ಸಮುದಾಯಕ್ಕೆ ಒಮಿಕ್ರಾನ್‌ ; ದಿಲ್ಲಿ, ಮುಂಬಯಿಯಲ್ಲಿ ಹಲವು ಮಾದರಿ ಪರೀಕ್ಷೆಯಲ್ಲಿ ದೃಢ


Team Udayavani, Jan 1, 2022, 7:00 AM IST

ಸಮುದಾಯಕ್ಕೆ ಒಮಿಕ್ರಾನ್‌ ; ದಿಲ್ಲಿ, ಮುಂಬಯಿಯಲ್ಲಿ ಹಲವು ಮಾದರಿ ಪರೀಕ್ಷೆಯಲ್ಲಿ ದೃಢ

ಹೊಸದಿಲ್ಲಿ: ದೇಶದ ರಾಜಧಾನಿ ಹೊಸದಿಲ್ಲಿ ಮತ್ತು ವಾಣಿಜ್ಯ ರಾಜಧಾನಿ ಮುಂಬಯಿಯಲ್ಲಿ ಒಮಿಕ್ರಾನ್‌ ನಿರೀಕ್ಷೆಗಿಂತಲೂ ಹೆಚ್ಚು ಹರಡಿದೆ ಎಂದು ಹೇಳಲಾ ಗುತ್ತಿದೆ. ಮುಂಬಯಿಯಲ್ಲಿ ಡಿ.21 ಮತ್ತು ಡಿ.22 ರಂದು ಸಂಗ್ರಹಿಸಲಾಗಿದ್ದ 375 ಮಂದಿಯ ಮಾದ ರಿಯ ಪೈಕಿ 141 ಮಂದಿಗೆ (ಶೇ.37) ಒಮಿಕ್ರಾನ್‌ ದೃಢ ಪಟ್ಟಿದೆ.

ರೂಪಾಂತರಿ ದೃಢಪಟ್ಟ ಯಾರೂ ವಿದೇಶ ಪ್ರಯಾಣ ಮಾಡಿಯೇ ಇಲ್ಲ ಎನ್ನುವುದು ಗಮ ನಾರ್ಹ. ಈ ಪೈಕಿ 89 ಮಂದಿ ಪುರುಷರು ಮತ್ತು 52 ಮಂದಿ ಮಹಿಳೆಯರಾಗಿದ್ದಾರೆ ಎಂದು ಬೃಹನ್‌ ಮುಂಬಯಿ ಮಹಾನಗರ ಪಾಲಿಕೆ ಹೇಳಿದೆ. 7 ಮಂದಿಗೆ ಮಧ್ಯಮ ಪ್ರಮಾಣದ ಲಕ್ಷಣ, 39 ಮಂದಿಗೆ ಅಲ್ಪ ಪ್ರಮಾಣದ ಲಕ್ಷಣ ಇದೆ ಎಂದೂ ಪರೀಕ್ಷೆಯಲ್ಲಿ ಖಚಿತವಾಗಿದೆ. ಮುಂಬಯಿಯಲ್ಲಿ ಶುಕ್ರವಾರ ಒಂದೇ ದಿನ 8,067 ಹೊಸ ಸೋಂಕು ದೃಢಪಟ್ಟಿದೆ. ಗುರುವಾರಕ್ಕೆ ಹೋಲಿಕೆ ಮಾಡಿದರೆ ಶೇ.50 ಹೆಚ್ಚಾಗಿದೆ. ಇದರ ಜತೆಗೆ ಜ.15ರ ವರೆಗೆ ಸಂಜೆ 5 ಗಂಟೆಯಿಂದ ಬೆಳಗ್ಗೆ 5ರ ವರೆಗೆ ಪಾರ್ಕ್‌, ಸಮುದ್ರ ಕಿನಾರೆ ಸೇರಿದಂತೆ ಸಾರ್ವಜನಿಕ ಸ್ಥಳಗಳಿಗೆ ಪ್ರವೇಶ ನಿಷೇಧಿಸಲಾಗಿದೆ.

ಹೊಸದಿಲ್ಲಿಯಲ್ಲಿನ ಶೇ.50 ಮಂದಿಯಲ್ಲಿ ರೂಪಾಂತರಿ ಕೇಸು ಇದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಹೇಳಿದೆ. ರಾಷ್ಟ್ರ ರಾಜಧಾನಿ ವ್ಯಾಪ್ತಿಯಲ್ಲಿ ಹೊಸ ಪ್ರಕರಣ ಸಾಮುದಾಯಿಕವಾಗಿ ಹರಡುತ್ತಿದೆ ಎಂದು ಗುರುವಾರ ದಿಲ್ಲಿ ಆರೋಗ್ಯ ಸಚಿವ ಸತ್ಯೇಂದ್ರ ಕುಮಾರ್‌ ಜೈನ್‌ ಹೇಳಿದ್ದರು. ಡಿ.12ರಿಂದ ಬಳಿಕ ಹೊಸದಿಲ್ಲಿಯಲ್ಲಿ ನಡೆಸಲಾಗಿರುವ ಕೊರೊನಾ ಸೋಂಕಿನ ಪರೀಕ್ಷೆಗಳ ಪೈಕಿ ಶೇ.50ನ್ನು ವಂಶವಾಹಿ ಪರೀಕ್ಷೆಗೆ ಒಳಪಡಿಸ ಲಾಗಿತ್ತು. ಡಿಸೆಂಬರ್‌ನಲ್ಲಿಯೇ ದಿಲ್ಲಿಯಲ್ಲಿ 9 ಮಂದಿ ಸೋಂಕಿನಿಂದ ಅಸುನೀಗಿದ್ದಾರೆ.

ಪರೀಕ್ಷೆಗೆ ಸೂಚನೆ: ಜ್ವರ, ಕೆಮ್ಮು, ಗಂಟಲು ಕೆರತ, ತಲೆನೋವು, ಉಸಿರಾಟದ ತೊಂದರೆ, ಮೈ-ಕೈ ನೋವು, ಆಯಾಸ, ರುಚಿ ಅಥವಾ ವಾಸನೆ ಗ್ರಹಿಕೆ ಇಲ್ಲದಿರು ವುದು ಮತ್ತು ಅತಿಸಾರದಿಂದ ಬಳಲುವವರನ್ನು ಕೊರೊನಾ ಶಂಕಿತರೆಂದು ಪರಿಗಣಿಸಬೇಕು. ಅವರಿಗೆ ಕಡ್ಡಾಯವಾಗಿ ಕೊರೊನಾ ಪರೀಕ್ಷೆ ಮಾಡಬೇಕು ಎಂದು ಕೇಂದ್ರ ಸರಕಾರ ಎಲ್ಲ ರಾಜ್ಯಗಳಿಗೆ ಸೂಚಿಸಿದೆ. ರೋಗಲಕ್ಷಣವಿರುವವರು ತಮ್ಮನ್ನು ತಾವು ಪ್ರತ್ಯೇಕ ವಾಗಿಸಿಕೊಳ್ಳಬೇಕು, ಅನಂತರ ಕೊರೊನಾ ಪರೀಕ್ಷೆಗೆ ಒಳಗಾಗಬೇಕು. ಆರ್‌ಟಿ-ಪಿಸಿಆರ್‌ ಪರೀಕ್ಷೆಗೆ ಹೆಚ್ಚು ಬೇಡಿಕೆಯಿರುವ ಹಿನ್ನೆಲೆಯಲ್ಲಿ ರ್ಯಾಪಿಡ್‌ ಆ್ಯಂಟಿಜೆನ್‌ ಪರೀಕ್ಷೆಯನ್ನೂ ಹೆಚ್ಚಿಸಬೇಕು. ಹಾಗೆಯೇ ಸರ ಕಾರದಿಂದ ಅನುಮೋದನೆ ಪಡೆದಿರುವ ಕೊರೊನಾ ಪರೀಕ್ಷಾ ಕಿಟ್‌ ಬಳಸಿ ಜನರು ತಮ್ಮ ಮನೆಯಲ್ಲೇ ಕೊರೊನಾ ಪರೀಕ್ಷೆ ಮಾಡಿಕೊಳ್ಳುವಂತೆ ಸೂಚಿಸಬೇಕು ಎಂದು ಸರಕಾರ ರಾಜ್ಯಗಳಿಗೆ ತಿಳಿಸಿದೆ.

ಇದನ್ನೂ ಓದಿ:ದೆಹಲಿಯಲ್ಲಿ ಯುವತಿಯ ಗ್ಯಾಂಗ್ ರೇಪ್ : ಅಪ್ರಾಪ್ತ ವಯಸ್ಕನೂ ಭಾಗಿ

ಇಸ್ರೇಲ್‌ನಲ್ಲಿ ಮೊದಲ “ಫ್ಲೊರೋನಾ’ ಕೇಸು: ಇಸ್ರೇಲ್‌ನಲ್ಲಿ “ಫ್ಲೊರೋನಾ’ದ ಮೊದಲ ಪ್ರಕರಣ ದೃಢಪಟ್ಟಿದೆ. ಎರಡು ಬಾರಿ ಕೊರೊನಾ ಮತ್ತು ಜ್ವರ ಸೇರಿಕೊಂಡು ಬರುವ ಆರೋಗ್ಯ ಸಮಸ್ಯೆಗೆ ಈ ಹೆಸರು ಇರಿಸಲಾಗಿದೆ. ಈ ನಡುವೆ, ರೋಗನಿರೋಧಕ ಶಕ್ತಿ ಕಡಿಮೆ ಇರುವವರಿಗೆ ನಾಲ್ಕನೇ ಡೋಸ್‌ ಲಸಿಕೆ ನೀಡಲು ಅಲ್ಲಿನ ಸರಕಾರ ಆದೇಶಿಸಿದೆ.

ಇದೇ ವೇಳೆ, ದೇಶದಲ್ಲಿ ಡೆಲ್ಟಾ ರೂಪಾಂತರಿಯನ್ನು ಹಿಂದಿಕ್ಕಿ ಒಮಿಕ್ರಾನ್‌ ಪ್ರವರ್ಧಮಾನಕ್ಕೆ ಬರುತ್ತಿದೆ. ಗುರುವಾರದಿಂದ ಶುಕ್ರವಾರದ ಅವಧಿಯಲ್ಲಿ 16,156 ಹೊಸ ಕೊರೊನಾ ಪ್ರಕರಣಗಳು ದೃಢಪಟ್ಟಿವೆ.

ರಾತ್ರಿ ಕರ್ಫ್ಯೂನಿಂದ ಫ‌ಲವಿಲ್ಲ: ಡಬ್ಲ್ಯುಎಚ್‌ಒ
ದೇಶದ ಕೆಲವು ರಾಜ್ಯಗಳಲ್ಲಿ ಜಾರಿ ಮಾಡಿರುವ ರಾತ್ರಿ ಕರ್ಫ್ಯೂನಿಂದ ಒಮಿಕ್ರಾನ್‌ ನಿಯಂತ್ರಣ ಸಾಧ್ಯವಿಲ್ಲ. ಅದನ್ನು ಯಾವುದೇ ವೈಜ್ಞಾನಿಕವಾಗಿ ಸಾಬೀತು ಮಾಡಲು ಸಾಧ್ಯವಿಲ್ಲ ಎಂದು ಡಬ್ಲ್ಯುಎಚ್‌ಒದ ಮುಖ್ಯ ವಿಜ್ಞಾನಿ ಡಾ| ಸೌಮ್ಯಾ ಸ್ವಾಮಿನಾಥನ್‌ ತಿಳಿಸಿದ್ದಾರೆ. ಸಂದರ್ಶನವೊಂದ ರಲ್ಲಿ ಮಾತನಾಡಿದ ಅವರು, ವೈಜ್ಞಾನಿಕ ಆಧಾರಿತವಾಗಿ ಸೋಂಕು ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕು. ಜನರು ಭೀತರಾಗದೆ, ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಬೇಕು. ಜಗತ್ತಿನಾದ್ಯಂತ ಸೋಂಕಿನ ಕಾರಣದಿಂದಾಗಿ ಮತ್ತೆ ಆಸ್ಪತ್ರೆಗೆ ದಾಖ ಲಾಗುವವರ ಸಂಖ್ಯೆ ಹೆಚ್ಚಾಗುತ್ತದೆ ಎಂದರು.

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.