ಆನ್ಲೈನ್ ಶಿಕ್ಷಣ ತೀರ್ಮಾನ ಆಗಿಲ್ಲ: ಸುರೇಶ್ ಕುಮಾರ್
Team Udayavani, Jul 12, 2020, 1:04 PM IST
ಸುಬ್ರಹ್ಮಣ್ಯ: ರಾಜ್ಯದಲ್ಲಿ ಗ್ರಾಮೀಣ ಪ್ರದೇಶಗಳೇ ಅಧಿಕವಾಗಿರುವುದರಿಂದ ಆನ್ಲೈನ್ ಶಿಕ್ಷಣಕ್ಕೆ ಪೂರಕ ವಾತಾವರಣ ಇಲ್ಲ. ಆದ್ದರಿಂದ ರಾಜ್ಯ ಸರಕಾರ ಆನ್ಲೈನ್ ಶಿಕ್ಷಣ ಜಾರಿಯ ಬಗ್ಗೆ ಇನ್ನೂ ತೀರ್ಮಾನ ಮಾಡಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದರು.
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಶನಿವಾರ ಭೇಟಿ ನೀಡಿದ ಸಂದರ್ಭ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ಕೆಲವು ಖಾಸಗಿ ಶಾಲೆಗಳು ಎಲ್ಕೆಜಿ, ಯುಕೆಜಿ ಮಕ್ಕಳಿಗೂ ಆನ್ಲೈನ್ ಶಿಕ್ಷಣ ನೀಡುವ ವಿಷಯ ತಿಳಿದಿದೆ. ಲ್ಯಾಪ್ಟಾಪ್, ಸ್ಮಾರ್ಟ್ ಫೋನ್ ಇತ್ಯಾದಿ ಖರೀದಿಸುವಂತೆ ಹೆತ್ತವರಿಗೆ ಒತ್ತಡ ಹೇರುವ ದೂರುಗಳೂ ಬಂದಿವೆ. ಮಂಗಳವಾರ ಇನ್ನೊಮ್ಮೆ ಸಾಧಕ-ಬಾಧಕಗಳ ವಿಮರ್ಶೆ ಮಾಡಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.
ಕೋವಿಡ್ ಆರ್ಭಟ ಕಡಿಮೆಯಾದ ಬಳಿಕವೇ ಶಾಲೆಗಳ ಪುನರಾರಂಭ ಕುರಿತು ತೀರ್ಮಾನ ಕೈಗೊಳ್ಳಲಾಗುವುದು ಎಂದರು.
ಜು. 18ರೊಳಗೆ ಪಿಯುಸಿ ಫಲಿತಾಂಶ
ದ್ವಿತೀಯ ಪಿಯುಸಿ ಮೌಲ್ಯಮಾಪನ ಮುಗಿದಿದ್ದು, ಜು. 18ರ ಒಳಗೆ ಫಲಿತಾಂಶ ಘೋಷಣೆಯಾಗಲಿದೆ. ಎಸೆಸೆಲ್ಸಿ ಮೌಲ್ಯಮಾಪನ ಸೋಮವಾರ ಆರಂಭವಾಗಲಿದೆ. ಆಗಸ್ಟ್ ಮೊದಲ ವಾರದಲ್ಲಿ ಫಲಿತಾಂಶ ಬರಲಿದೆ ಎಂದು ಸಚಿವರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು