ಇಂದು ಪ್ರಧಾನಿ ಮೋದಿ ನೇಪಾಲಕ್ಕೆ; ಬುದ್ಧನ ಜನ್ಮಸ್ಥಳದಲ್ಲೇ ಬುದ್ಧ ಪೂರ್ಣಿಮೆ ಆಚರಣೆ
ನೇಪಾಲ ಪ್ರಧಾನಿ ಜತೆಗೆ ದ್ವಿಪಕ್ಷೀಯ ಮಾತುಕತೆ
Team Udayavani, May 16, 2022, 7:30 AM IST
ಬುದ್ಧಪೂರ್ಣಿಮೆಯ ದಿನವಾದ ಸೋಮವಾರ ಪ್ರಧಾನಿ ನರೇಂದ್ರ ಮೋದಿ ಅವರು ನೇಪಾಲಕ್ಕೆ ಭೇಟಿ ನೀಡಲಿದ್ದಾರೆ. ಬುದ್ಧನ ಜನ್ಮಸ್ಥಳವಾದ ಲುಂಬಿನಿಯಲ್ಲಿ ಬುದ್ಧ ಪೂರ್ಣಿಮೆ ಆಚರಿಸಿ, ನೇಪಾಲ ಪ್ರಧಾನಿ ಶೇರ್ ಬಹಾದ್ದೂರ್ ದೇಬಾ ಜತೆಗೆ ದ್ವಿಪಕ್ಷೀಯ ಮಾತುಕತೆಯನ್ನೂ ನಡೆಸಲಿದ್ದಾರೆ. 2014ರ ಬಳಿಕ ಮೋದಿ ಅವರ 5ನೇ ನೇಪಾಲ ಭೇಟಿ ಇದಾಗಿದೆ.
ಕಾರ್ಯಸೂಚಿಗಳೇನು?
– ನೇಪಾಲ ಪ್ರಧಾನಿ ಶೇರ್ ಬಹಾದ್ದೂರ್ ದೇಬಾ ಜತೆ ದ್ವಿಪಕ್ಷೀಯ ಮಾತುಕತೆ.
– ಮಾಯಾದೇವಿ ದೇಗುಲದಲ್ಲಿ ಪೂಜೆ.
– ಲುಂಬಿನಿಯಲ್ಲಿ ಬೌದ್ಧ ಸಂಸ್ಕೃತಿ ಮತ್ತು ಪರಂಪರೆಗೆ ಸಂಬಂಧಿಸಿದ ಭಾರತೀಯ ಅಂತಾರಾಷ್ಟ್ರೀಯ ಕೇಂದ್ರಕ್ಕೆ ಶಿಲಾನ್ಯಾಸ.
– ವಿವಿಧ ಒಪ್ಪಂದಗಳಿಗೆ ಸಹಿ.
– ಬುದ್ಧ ಜಯಂತಿ ಕಾರ್ಯಕ್ರಮದಲ್ಲಿ ಭಾಗಿ. ನೇಪಾಲ ಮತ್ತು ಭಾರತೀಯ ನಾಗರಿಕರನ್ನು ಉದ್ದೇಶಿಸಿ ಭಾಷಣ.
ಭೇಟಿಯ ಉದ್ದೇಶ
– ಭಾರತ-ನೇಪಾಲ ಬಾಂಧವ್ಯ ವೃದ್ಧಿಯ ಮೂಲಕ ಚೀನದ ಪ್ರಾಬಲ್ಯ ತಡೆಗೆ ಯತ್ನಿಸುವುದು.
-ಉಭಯ ದೇಶಗಳ ನಡುವೆ ವ್ಯಾಪಾರ ಮತ್ತು ಸಂಪರ್ಕವನ್ನು ಮತ್ತಷ್ಟು ಹೆಚ್ಚಿಸುವುದು.
– ಮೂಲ ಸೌಕರ್ಯಗಳನ್ನು ಹೆಚ್ಚಿಸುವ ಮೂಲಕ ಗಡಿ ಪ್ರದೇಶಗಳ ಸಮಗ್ರ ಅಭಿವೃದ್ಧಿ ಮಾಡುವುದು.
– ಬುದ್ಧಿಸಂ ನೊಂದಿಗೆ ಭಾರತದ ಜಾಗತಿಕ ಸಂಬಂಧವನ್ನು ಪುನಃಶ್ಚೇತನ ಗೊಳಿಸುವುದು.
ಚೀನ ಪ್ರಾಬಲ್ಯ ತಗ್ಗಿಸುವ ಯತ್ನ
ನೇಪಾಲದಲ್ಲಿ ಪ್ರಾಬಲ್ಯ ಹೆಚ್ಚಿಸಿಕೊಳ್ಳಲು ಚೀನವು “ಸಾಫ್ಟ್ ಬುದ್ಧಿಸಂ’ ಧೋರಣೆ ಅನುಸರಿ ಸುತ್ತಿದೆ. ಈಗಾಗಲೇ ಆ ದೇಶದಲ್ಲಿ ಚೀನ ಭಾರೀ ಪ್ರಮಾಣದ ಹೂಡಿಕೆಯನ್ನೂ ಮಾಡಿದೆ. ಹೀಗಾಗಿ ಮಾಜಿ ಪ್ರಧಾನಿ ಓಲಿ ಅವಧಿಯಲ್ಲಿ ಹದಗೆಟ್ಟಿದ್ದ ಭಾರತ-ನೇಪಾಲ ಸಂಬಂಧವನ್ನು ಮತ್ತೆ ಗಟ್ಟಿಗೊಳಿಸಿ ಚೀನದ ಪ್ರಾಬಲ್ಯವನ್ನು ತಗ್ಗಿಸುವುದು ಭಾರತದ ಉದ್ದೇಶವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ
America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್ ಬೈಬಲ್ ಮಾರಾಟ!
Baltimore bridge collapse; ಆರು ಕಾರ್ಮಿಕರು ನಾಪತ್ತೆ: ಪತ್ತೆ ಕಾರ್ಯ ಸ್ಥಗಿತ
Anjali Chakra – Sufi Malik; ಮದುವೆಗೂ ಮುನ್ನ ಭಾರತ-ಪಾಕ್ ಸಲಿಂಗಿ ಜೋಡಿ ಬ್ರೇಕಪ್!
H5N1: ವಿಯೆಟ್ನಾಂನಲ್ಲಿ ಹಕ್ಕಿಜ್ವರಕ್ಕೆ ಮೊದಲ ಬಲಿ!
MUST WATCH
ಹೊಸ ಸೇರ್ಪಡೆ
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ