Onion: ಗ್ರಾಹಕರಲ್ಲಿ ಕಣ್ಣೀರು ತರಿಸುತ್ತಿದೆ ಈರುಳ್ಳಿ ಬೆಲೆ
-ಬೆಲೆಯೇರಿಕೆಯಲ್ಲಿ ಟೊಮೇಟೊ ಬಳಿಕ ಈಗ ಈರುಳ್ಳಿ ಸರದಿ
Team Udayavani, Oct 28, 2023, 10:46 PM IST
ಬೆಂಗಳೂರು: ಮಾರುಕಟ್ಟೆಯಲ್ಲಿ ಈರುಳ್ಳಿ ಬೆಲೆ ಗಣನೀಯವಾಗಿ ಏರಿಕೆಯಾಗುತ್ತಿದ್ದು, ಗ್ರಾಹಕರಲ್ಲಿ ಕಣ್ಣೀರು ತರಿಸುತ್ತಿದೆ.
ಕೆಲವು ದಿನಗಳಿಂದ ಯಶವಂತಪುರ ಮಾರುಕಟ್ಟೆ ಸಹಿತ ರಾಜಧಾನಿಯ ಹಲವು ಮಾರುಕಟ್ಟೆಗಳಲ್ಲಿ ಈರುಳ್ಳಿ ಬೆಲೆ ಏರಿಕೆ ಆಗುತ್ತಲೇ ಇದೆ. ಶನಿವಾರ ಯಶವಂತಪುರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ(ಎಪಿಎಂಸಿ)ಯಾರ್ಡ್ನಲ್ಲಿ ಉತ್ತಮ ಗುಣಮಟ್ಟದ ಈರುಳ್ಳಿ ಪ್ರತಿ ಕ್ವಿಂಟಾಲ್ಗೆ 5,900 ರೂ.ದಿಂದ 6 ಸಾವಿರ ರೂ.ವರೆಗೂ ಮಾರಾಟವಾಗಿದೆ.
ಎಪಿಎಂಸಿ ಹೊರಗಿನ ಚಿಲ್ಲರೆ ಮಾರುಕಟ್ಟೆಯಲ್ಲಿ ದಪ್ಪ ಗಾತ್ರದ ಈರುಳ್ಳಿ ಪ್ರತಿ ಕೆ.ಜಿ.ಗೆ 85-90 ರೂ.ವರೆಗೂ ಖರೀದಿಯಾಯಿತು. ಮಧ್ಯಮ ಗಾತ್ರದ ಈರುಳ್ಳಿಗೆ ಬೇರೆ ದರವಿದೆ. ಪೂರೈಕೆಯಲ್ಲಿ ಕೊರತೆ ಉಂಟಾಗಿದ್ದು, ಆ ಹಿನ್ನೆಲೆಯಲ್ಲಿ ಈರುಳ್ಳಿಯ ಬೆಲೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಯಿದೆ ಎಂದು ಕೃಷಿ ಉತ್ಪನ್ನ ಮಾರುಕಟ್ಟೆ ವರ್ತಕರು ಹೇಳುತ್ತಾರೆ.
ಬೆಂಗಳೂರು ಆಲೂಗಡ್ಡೆ ಮತ್ತು ಈರುಳ್ಳಿ ವರ್ತಕರ ಸಂಘದ ಕಾರ್ಯದರ್ಶಿ ರವಿಶಂಕರ್ ಮಾತನಾಡಿ, ಬರಗಾಲದ ಹಿನ್ನೆಲೆಯಲ್ಲಿ ಬೆಳೆ ಕಡಿಮೆಯಾಗಿ ಬೇಡಿಕೆಯಿರುವಷ್ಟು ಈರುಳ್ಳಿ ಪೂರೈಕೆ ಆಗುತ್ತಿಲ್ಲ. ಚಿತ್ರದುರ್ಗ ಸಹಿತ ರಾಜ್ಯದ ಹಲವು ಭಾಗಗಳಿಂದ ಉತ್ತಮ ಗುಣಮಟ್ಟದ ಈರುಳ್ಳಿ ಮಾರುಕಟ್ಟೆಗೆ ಪೂರೈಕೆ ಆಗುತ್ತಿಲ್ಲ. ಆ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಭಾಗದಿಂದ ಪೂರೈಕೆ ಆಗುತ್ತಿರುವ ಈರುಳ್ಳಿಯನ್ನೇ ಅವಲಂಬಿಸಬೇಕಾಗಿದೆ ಎಂದರು.
ಪರಿಸ್ಥಿತಿ ಇದೇ ರೀತಿ ಮುಂದುವರಿದರೆ ದೀಪಾವಳಿ ಹಬ್ಬದ ವೇಳೆಗೆ ಈರುಳ್ಳಿ ಬೆಲೆ ಶತಕ ದಾಟುವ ನಿರೀಕ್ಷೆಯಿದೆ.
315 ಟ್ರಕ್ಗಳಲ್ಲಿ ಮಹಾರಾಷ್ಟ್ರ ಈರುಳ್ಳಿ ಪೂರೈಕೆ
ಯಶವಂತಪುರದಲ್ಲಿರುವ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ಎಪಿಎಂಸಿ)ಯಾರ್ಡ್ಗೆ ಶನಿವಾರ 315 ಟ್ರಕ್ಗಳಲ್ಲಿ ಮಹಾರಾಷ್ಟ್ರದಿಂದ ಈರುಳ್ಳಿ ಪೂರೈಕೆ ಆಗಿದೆ. ಹಾಗೆಯೇ ರಾಜ್ಯದ ಇತರ ಕಡೆಗಳಿಂದ 165 ಟ್ರಕ್ನಲ್ಲಿ ಈರುಳ್ಳಿ ಪೂರೈಕೆ ಆಗಿದೆ. ಇದರಲ್ಲಿ ಹೊಸ ಈರುಳ್ಳಿ 150 ಟ್ರಕ್ ಸೇರಿದೆ ಎಂದು ಎಪಿಎಂಸಿ ಯಾರ್ಡ್ ವರ್ತಕರ ಸಂಘ ಮಾಹಿತಿ ನೀಡಿದೆ. ಹಳೆ ದಾಸ್ತಾನು ಈರುಳ್ಳಿ ಪ್ರತಿ ಕ್ವಿಂಟಾಲ್ಗೆ 5,900-6,000 ರೂ., ದಪ್ಪಗಾತ್ರದ ಈರುಳ್ಳಿ 5,500-5,800 ರೂ., ನಾಸಿಕ್ ಈರುಳ್ಳಿ 5,500-5,700 ರೂ., ನಾಸಿಕ್ನ ಸಣ್ಣ ಗಾತ್ರದ ಈರುಳ್ಳಿ 2,500-3,000 ರೂ.ಗೆ ಖರೀದಿ ಆಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಂಗಾಲ ಶಿಕ್ಷಕರ ನೇಮಕ ಸಿಬಿಐ ತನಿಖೆಗೆ ಮಾತ್ರ ತಡೆ: ಸುಪ್ರೀಂ ಕೋರ್ಟ್
NEET; ಕೋಟಾದಲ್ಲಿ ಮತ್ತೊಬ್ಬ ಆಕಾಂಕ್ಷಿ ಆತ್ಮಹತ್ಯೆ: ಇದು 8ನೇ ಪ್ರಕರಣ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ