆ ಮಾಡದ ಸಚಿವರು
ಜತೆಗೆ ರೈಲು ದುರಂತಕ್ಕೆ ನಿಜವಾದ ಕಾರಣ ಕುರಿತು ತಿಳಿಯಲು ಸ್ಥಳದಲ್ಲೇ ಇದ್ದು ಪರಿಶೀಲನೆ ನಡೆಸಿದರು. ಮೂರು ರಾತ್ರಿಗಳು, ಎರಡು ಬೆಳಗಿನ ಜಾವನ್ನು ನಿದ್ದೆ ಇಲ್ಲದೇ ಕಳೆದಿದ್ದಾರೆ. ರಕ್ಷಣಾ ಕಾರ್ಯಾಚರಣೆ ಮತ್ತು ತನಿಖೆ ಸೂಕ್ತವಾಗಿ ನಡೆಯ ಬೇಕೆನ್ನುವ ನಿಟ್ಟಿನಲ್ಲಿ ಅವರು ಸಂಪೂರ್ಣ ಶ್ರಮಿಸಿದ್ದಾರೆ.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Scrutiny of complaint against Modi: Election Commission

Loksabha Election; ಮೋದಿ ವಿರುದ್ಧದ ದೂರು ಪರಿಶೀಲನೆ: ಚುನಾವಣ ಆಯೋಗ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.