ರಾತ್ರಿಯೆಲ್ಲ ಶ್ಮಶಾನದಿಂದ ಶ್ಮಶಾನಕ್ಕೆ ಅಧಿಕಾರಿಗಳ ಅಲೆದಾಟ!

ಅವ್ಯವಸ್ಥೆಗೆ ಸರ್ವತ್ರ ಖಂಡನೆ; ಜನಜಾಗೃತಿ ಮೂಡಿಸಲು ಆಗ್ರಹ

Team Udayavani, Apr 25, 2020, 7:34 AM IST

ರಾತ್ರಿಯೆಲ್ಲ ಶ್ಮಶಾನದಿಂದ ಶ್ಮಶಾನಕ್ಕೆ ಅಧಿಕಾರಿಗಳ ಅಲೆದಾಟ!

ಮಂಗಳೂರು: ಕೋವಿಡ್ ಸೋಂಕಿನಿಂದ ಮೃತಪಟ್ಟ ಇಬ್ಬರ ಅಂತ್ಯಸಂಸ್ಕಾರ ನಡೆಸಲು ಮಂಗಳೂರು ಸೇರಿದಂತೆ ಜಿಲ್ಲೆಯ ಕೆಲವು ಚಿತಾಗಾರಗಳ ಬಳಿ ಪ್ರತಿರೋಧ ವ್ಯಕ್ತವಾಗಿರುವುದು ಜಿಲ್ಲಾಡಳಿತಕ್ಕೆ ಒಂದು ರೀತಿಯಲ್ಲಿ ಸವಾಲಾಗಿ ಪರಿಣಮಿಸಿದೆ. ಗುರುವಾರ ಮೃತಪಟ್ಟ ಬಂಟ್ವಾಳ ಮೂಲದ ವೃದ್ಧೆ ಮೃತದೇಹದ ಅಂತ್ಯಕ್ರಿಯೆಗೆ ಆರೋಗ್ಯ ಇಲಾಖೆ ಅಧಿಕಾರಿಗಳು ರಾತ್ರಿಯೆಲ್ಲ ಶ್ಮಶಾನದಿಂದ ಶ್ಮಶಾನಕ್ಕೆ ರಾತ್ರಿಯೆಲ್ಲ ಅಲೆದಾಡಿ ಅಸಹಾಯಕತೆಗೆ ಒಳಗಾಗಬೇಕಾದ ಪರಿಸ್ಥಿತಿ ಎದುರಾಗಿರುವ ನಾಗರಿಕ ಸಮಾಜಕ್ಕೆ ಶೋಭೆ ತರುವ ವಿಚಾರವಲ್ಲ ಎಂಬುದಾಗಿ ಸಂಘಟನೆಗಳ ಮುಖಂಡರಿಂದ ಹಿಡಿದು ಸಚಿವರ ತನಕ ಹಲವರು ಖಂಡಿಸಿದ್ದಾರೆ.

ಕೋವಿಡ್ ಸೋಂಕಿನಿಂದ ಮೃತಪಟ್ಟವರ ಅಂತ್ಯಸಂಸ್ಕಾರದ ಕುರಿತು ಜನರ ಆತಂಕ-ಮಾಹಿತಿ ಕೊರತೆ ಹಾಗೂ ಆ ದಿಕ್ಕಿನಲ್ಲಿ ಜನರಲ್ಲಿ ಜಾಗೃತಿ ಮೂಡಿಸುವ ಮೂಲಕ ಮನವೊಲಿಸುವಲ್ಲಿ ನಮ್ಮ ಜನಪ್ರತಿನಿಧಿಗಳು-ಅಧಿಕಾರಿಗಳ ಸಮೂಹ ವಿಫಲಗೊಂಡಿರುವುದೇ ಈ ಎಲ್ಲ ಸಮಸ್ಯೆಗಳಿಗೆ ಮೂಲ ಎನ್ನುವುದು ಅನೇಕರ ವಾದ. ಘಟನೆ ಬಳಿಕ ಎಚ್ಚೆತ್ತುಕೊಂಡಿರುವ ದಕ್ಷಿಣ ಕನ್ನಡ ಜಿಲ್ಲಾಡಳಿತವು “ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನಿರ್ದೇಶನದಂತೆ, ಕೇಂದ್ರ ಸರಕಾರ ಹೊರಡಿಸಿರುವ ಮಾರ್ಗಸೂಚಿಯಂತೆ, ಕೋವಿಡ್ ಸೋಂಕಿನಿಂದ ಮೃತಪಟ್ಟವರ ಅಂತ್ಯಸಂಸ್ಕಾರ ನೆರವೇರಿಸಲಾಗುತ್ತಿದೆ. ಆ ಪ್ರಕಾರ ಕೋವಿಡ್ ಸೋಂಕಿತರ ಮೃತದೇಹವನ್ನು ದೂರದಿಂದ ವೀಕ್ಷಿಸಬಹುದಾಗಿದೆ. ಸ್ಪರ್ಶಿಸಲು ಅವಕಾಶವಿರುವುದಿಲ್ಲ. ಧಾರ್ಮಿಕ ಸಂಪ್ರದಾಯಗಳಿಗೆ ಅನುಗುಣವಾಗಿ ಗ್ರಂಥಗಳ ಪಠನ, ಪವಿತ್ರ ನೀರು ಸಿಂಪಡಣೆ ಇತ್ಯಾದಿಗಳನ್ನು ದೇಹವನ್ನು ಮುಟ್ಟದೆ ಮಾಡಲು ಅವಕಾಶವಿದೆ. ವೀಕ್ಷಿಸುವಾಗಲೂ ಪರಸ್ಪರ ಒಂದು ಮೀಟರ್‌ ಅಂತರ ಕಾಯ್ದುಕೊಳ್ಳುವುದು, ಮಾಸ್ಕ್ ಧಾರಣೆ ಇತ್ಯಾದಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು. “ಮೃತದೇಹವನ್ನು ಹೂಳುವುದು ಅಥವಾ ದಹನದ ಮೂಲಕ ಅಂತ್ಯಕ್ರಿಯೆ ಮಾಡಬಹುದು. ದಹಿಸಿದ ಬಳಿಕ ಬೂದಿಯಿಂದ ಯಾವುದೇ ವೈರಾಣು ಹರಡುವುದಿಲ್ಲ. ಅದ್ದರಿಂದ ಬೂದಿಯನ್ನು ಸಂಗ್ರಹಿಸಿ ಮುಂದಿನ ಧಾರ್ಮಿಕ ಆಚರಣೆಗಳನ್ನು ಮಾಡಬಹುದು’ ಎಂದು ಜಿಲ್ಲಾಡಳಿತವು ಪ್ರಕಟನೆ ಮೂಲಕ ಜನರಲ್ಲಿ ಜಾಗೃತಿ ಮೂಡಿಸಲು ಮುಂದಾಗಿದೆ.

ದಹನ, ದಫನದಿಂದ ರೋಗ ಹರಡುವುದಿಲ್ಲ
ಈ ಬಗ್ಗೆ ಉದಯವಾಣಿಗೆ ಪ್ರತಿಕ್ರಿಯಿಸಿರುವ ಜಿಲ್ಲಾ ರೋಗ ವಾಹಕ ಅಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ| ನವೀನ್‌ಚಂದ್ರ ಕುಲಾಲ್‌ ಅವರು, “ಮೃತದೇಹದ ದಹನ ಅಥವಾ ದಫನದಿಂದ ರೋಗ ಹರಡುವುದಿಲ್ಲ. ಈ ಬಗ್ಗೆ ಯಾರೂ ಭಯಪಡುವ ಅಗತ್ಯವಿಲ್ಲ. ದಹಿಸುವಾಗ 700ರಿಂದ 1,000 ಸೆಂಟಿಗ್ರೇಡ್‌ ಶಾಖ ಉತ್ಪತಿಯಾಗುತ್ತದೆ. ಆಗ ಯಾವುದೇ ವೈರಾಣು ಉಳಿಯಲಾರದು. ದಫನ ಮಾಡುವಾಗ ಸಾಕಷ್ಟು ಆಳದಲ್ಲಿ ಇಟ್ಟು ಅದರ ಮೇಲೆ ಕ್ರೀಮಿನಾಶಕಗಳನ್ನು ಸಿಂಪಡಿಸುವುದರಿಂದಲೂ ಯಾವುದೇ ಅಪಾಯವಿಲ್ಲ’ ಎಂದು ತಿಳಿಸಿದ್ದಾರೆ.

“ಮೃತ ದೇಹವನ್ನು ವಿಶೇಷವಾದ ದಪ್ಪ ಪದರವುಳ್ಳ ಮತ್ತು ವಿಶೇಷ ರಾಸಾಯನಿಕ ಹಾಗೂ ಪ್ಲಾಸ್ಟಿಕ್‌ನಂತಹ ವಸ್ತುವಿನಿಂದ ತಯಾರಿಸಿದ, ಗಾಳಿ, ನೀರು, ಅನಿಲ ಹೊರಗಡೆ ಬಾರದಂತಹ ಬ್ಯಾಗ್‌ನಲ್ಲಿರಿಸಲಾಗುತ್ತದೆ. ಇದರ ಮೇಲೆ ಇನ್ನೊಂದು ಹಾಳೆಯನ್ನು ಸುತ್ತಿ ಪ್ಯಾಕ್‌ ಮಾಡಲಾಗುತ್ತದೆ. ಈ ಪ್ರಕ್ರಿಯೆಯನ್ನು ಪಿಪಿಇ ಕಿಟ್‌ ಧರಿಸಿದ ವೈದ್ಯಕೀಯ ಸಿಬಂದಿ ನೆರವೇರಿಸುತ್ತಾರೆ. ಅದಕ್ಕೆಂದೇ ಸಿದ್ಧಪಡಿಸಿದ ಆ್ಯಂಬುಲೆನ್ಸ್‌ನಲ್ಲಿ ಚಿತಾಗಾರಕ್ಕೆ ತರುತ್ತಾರೆ. ರೋಗ ಪೀಡಿತ ವ್ಯಕ್ತಿ ಕೆಮ್ಮಿದಾಗ, ಸೀನಿದಾಗ ಅವರ ಗಂಟಲಿನಿಂದ, ಎದೆ ಯಿಂದ ದ್ರವ ಮಿಶ್ರಿತ ಗಾಳಿ ಇನ್ನೊಬ್ಬರ ಶ್ವಾಸಕೋಶ ಸೇರಿದಾಗ ಮಾತ್ರ ರೋಗ ಹರಡುತ್ತದೆ. ಮೃತ ವ್ಯಕ್ತಿಯಿಂದ ರೋಗ ಹರಡು ವುದಿಲ್ಲ’ ಡಾ| ನವೀನ್‌ ಕುಲಾಲ್‌ ವಿವರಿಸಿದ್ದಾರೆ.

ಸ್ಪಷ್ಟ ಕ್ರಮದ ಅಗತ್ಯವಿದೆ
“ಕೋವಿಡ್ ಸೋಂಕಿನಿಂದ ಮೃತಪಟ್ಟವರ ದೇಹವನ್ನು ದಹನ ಅಥವಾ ದಫ‌ನ ಮಾಡುವುದರಿಂದ ಸೋಂಕು ಹರಡುವುದಿಲ್ಲ ಎಂದು ಈಗಾಗಲೇ ಸರಕಾರದ ಮಾರ್ಗಸೂಚಿ ಹೇಳಿದೆ. ಇದನ್ನು ಜನರಿಗೆ ಮನವರಿಕೆ ಮಾಡುವಲ್ಲಿ ಜನಪ್ರತಿನಿಧಿಗಳು ಹಾಗೂ ಜಿಲ್ಲಾಡಳಿತದಿಂದ ವೈಫಲ್ಯ ಆಗಿರುವುದನ್ನು ನಾನು ಒಪ್ಪಿಕೊಳ್ಳುತ್ತೇನೆ. ಈ ನಿಟ್ಟಿನಲ್ಲಿ ಜನಪ್ರತಿನಿಧಿಗಳು ಹಾಗೂ ಜಿಲ್ಲಾಡಳಿತ ಸೇರಿಕೊಂಡು ತತ್‌ಕ್ಷಣ ಸಭೆ ನಡೆಸಿ ಸ್ಪಷ್ಟ ಕ್ರಮಗಳನ್ನು ಕೈಗೊಳ್ಳುವುದು ಅವಶ್ಯ’
– ಉಮಾನಾಥ ಕೋಟ್ಯಾನ್‌, ಮೂಲ್ಕಿ -ಮೂಡುಬಿದಿರೆ ಶಾಸಕರು

ಟಾಪ್ ನ್ಯೂಸ್

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

Rajeev Chandrashekhar

Corrupt ಡಿಕೆಶಿ ಸರ್ಟಿಫಿಕೆಟ್‌ ಬೇಕಾಗಿಲ್ಲ: ಕೇಂದ್ರ ಸಚಿವ ರಾಜೀವ್‌ ತಿರುಗೇಟು

1-wqewqe

2014 ಭರವಸೆ, 2019 ನಂಬಿಕೆ, 2024ರಲ್ಲಿ ಗ್ಯಾರಂಟಿ: ಮೋದಿ

mamata

CAA, NRC ರದ್ದು: ದೀದಿ ಶಪಥ ಪ್ರಣಾಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

Mangaluru ವೈದ್ಯಕೀಯ ಪದವೀಧರೆ ಪಿಜಿಯಲ್ಲಿ ಸಾವು

Mangaluru ವೈದ್ಯಕೀಯ ಪದವೀಧರೆ ಪಿಜಿಯಲ್ಲಿ ಸಾವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

suicide

ಕಾಶ್ಮೀರದಲ್ಲಿ ಗುಂಡು ಹಾರಿಸಿ ಬಿಹಾರ ಕಾರ್ಮಿಕನ ಹತ್ಯೆ  

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.