Onion: ಸುಂಕ ಹೇರಿಕೆ ಬಗ್ಗೆ ಭಯ ಬೇಡ
Team Udayavani, Aug 22, 2023, 11:44 PM IST
ಹೊಸದಿಲ್ಲಿ: ಈರುಳ್ಳಿ ರಫ್ತಿನ ಮೇಲೆ ಶೇ.40ರಷ್ಟು ಸುಂಕ ಹೇರಿರುವುದಕ್ಕೆ ರೈತರು ಆತಂಕಪಡಬೇಕಾದ ಅಗತ್ಯವಿಲ್ಲ ಎಂದು ಕೇಂದ್ರ ಸರಕಾರ ಸ್ಪಷ್ಟವಾಗಿ ಹೇಳಿದೆ. ರಫ್ತು ಮೇಲೆ ಸುಂಕವನ್ನು ಶೇ.40ಕ್ಕೆ ಏರಿಸಿರುವುದರಿಂದ ದೇಶೀಯ ಮಾರುಕಟ್ಟೆಯಲ್ಲಿ ಈರುಳ್ಳಿ ಬೆಲೆ ಕಡಿಮೆಯಾಗುತ್ತದೆ ಎಂಬ ಆತಂಕದಲ್ಲಿ ರೈತರು ದೇಶದ ಅಲ್ಲಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಏಷ್ಯಾದ ಬೃಹತ್ ಈರುಳ್ಳಿ ಮಾರುಕಟ್ಟೆಯಾಗಿರುವ ಮಹಾರಾಷ್ಟ್ರದ ಲಸಲ್ಗಾಂವ್ನಲ್ಲಂತೂ ರೈತರು ಪ್ರತಿಭಟನೆ ನಡೆಸುತ್ತಿರುವುದರಿಂದ ಎರಡು ದಿನಗಳಿಂದ ಹರಾಜು ಪ್ರಕ್ರಿಯೆಯೇ ನಿಂತುಹೋಗಿದೆ.
“ರಫ್ತು ಸುಂಕ ಏರಿಸಿರುವುದರಿಂದ ರೈತರು ಗಾಬರಿಗೊಳಗಾಗಿ ಈರುಳ್ಳಿಯನ್ನು ಮಾರಲು ಹೊರಡುವ ಅಗತ್ಯವಿಲ್ಲ.. ರಾಜಕೀಯ ವಿರೋಧಿಗಳು ತಪ್ಪು ಮಾಹಿತಿಯನ್ನು ನೀಡುತ್ತಿದ್ದಾರೆ. ಎನ್ಸಿಸಿಎಫ್ (ರಾಷ್ಟ್ರೀಯ ಗ್ರಾಹಕ ಸಹಕಾರ ಒಕ್ಕೂಟ) ಮತ್ತು ನಾಫೆಡ್ (ರಾಷ್ಟ್ರೀಯ ಕೃಷಿ ಸಹಕಾರ ಮಾರುಕಟ್ಟೆ ಒಕ್ಕೂಟ) ತಾವೇ ಈರುಳ್ಳಿಯನ್ನು ಖರೀದಿಸುತ್ತವೆ. ಕ್ವಿಂಟಾಲ್ಗೆ 2410 ರೂ. ನಂತೆ ನೀಡಲಾಗುತ್ತದೆ’ ಎಂದು ಗೋಯಲ್ ತಿಳಿಸಿದ್ದಾರೆ.
“ಸರಕಾರ ಈಗಾಗಲೇ 3 ಲಕ್ಷ ಟನ್ ಈರುಳ್ಳಿಯನ್ನು ತನ್ನ ಗೋದಾಮಿನಲ್ಲಿ ಹೊಂದಿದೆ. ಇನ್ನೂ 2 ಲಕ್ಷ ಟನ್ ಈರುಳ್ಳಿಯನ್ನು ಕ್ವಿಂಟಾಲ್ಗೆ 2,410 ರೂ.ಗಳಂತೆ ಖರೀದಿಸಲಾಗುವುದು. ಇದೊಂದು ಐತಿಹಾಸಿಕ ಕ್ರಮ ಎಂದು ಸಚಿವ ಪಿಯೂಷ್ ಗೋಯಲ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಂಗಾಲ ಶಿಕ್ಷಕರ ನೇಮಕ ಸಿಬಿಐ ತನಿಖೆಗೆ ಮಾತ್ರ ತಡೆ: ಸುಪ್ರೀಂ ಕೋರ್ಟ್
NEET; ಕೋಟಾದಲ್ಲಿ ಮತ್ತೊಬ್ಬ ಆಕಾಂಕ್ಷಿ ಆತ್ಮಹತ್ಯೆ: ಇದು 8ನೇ ಪ್ರಕರಣ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ