ಮೈಸೂರು : 10ನೇ ಕ್ಲಾಸ್‌ ಆಫ್ಲೈನ್‌, ಉಳಿದವರಿಗೆ ಆನ್‌ಲೈನ್‌, ದೇವರ ದರ್ಶನಕ್ಕೆ ವ್ಯಾಕ್ಸಿನ್‌


Team Udayavani, Jan 13, 2022, 3:51 PM IST

ಮೈಸೂರು : 10ನೇ ಕ್ಲಾಸ್‌ ಆಫ್ಲೈನ್‌, ಉಳಿದವರಿಗೆ ಆನ್‌ಲೈನ್‌, ದೇವರ ದರ್ಶನಕ್ಕೆ ವ್ಯಾಕ್ಸಿನ್‌

ಮೈಸೂರು ಜಿಲ್ಲೆಯಲ್ಲಿ ಸತತ ಎರಡನೇ ದಿನವೂ ಕೋವಿಡ್‌ ಪ್ರಕರಣಗಳ ಸಂಖ್ಯೆ 500 ದಾಟಿದೆ. ಈ ಹಿನ್ನೆಲೆಯಲ್ಲಿ ಕೆಲ ನಿರ್ಬಂಧ ವಿಧಿಸಿದ್ದು, ವೈಕುಂಠ ಏಕಾದಶಿ ದಿನದಂದು ಪೂರ್ಣ ಪ್ರಮಾಣದ ಲಸಿಕೆ ಪಡೆದ 50 ಜನರಿಗೆ ಮಾತ್ರ ದೇಗುಲದಲ್ಲಿ ಒಂದು ಬಾರಿಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಮೈಸೂರು ನಗರ ಹಾಗೂ ಮೈಸೂರು ತಾಲೂಕಿನಲ್ಲಿ ಶಾಲೆಗಳನ್ನು ಬಂದ್‌ ಮಾಡಲಾಗಿದ್ದು, 10ನೇ ಕ್ಲಾಸ್‌ಗೆ ಆಫ್ಲೈನ್‌ ತರಗತಿಗೆ ಜಿಲ್ಲಾಡಳಿತ ಅನುಮತಿ ನೀಡಿದೆ. ಉಳಿದವರಿಗೆ ಆನ್‌ಲೈನ್‌ ಶಿಕ್ಷಣ ನೀಡಲು ಜಿಲ್ಲಾ ಉಸ್ತುವಾರಿ ಸಚಿವರು ಸೂಚಿಸಿದ್ದಾರೆ.

1-9ನೇ ಕ್ಲಾಸ್‌ಗೆ ಆನ್‌ಲೈನ್‌ ತರಗತಿಗೆ ಸಚಿವ ಸೋಮಶೇಖರ್‌ ಸೂಚನೆ

ಮೈಸೂರು : ಮೈಸೂರು ನಗರ ಹಾಗೂ ಮೈಸೂರು ತಾಲೂಕಿನಲ್ಲಿ 1 ರಿಂದ 9ನೇ ತರಗತಿಗೆ ಭೌತಿಕ ತರಗತಿಗಳನ್ನು ಸ್ಥಗಿತಗೊಳಿಸಿರುವುದರಿಂದ ಆನ್‌ಲೈನ್‌ ಮೂಲಕ ಶಿಕ್ಷಣ ಮುಂದುವರಿಸಬೇಕೆಂದು ಮೈಸೂರು ಜಿಲ್ಲಾ ಉಸ್ತು ವಾರಿ ಹಾಗೂ ಸಹಕಾರ ಸಚಿವ ಎಸ್‌.ಟಿ.ಸೋಮಶೇಖರ್‌ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.  ಮೈಸೂರು ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್‌ ಸಿಇಒ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರಿಗೆ ಸಚಿವರು ಈ ಸೂಚನೆ ನೀಡಿದ್ದಾರೆ. 10ನೇ ತರಗತಿಯ ವಿದ್ಯಾರ್ಥಿಗಳು ಪರೀûಾ ಮಂಡಳಿ ನಡೆಸುವ ವಾರ್ಷಿಕ ಪರೀಕ್ಷೆ ಎದುರಿಸಬೇಕಾಗಿದೆ. ಈ ಹಿನ್ನೆಲೆಯಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಅಭ್ಯಾಸಕ್ಕೆ ವಿಶೇಷ ಗಮನಕೊಡಬೇಕು ಎಂದು ಅವರು ಸೂಚಿಸಿದ್ದಾರೆ. ಕಳೆದ ವರ್ಷ ಲಾಕ್‌ ಡೌನ್‌ ಸಂದರ್ಭದಲ್ಲಿ ವಿದ್ಯಾಗಮ ಪದ್ಧತಿ ಮೂಲಕ ಕಲಿಸುವ ಪ್ರಯತ್ನ ಮಾಡಲಾಗಿತ್ತು. ದೂರದರ್ಶನ ವಾಹಿನಿಯಲ್ಲಿ ಸಂವೇದ ಕಾರ್ಯಕ್ರಮ ಪ್ರಸಾರ ಮಾಡಿ, ಕಲಿಕೆಗೆ ಪೋ›ತ್ಸಾಹಿಸಲಾಗಿತ್ತು.

ಹಾಗೆಯೇ ಯೂಟ್ಯೂಬ್‌ ಚಾನೆಲ್‌ ಮೂಲಕ ತರಗತಿಗಳನ್ನು ಪ್ರಸಾರ ಮಾಡಲಾಗಿತ್ತು. ವಾಟ್ಸಾಪ್‌ ಮೂಲಕ ಅಭ್ಯಾಸದ ಸಾಮಗ್ರಿಗಳನ್ನು ವಿದ್ಯಾರ್ಥಿಗಳಿಗೆ ಒದಗಿಸಲಾಗಿತ್ತು. ಆ ಕ್ರಮಗಳ ಮೂಲಕವೂ ವಿದ್ಯಾರ್ಥಿಗಳ ಶಿಕ್ಷಣದ ಕೊರತೆಯನ್ನು ನೀಗಿಸಬಹುದು. ಈ ಪ್ರಯತ್ನಗಳನ್ನು ಅಧಿಕಾರಿಗಳು ಹಾಗೂ ಶಿಕ್ಷಕರು ಮಾಡಬೇಕು ಎಂದು ತಿಳಿಸಿದ್ದಾರೆ.

ಲಸಿಕೆ ಪಡೆದವರಿಗೆ ಮಾತ್ರ ದೇವರ ದರ್ಶನ ಭಾಗ್ಯ

ಮೈಸೂರು: ಜಿಲ್ಲೆಯಲ್ಲಿ ಕೋವಿಡ್‌ ಪ್ರಕರಣಗಳು ಹೆಚ್ಚುತ್ತಿರುವುದರಿಂದ ಮೈಸೂರು ನಗರದ ಪೊಲೀಸ್‌ ಕಮೀಷನರೇಟ್‌ ಘಟಕದ ವ್ಯಾಪ್ತಿಯಲ್ಲಿ ಸಾರ್ವಜನಿಕ ಆರೋಗ್ಯ ಹಿತದೃಷ್ಟಿಯಿಂದ ವೈಕುಂಠ ಏಕಾದಶಿ ದಿನದಂದು ಪೂರ್ಣ ಪ್ರಮಾಣದ ಕೋವಿಡ್‌ ಲಸಿಕೆ ಪಡೆದ 50 ಜನರಿಗೆ ಮಾತ್ರ ದೇವಸ್ಥಾನಗಳಲ್ಲಿ ಒಂದು ಬಾರಿಗೆ ದರ್ಶನಕ್ಕೆ ಅವಕಾಶ ಕಲ್ಪಿಸಬೇಕು. ಯಾವುದೇ ಸೇವೆಗೆ ಅವಕಾಶ ಇರುವುದಿಲ್ಲ ಎಂದು ಆದೇಶ ಹೊರಡಿಸಲಾಗಿದೆ. ಮೈಸೂರು ನಗರದ ಪೊಲೀಸ್‌ ಆಯುಕ್ತ ಡಾ.ಚಂದ್ರಗುಪ್ತ ಈ ಕುರಿತು ಬುಧವಾರ ಆದೇಶ ಹೊರಡಿಸಿದ್ದಾರೆ. ವೈಕುಂಠ ಏಕಾದಶಿ ಹಾಗೂ ಸಂಕ್ರಾಂತಿ ಹಬ್ಬಗಳ ಪ್ರಯುಕ್ತ ದೇವಾಲಯಗಳ ಶಾಸ್ತ್ರ , ಸಂಪ್ರದಾಯದಂತೆ ದೇವಾಲಯಗಳ ಒಳ ಆವರಣದಲ್ಲಿ ಮಾತ್ರ ದೈನಂದಿನ ಪೂಜಾ ಕೈಂಕರ್ಯಗಳನ್ನು ನಡೆಸಬಹುದು. ಹಬ್ಬಗಳ ಆಚರಣೆಯಲ್ಲಿ ಯಾವುದೇ ರೀತಿಯ ಮೆರವಣಿಗೆ, ಮನರಂಜನಾ ಕಾರ್ಯಕ್ರಮಗಳನ್ನು ಏರ್ಪಡಿಸುವಂತಿಲ್ಲ. ಈ ಮಾರ್ಗಸೂಚಿಯನ್ನು ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಡಾ.ಚಂದ್ರಗುಪ್ತ ಎಚ್ಚರಿಕೆ ನೀಡಿದ್ದಾರೆ.

ಎಸ್ಸೆಸ್ಸೆಲ್ಸಿ ಭೌತಿಕ ತರಗತಿ ನಡೆಸಲು ಡೀಸಿ ಡಾ.ಬಗಾದಿ ಗೌತಮ್‌ ಆದೇಶ

ಮೈಸೂರು: ಮೈಸೂರು ನಗರ ಹಾಗೂ ಮೈಸೂರು ತಾಲೂಕಿನಲ್ಲಿ 10ನೇ ತರಗತಿಯ ಭೌತಿಕ ತರಗತಿಗಳನ್ನು ನಡೆಸಲು ಅವಕಾಶ ಕಲ್ಪಿಸಿ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್‌ ಆದೇಶ ಹೊರಡಿಸಿದ್ದಾರೆ. ಮೈಸೂರು ನಗರ ಹಾಗೂ ಮೈಸೂರು ತಾಲೂಕು ವ್ಯಾಪ್ತಿಯ ಎಲ್ಲ ಸರ್ಕಾರಿ, ಅನುದಾನಿತ, ಅನುದಾನರಹಿತ ಶಾಲೆಗಳಲ್ಲಿ ವಸತಿ ಶಾಲೆಗಳನ್ನು ಒಳಗೊಂಡಂತೆ ಅಂಗನವಾಡಿ, ನರ್ಸರಿ, 1ರಿಂದ 10ನೇ ತರಗತಿವರೆಗೆ ಭೌತಿಕ ತರಗತಿ ಗಳನ್ನು ಸ್ಥಗಿತಗೊಳಿಸಿ ಜಿಲ್ಲಾಧಿಕಾರಿಗಳು ಮಂಗಳವಾರ ಆದೇಶ ಹೊರಡಿಸಿದ್ದರು. ಆದರೆ, ಬುಧವಾರ ಮತ್ತೂಂದು ಆದೇಶ ಹೊರಡಿಸಿ 10ನೇ ತರಗತಿಗೆ ಮಾತ್ರ ಭೌತಿಕ ತರಗತಿಗಳನ್ನು ನಡೆಸಲು ಅವಕಾಶ ಕಲ್ಪಿಸಿದ್ದಾರೆ. 10¤ನೇ ತರಗತಿಗೆ ಕೆಎಸ್‌ಇಇಬಿ ವತಿಯಿಂದ ಪರೀಕ್ಷೆ ನಡೆಸಲಾಗುತ್ತದೆ. ವಿದ್ಯಾರ್ಥಿಗಳಿಗೆ ಭೌತಿಕ ಶಿಕ್ಷಣದ ಅಗತ್ಯ ಇರುತ್ತದೆ. ಕೇಂದ್ರ ಸರ್ಕಾರದ ನಿರ್ದೇಶನದಂತೆ 15 -18 ವಯಸ್ಸಿನವರಿಗೆ ಲಸಿಕೆ ನೀಡುವುದು ಪ್ರಗತಿಯಲ್ಲಿದೆ. 10ನೇ ತರಗತಿ ವಿದ್ಯಾರ್ಥಿಗಳು ಈ ವಯೋಮಾನದ ವ್ಯಾಪ್ತಿಗೆ ಬರುತ್ತಾರೆ. ಅವರು ಶಾಲೆಗೆ ಆಗಮಿಸುವುದರಿಂದ ಜಿಲ್ಲಾ ವ್ಯಾಪ್ತಿಯಲ್ಲಿ ಕೋವಿಡ್‌ ಲಸಿಕೆ ನೀಡುವ ಕಾರ್ಯವು ನಿಗದಿತ ಅವಧಿ ಯಲ್ಲಿ ಪೂರ್ಣಗೊಳಿಸಲು ಸಾಧ್ಯವಾಗುತ್ತದೆ. ಕೋವಿಡ್‌ನ‌ ಎಲ್ಲ ಮುನ್ನೆಚರಿಕೆ ಕ್ರಮಗಳನ್ನು ಕೈಗೊಂಡು 10ನೇ ತರಗತಿ ವಿದ್ಯಾರ್ಥಿಗಳಿಗೆ ಭೌತಿಕ ತರಗತಿ ನಡೆಸಲು ಆದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್‌ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.