ಸೋಮವಾರ ಸಂತೆ ಬಂದ್ರೆ ಪಪಂ ಸಿಬ್ಬಂದಿಗೆ ಹಬ್ಬ


Team Udayavani, Nov 25, 2021, 10:58 AM IST

4maket

ಕಾಳಗಿ: ಪಟ್ಟಣ ಗ್ರಾಮ ಪಂಚಾಯಿತಿಯಿಂದ ಪಟ್ಟಣ ಪಂಚಾಯಿತಿಗೆ ಮೇಲ್ದರ್ಜೆಗೇರಿದ್ದು, ಇಲ್ಲಿ ನಡೆಯುವ “ಸೋಮವಾರ’ ಸಂತೆ ಪಟ್ಟಣ ಪಂಚಾಯಿತಿ ಸಿಬ್ಬಂದಿಗೆ ಹಬ್ಬವಿದ್ದಂತೆ ಆಗಿದೆ. ಇಲ್ಲಿ ಚುನಾಯಿತ ಜನಪ್ರತಿನಿಧಿಗಳು ಇಲ್ಲದೇ ಇರುವುದರಿಂದ ಈ ಕುರಿತು ಪ್ರಶ್ನಿಸುವವರು ಇಲ್ಲದಂತಾಗಿದೆ.

ಪ್ರತಿ “ಸೋಮವಾರ’ ನಡೆಯುವ ಸಂತೆಯಲ್ಲಿ ವ್ಯಾಪಾರಿಗಳಿಂದ ತಮಗಿಚ್ಛೆ ಬಂದಂತೆ ಪಪಂ ಸಿಬ್ಬಂದಿ ಕರ ವಸೂಲಿ ಮಾಡುತ್ತಿದ್ದಾರೆ. ಸೋಮವಾರ ಸಂತೆ ಪಟ್ಟಣದ ಸುತ್ತಮುತ್ತಲಿನ 50 ಹಳ್ಳಿಗಳಲ್ಲಿ ಪ್ರಖ್ಯಾತಿ ಪಡೆದಿದೆ. ಸಂತೆಗೆ ನೂರಾರು ಸಂಖ್ಯೆಯಲ್ಲಿ ವ್ಯಾಪಾರಸ್ಥರು ವಿವಿಧ ಸ್ಥಳಗಳಿಂದ ತಮ್ಮ ಗಂಟುಮೂಟೆ ಕಟ್ಟಿಕೊಂಡು ಬರುತ್ತಾರೆ. ಇಲ್ಲಿಗೆ ವ್ಯಾಪಾರಕ್ಕೆ ಬರುವ ಪ್ರತಿಯೊಬ್ಬರಿಂದಲೂ ತೆರಿಗೆ ನೆಪದಲ್ಲಿ ಪಪಂ ಸಿಬ್ಬಂದಿ ಹಣ ವಸೂಲಿ ಮಾಡುತ್ತಿದ್ದಾರೆ. ಇದರಿಂದ ವ್ಯಾಪಾರಸ್ಥರು ಬೇಸತ್ತು ಹೋಗಿದ್ದಾರೆ.

ಪಪಂ ಸಿಬ್ಬಂದಿ ವ್ಯಾಪಾರಿಗಳಿಂದ ಪಡೆಯುವ ಹಣಕ್ಕೆ ಯಾವುದೇ ರಸೀದಿ ನೀಡುವುದಿಲ್ಲ. ಬಿಳಿ ಹಾಳೆ ತುಂಡು ಮಾಡಿಕೊಂಡು 10ರೂ., 20ರೂ., 30ರೂ., 50ರೂ. ಹೀಗೆ ಮನಬಂದಂತೆ ಕೈಯಿಂದಲೇ ಬರೆದುಕೊಟ್ಟು ಹಣ ವಸೂಲಿ ಮಾಡುತ್ತಿದ್ದಾರೆ. ಬಹುತೇಕ ರೈತರೇ ವ್ಯಾಪಾರಸ್ಥರಾಗಿದ್ದು, ರಸೀದಿ ತೆಗೆದುಕೊಂಡು ನಾವೇನು ಮಾಡೋಣ ಎಂದು ಹಣ ನೀಡಿ ಕಳಿಸುತ್ತಿದ್ದಾರೆ.

ತೆರಿಗೆ ಹೆಸರಲ್ಲಿ ಈ ರೀತಿ ವಸೂಲಿಯಾಗುವ ಹಣ ಸರ್ಕಾರದ ಬೊಕ್ಕಸಕ್ಕೆ ಸೇರುವುದೇ ಇಲ್ಲ. ಕಳೆದ ಒಂದೂವರೆ ವರ್ಷದಿಂದ ಇದೇ ರೀತಿಯಾಗಿ ಬಿಳಿ ಚೀಟಿ ಬರೆದುಕೊಡುತ್ತಿದ್ದಾರೆ. ಅಲ್ಲದೇ ಕರ ವಸೂಲಿ ಮಾಡುತ್ತಿರುವ ಪಪಂ ಸಿಬ್ಬಂದಿ ನಮ್ಮ ಗಂಟು ಮೂಟೆಗಳನ್ನು ನೋಡಿ ಮನಸ್ಸಿಗೆ ತೋಚಿದಷ್ಟು ಹಣವನ್ನು ಚೀಟಿಯಲ್ಲಿ ಬರೆಯುತ್ತಿದ್ದಾರೆ. ಬೇರೆ ಊರಿನಿಂದ ವ್ಯಾಪಾರಕ್ಕೆ ಬರುವ ನಾವು ತಕರಾರು ಮಾಡದೇ ಸುಮ್ಮನೇ ಅವರು ಕೇಳಿದಷ್ಟು ಹಣ ನೀಡಿ ಸುಮ್ಮನಾಗುತ್ತಿದ್ದೇವೆ ಎಂದು ಕೆಲವು ತರಕಾರಿ ವ್ಯಾಪಾರಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸರ್ಕಾರ ಶೀಘ್ರವೇ ಪಟ್ಟಣ ಪಂಚಾಯಿತಿ ಚುನಾವಣೆ ನಡೆಸಿ, ವ್ಯಾಪಾರಿಗಳು, ರೈತರಿಗೆ ಆಗುತ್ತಿರುವ ಅನ್ಯಾಯ ಸರಿಪಡಿಸಬೇಕು ಎಂದು ರೈತರು, ವ್ಯಾಪಾರಸ್ಥರು ಮನವಿ ಮಾಡಿದ್ದಾರೆ.

ಪಟ್ಟಣ ಪಂಚಾಯಿತಿ ಸಿಬ್ಬಂದಿಯಿಂದಲೇ ವಾರಕ್ಕೊಮ್ಮೆ ಸೋಮವಾರ ಸಂತೆಯಲ್ಲಿ ಒಬ್ಬ ವ್ಯಾಪಾರಿಯಿಂದ 20ರೂ. ಕರ ವಸೂಲಿ ಮಾಡಲಾಗುತ್ತಿದೆ. ಪ್ರತಿ ವಾರದ ಅಂದಾಜಿನ ಮೇಲೆ ಹಣ ಸಂಗ್ರಹಿಸಿ ರಜಿಸ್ಟರ್‌ನಲ್ಲಿ ಬರೆದು ಬ್ಯಾಂಕ್‌ ಖಾತೆಗೆ ಹಣ ಜಮಾ ಮಾಡುತ್ತೇವೆ. ಈ ಸಲ ಕೊರೊನಾ ಕಾರಣದಿಂದ ಟೆಂಡರ್‌ ತೆಗೆದುಕೊಳ್ಳಲು ಯಾರೂ ಮುಂದೆ ಬಂದಿಲ್ಲ. ಡಿಸೆಂಬರ್‌ನಲ್ಲಿ ವಾರದ ಸಂತೆಯ ಕರ ವಸೂಲಿ ಟೆಂಡರ್‌ ಕರೆಯಲಾಗುತ್ತದೆ. -ವೆಂಕಟೇಶ ತೆಲಾಂಗ್‌, ಮುಖ್ಯಾಧಿಕಾರಿ, ಪಪಂ

-ಭೀಮರಾಯ ಕುಡ್ಡಳಿ

ಟಾಪ್ ನ್ಯೂಸ್

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

7-mng

Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್‌ ವಶ: ಜಿಲ್ಲಾಧಿಕಾರಿ ಮಾಹಿತಿ

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

Gajendragad; ದಕ್ಷಿಣ ಕಾಶಿ ಕಾಲಕಾಲೇಶ್ವರ ಅದ್ದೂರಿ ರಥೋತ್ಸವ

Gajendragad; ದಕ್ಷಿಣ ಕಾಶಿ ಕಾಲಕಾಲೇಶ್ವರ ಅದ್ದೂರಿ ರಥೋತ್ಸವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.