ಇಂದಿನಿಂದ ಯಾಂತ್ರಿಕ ಮೀನುಗಾರಿಕೆಗೆ ಅಧಿಕೃತ ನಿಷೇಧ


Team Udayavani, Jun 15, 2020, 5:55 AM IST

ಇಂದಿನಿಂದ ಯಾಂತ್ರಿಕ ಮೀನುಗಾರಿಕೆಗೆ ಅಧಿಕೃತ ನಿಷೇಧ

ಮಲ್ಪೆ /ಗಂಗೊಳ್ಳಿ : ನಾಳೆ ಯಿಂದ 47 ದಿನಗಳವರೆಗೆ ಯಾಂತ್ರಿಕ ಮೀನುಗಾರಿಕೆಗೆ ಅಧಿಕೃತವಾಗಿ ನಿಷೇಧ ಹೇರಲಾಗಿದೆ. 10 ಅಶ್ವಶಕ್ತಿ ಮೇಲ್ಪಟ್ಟ ಎಂಜಿನ್‌ ಬಳಸಿಕೊಂಡು ಮೀನುಗಾರಿಕೆ ನಡೆಸುವಂತಿಲ್ಲ. ಹಾಗಾಗಿ ಜು. 31ರ ವರೆಗೆ ಬಹುತೇಕ ಕರಾವಳಿಯ ಎಲ್ಲ ಬಂದರುಗಳಲ್ಲಿ ಯಾಂತ್ರಿಕ ಮೀನುಗಾರಿಕೆ ಸ್ಥಗಿತಗೊಳ್ಳಲಿದೆ.

ಪ್ರತಿ ವರ್ಷ ಮೇ 31ರಿಂದ ಯಾಂತ್ರೀಕೃತ ಮೀನುಗಾರಿಕೆ ಮುಕ್ತಾಯಗೊಳ್ಳುತ್ತಿದೆ. ಈ ಬಾರಿ ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಮೀನುಗಾರರ ಸಂಕಷ್ಟವನ್ನು ಅರಿತ ಕೇಂದ್ರ ಮತ್ತು ರಾಜ್ಯ ಸರಕಾರ ಯಾಂತ್ರೀಕೃತ ಮೀನು ಗಾರಿಕೆಗೆ ಜೂ. 14ರ ವರೆಗೆ ಅವಕಾಶ ನೀಡಿತ್ತು.

ಮಲ್ಪೆ ಮೀನುಗಾರಿಕೆ ಬಂದರಿನಲ್ಲಿ ಕಾರ್ಮಿಕರ ಕೊರತೆ, ಸರಿಯಾದ ಮಾರುಕಟ್ಟೆ ಇಲ್ಲದೆ ಇನ್ನಿತರ ಕಾರಣಗಳಿಂದ ಮೇ 31ರಿಂದಲೇ ದೋಣಿ ಕಡಲಿಗೆ ಹೋಗುವುದನ್ನು ನಿಲ್ಲಿಸಲಾಗಿದ್ದು, ಮೀನು ಮಾರಾಟದ ಚಟುವಟಿಕೆಗಳು ಜೂ. 8ರ ವರೆಗೆ ವಿಸ್ತರಿಸಲಾಗಿತ್ತು. ಪ್ರಸ್ತುತ ಸಣ್ಣ ದೋಣಿಗಳಿಂದ ಬರುವ ಮೀನು ಗಳು ಸಿಗುತ್ತಿದ್ದು, ಮೀನುಗಳ ದರವೂ ದುಬಾರಿ. ಸದ್ಯ ಮಾರುಕಟ್ಟೆಯಲ್ಲಿ ಸ್ಥಳೀಯ ಮೀನಿನ ಜತೆಯಲ್ಲಿ ಹೊರ ರಾಜ್ಯದ ಮೀನಿನ ಮಾರಾಟವೂ ನಡೆಯುತ್ತಿದೆ.

ಸ್ಥಳಾವಕಾಶದ ಕೊರತೆ
ಮಲ್ಪೆ ಮೀನುಗಾರಿಕೆ ಬಂದರಿನಲ್ಲಿ ಸುಮಾರು 2,000 ಯಾಂತ್ರೀಕೃತ ಬೋಟುಗಳಿವೆ. ಈಗಿರುವ 1 ಮತ್ತು 2ನೇ ಹಂತದ ದಕ್ಕೆಯಲ್ಲಿ 600 ಬೋಟುಗಳು, 3ನೇ ಹಂತದ ಬಾಪುತೋಟದ ಬಳಿ 300ರಷ್ಟು ಬೋಟುಗಳಿಗೆ ಮಾತ್ರ ನಿಲ್ಲಲು ಅವಕಾಶವಿದೆ. ಉಳಿದಂತೆ ಎಲ್ಲ ಬೋಟುಗಳನ್ನು ಇತರ ಪ್ರದೇಶಗಳಲ್ಲಿ ಹೊಂದಾಣಿಕೆ ಮಾಡಿಕೊಳ್ಳಬೇಕಾಗುತ್ತದೆ. ಒಂದರ ಹಿಂದೆ ಒಂದರಂತೆ 10-14 ಸಾಲುಗಳು ನಿಲ್ಲುವ ಪರಿಸ್ಥಿತಿ ಇದೆ. ಮರದ ಮತ್ತು ಸ್ಟೀಲ್‌ ಬೋಟುಗಳು ಇರುವುದರಿಂದ ಬಹಳಷ್ಟು ಬಾರಿ ಬೋಟುಗಳು ಒಂದಕ್ಕೊಂದು ತಾಗಿ ಹಾನಿ ಸಂಭವಿಸುತ್ತದೆ. ಮಳೆಗಾಲದಲ್ಲಿ ಹೊಳೆಯ ನೀರಿನ ಹರಿವಿನ ಸೆಳೆತ ಹೆಚ್ಚಾ ದಾಗ ಮತ್ತಷ್ಟು ಅಪಾಯ ಉಂಟಾಗುವ ಸಾಧ್ಯತೆ ಇದೆ ಎನ್ನುತ್ತಾರೆ ಬೋಟು ಮಾಲಕ ಸತೀಶ್‌ ಕುಂದರ್‌.

ಗಂಗೊಳ್ಳಿ : ಯಾಂತ್ರಿ ಕ ಮೀನುಗಾರಿಕೆ ಅಧಿಕೃತ ಮುಕ್ತಾಯ
ಗಂಗೊಳ್ಳಿ: ಈ ಋತುವಿನ ಯಾಂತ್ರೀಕೃತ ಮೀನುಗಾರಿಕೆಗೆ ಕೇಂದ್ರ ಸರಕಾರ ನೀಡಿದ್ದ ಹೆಚ್ಚುವರಿ ಕಾಲಾವ ಕಾಶವು ಜೂ.14ಕ್ಕೆ ಮುಗಿದಿದೆ. ಇನ್ನು ಜು. 31 ರ ವರೆಗೆ ಆಳ ಸಮುದ್ರ ಮೀನುಗಾರಿಕೆಗೆ ರಜೆಯಿದ್ದು, ಆ.1ರಿಂದ ಮತ್ತೆ ಆರಂಭವಾಗಲಿದೆ.

ರವಿವಾರ ಗಂಗೊಳ್ಳಿ ಬಂದರಿನಲ್ಲಿ ಬೋಟ್‌ಗಳನ್ನು ಸಮುದ್ರದಿಂದ ಮೇಲೆಳೆದು ಮಳೆಗಾಲದಲ್ಲಿ ಏನೂ ಆಗದಂತೆ ಸುರಕ್ಷಿತವಾಗಿ ಇಡುವ ಕೊನೆಯ ಹಂತದ ಕೆಲಸದಲ್ಲಿ ಮೀನುಗಾರರು ನಿರತರಾಗಿದ್ದರು. ಕೆಲವರು ಬೋಟ್‌ಗಳಿಗೆ ಈಗಾಗಲೇ ಮಳೆ ನೀರು ಬೀಳದಂತೆ ತಟ್ಟಿಯ ಮಾಡುಗಳನ್ನು ನಿರ್ಮಿಸಿದ್ದರೆ, ಮತ್ತೆ ಕೆಲವರು ಈಗಷ್ಟೇ ನಿರ್ಮಿಸುತ್ತಿದ್ದಾರೆ.

ಪ್ರತಿ ವರ್ಷದಂತೆ ಈ ಋತುವಿನ ಆಳ ಸಮುದ್ರ ಮೀನುಗಾರಿಕೆಯೂ ಕೂಡ ಮೇ 31 ಕ್ಕೆ ಮುಗಿಯಬೇಕಿತ್ತು. ಆದರೆ ಈ ಬಾರಿ ಲಾಕ್‌ಡೌನ್‌ನಿಂದಾಗಿ ಮೀನುಗಾರಿಕೆಗೆ ಕೆಲ ಕಾಲ ಅಡ್ಡಿಯಾಗಿದ್ದರಿಂದ ಕೇಂದ್ರ ಸರಕಾರ ರಜೆಯನ್ನು ಸ್ವಲ್ಪ ಮಟ್ಟಿಗೆ ವಿಸ್ತರಿಸಿದ್ದು, ಜೂ.14ರ ವರೆಗೆ ಮೀನುಗಾರಿಕೆ ಮಾಡಬಹುದು ಎನ್ನುವ ಆದೇಶ ಹೊರಡಿಸಿತ್ತು. ಆದರೆ ಜೂ. 1 ರಿಂದ 4ರವರೆಗೆ ಚಂಡಮಾರು ತದ ಮುನ್ಸೂಚನೆಯಿಂದಾಗಿ ಮೀನುಗಾರಿಕೆಗೆ ತೆರಳ ದಂತೆ ಸೂಚಿಸಲಾಗಿತ್ತು.

ಆಗಲೇ ಬಹುತೇಕ ಮೀನುಗಾರರು ಬೋಟ್‌ಗಳನ್ನು ದಡಕ್ಕೆಳೆದು ತಂದಿದ್ದರು. ಶೇ. 80ರಷ್ಟು ಬೋಟ್‌ಗಳು ಅವಧಿಗೂ ಮೊದಲೇ ಮೀನುಗಾರಿಕೆ ಮುಗಿಸಿದ್ದವು.

19 ಸಾವಿರ ಮೆಟ್ರಿಕ್‌ ಟನ್‌
ಈ ವರ್ಷದಲ್ಲಿ ಕುಂದಾಪುರ ತಾಲೂ ಕಿನ ಗಂಗೊಳ್ಳಿ, ಮರವಂತೆ, ತ್ರಾಸಿ, ಕೊಡೇರಿ, ಉಪ್ಪುಂದ, ಮಡಿಕಲ್‌, ಶಿರೂರು ಮತ್ತಿತರ ಕಡೆಗಳಲ್ಲಿ ಒಟ್ಟು 19 ಸಾವಿರ ಮೆಟ್ರಿಕ್‌ ಟನ್‌ಗೂ ಅಧಿಕ ಮೀನು ಸಂಗ್ರಹವಾಗಿದ್ದು, ಅಂದಾಜು 30,100 ಲಕ್ಷ ರೂ. ವಾರ್ಷಿಕ ವಹಿವಾಟು ಆಗಿದೆ.
ಆಶಾದಾಯಕವಾಗಿರಲಿಲ್ಲ

ಮತ್ಸ್ಯಕ್ಷಾಮ, ಚಂಡಮಾರುತ, ಹವಾಮಾನ ವೈಪರೀತ್ಯ, ಲೈಟ್‌ ಫಿಶಿಂಗ್‌, ಕೊರೊನಾದಿಂದಾಗಿ ಲಾಕ್‌ಡೌನ್‌ ಮುಂತಾದ ಅಡ್ಡಿ, ಸವಾಲು ಗಳಿಂದ ಕೂಡಿದ್ದ ಈ ಮೀನು ಗಾರಿಕೆ ಋತುವು ಅಷ್ಟೇನೂ ಆಶಾ ದಾಯಕವಾಗಿರಲಿಲ್ಲ ಎನ್ನುವುದು ಮೀನುಗಾರರ ಅಭಿಪ್ರಾಯ.

ಜೂ.22ರಿಂದ ನಾಡದೋಣಿ ಕಡಲಿಗೆ
ಯಾಂತ್ರಿಕ ಮೀನುಗಾರಿಕೆ ನಿಷೇಧ ಅವಧಿಯಲ್ಲಿ ನಾಡದೋಣಿಗಳು ಸಮುದ್ರತೀರ ಮತ್ತು ಹೊಳೆಭಾಗದಲ್ಲಿ ಮೀನುಗಾರಿಕೆ ನಡೆಸುತ್ತವೆ. ಈ ಬಾರಿ ಜೂ. 22ರಿಂದ ನಾಡದೋಣಿಗಳು ಕಡಲಿಗಿಳಿಯಲಿವೆ ಎಂದು ನಾಡದೋಣಿ ಮೀನುಗಾರರ ಸಂಘದ ಅಧ್ಯಕ್ಷ ಜನಾರ್ದನ ತಿಂಗಳಾಯ ತಿಳಿಸಿದ್ದಾರೆ.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.