Open AI: ಆಡಳಿತ ಮಂಡಳಿಯನ್ನೇ ವಜಾ ಮಾಡಿದ ಆಲ್ಟ್ಮನ್‌! 

-ತನ್ನನ್ನು ಕಿತ್ತೆಸೆದ ಆಡಳಿತ ಮಂಡಳಿ ವಿರುದ್ಧ ಚಾಟ್‌ ಜಿಪಿಟಿ ಜನಕನ ಪ್ರತೀಕಾರ

Team Udayavani, Nov 23, 2023, 9:38 PM IST

chat gpt owner

ಸ್ಯಾನ್‌ಫ್ರಾನ್ಸಿಸ್ಕೋ: ನಾಟಕೀಯ ಬೆಳವಣಿಗೆಯಲ್ಲಿ ಓಪನ್‌ ಎಐ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ(ಸಿಇಒ)ಯಾಗಿ ಸ್ಯಾಮ್‌ ಆಲ್ಟ್ಮನ್‌ ಅವರು ವಾಪಸಾದ ಬೆನ್ನಲ್ಲೇ, ಅವರು ತಮ್ಮನ್ನು ವಜಾ ಮಾಡಿದ್ದ ಇಡೀ ಆಡಳಿತ ಮಂಡಳಿಯನ್ನೇ ಕಿತ್ತುಹಾಕಿ ಆದೇಶ ಹೊರಡಿಸಿದ್ದಾರೆ!

ವಿಶೇಷವೆಂದರೆ, ಆಲ್ಟ್ಮನ್‌ ಹೊಸ ಆದೇಶದಿಂದಾಗಿ ವಜಾಗೊಂಡ ಆಡಳಿತ ಮಂಡಳಿಯಲ್ಲಿ ಉಳಿದಿರುವ ಏಕೈಕ ವ್ಯಕ್ತಿಯೆಂದರೆ, ಪ್ರಶ್ನೋತ್ತರ ಸೈಟ್‌ ಕೋರಾದ ಸಿಇಒ ಆಗಿರುವ ಆ್ಯಡಂ ಡಿ ಏಂಜೆಲೋ. ಇವರೊಬ್ಬರನ್ನು ಹೊರತುಪಡಿಸಿ ಉಳಿದವರೆಲ್ಲರೂ ಆಡಳಿತ ಮಂಡಳಿಯಿಂದ ಹೊರನಡೆದಿದ್ದಾರೆ. ಆದರೆ, ಆಲ್ಟ್ಮನ್‌ ಅವರಾಗಲೀ, ಸಂಸ್ಥೆಯ ಸ್ಥಾಪಕ ಗ್ರೆಗ್‌ ಬ್ರೋಕ್‌ಮನ್‌ ಆಗಲೀ ಆಡಳಿತ ಮಂಡಳಿಗೆ ಸೇರ್ಪಡೆಯಾಗಿಲ್ಲ. ಶೀಘ್ರದಲ್ಲೇ ಮಂಡಳಿಗೆ 6 ಹೆಚ್ಚುವರಿ ಸದಸ್ಯರನ್ನು ಸೇರಿಸಲಾಗುತ್ತದೆ ಎಂದು ವಾಲ್‌ ಸ್ಟ್ರೀಟ್‌ ಜರ್ನಲ್‌ ವರದಿ ಮಾಡಿದೆ.

“ನಾನು ಓಪನ್‌ ಎಐಯನ್ನು ಪ್ರೀತಿಸುತ್ತೇನೆ. ಕಳೆದ ಕೆಲವು ದಿನಗಳಲ್ಲಿ ನಾನು ಏನೇ ಮಾಡಿದ್ದರೂ ಅದು ಈ ತಂಡ ಮತ್ತು ಅದರ ಉದ್ದೇಶವನ್ನು ಉಳಿಸಿಕೊಳ್ಳುವುದಕ್ಕೋಸ್ಕರ’ ಎಂದು ಆಲ್ಟ್ಮನ್‌ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ. ಕಳೆದು ಶುಕ್ರವಾರವಷ್ಟೇ ಯಾವುದೇ ಕಾರಣವನ್ನು ತಿಳಿಸದೇ ಕಂಪನಿಯ ಆಡಳಿತ ಮಂಡಳಿಯು ಏಕಾಏಕಿ ಚಾಟ್‌ಜಿಪಿಟಿ ಜನಕ ಆಲ್ಟ್ಮನ್‌ರನ್ನು ವಜಾ ಮಾಡಿತ್ತು. ಇದು ಇಡೀ ಕಂಪನಿಯಲ್ಲಿ ಸಂಚಲನಕ್ಕೆ ಕಾರಣವಾಗಿತ್ತಲ್ಲದೇ, ಈ ನಿರ್ಧಾರದ ವಿರುದ್ಧ ಸಂಸ್ಥೆಯ 700ರಷ್ಟು ಸಿಬ್ಬಂದಿ ಬಂಡಾಯವೆದ್ದು, ರಾಜೀನಾಮೆಗೆ ಮುಂದಾಗಿದ್ದರು.

ವಜಾಗೆ ಆ “ಅಪಾಯಕಾರಿ” ಟೂಲ್‌ ಕಾರಣವೇ?
ಓಪನ್‌ ಎಐ ಸಂಸ್ಥೆಯಲ್ಲಿ ಅಭಿವೃದ್ಧಿಪಡಿಸಲಾದ ಅತ್ಯಂತ ಬಲಿಷ್ಠವಾದ ಕೃತಕ ಬುದ್ಧಿಮತ್ತೆಯ ಆವಿಷ್ಕಾರವೇ ಸಂಸ್ಥೆಯೊಳಗೆ ಅಲ್ಲೋಲಕಲ್ಲೋಲ ಸೃಷ್ಟಿಯಾಗಲು ಕಾರಣವೇ? ಹೌದು ಎನ್ನುತ್ತಿವೆ ಮೂಲಗಳು. ಇತ್ತೀಚೆಗೆ ಸಂಸ್ಥೆಯು ಕ್ಯೂ*(ಕ್ಯೂ ಸ್ಟಾರ್‌) ಎಂಬ ಹೊಸ ತಂತ್ರಜ್ಞಾನವೊಂದನ್ನು ಅಭಿವೃದ್ಧಿಪಡಿಸಿತ್ತು. ಇದು ಸೂಪರ್‌ ಇಂಟೆಲಿಜೆನ್ಸ್‌ನಲ್ಲಿ ಕ್ರಾಂತಿ ಮೂಡಿಸುವಂಥ ತಂತ್ರಜ್ಞಾನವಾಗಿದ್ದು, ಇದನ್ನು ಮನುಷ್ಯರಿಗಿಂತಲೂ ಹೆಚ್ಚಿನ ಬುದ್ಧಿವಂತಿಕೆಯಿರುವ ಕೃತಕ ಬುದ್ಧಿಮತ್ತೆ (ಆರ್ಟಿಫಿಶಿಯಲ್‌ ಜನರಲ್‌ ಇಂಟೆಲಿಜೆನ್ಸ್‌) ಎಂದು ಪರಿಗಣಿಸಲಾಗಿತ್ತು.

ಈ ತಂತ್ರಜ್ಞಾನವು ಮುಂದಿನ ದಿನಗಳಲ್ಲಿ ಮಾನವತೆಗೇ ಅಪಾಯ ಉಂಟುಮಾಡುವ ಭೀತಿಯಿದೆ ಎಂದು ಸಂಸ್ಥೆಯೊಳಗಿನ ಸಂಶೋಧಕರು ನಿರ್ದೇಶಕರ ಮಂಡಳಿಗೆ ಪತ್ರ ಬರೆದಿದ್ದರು. ಈ ಪತ್ರದಿಂದ ಎಚ್ಚೆತ್ತ ಆಡಳಿತ ಮಂಡಳಿಯು ದಿಢೀರ್‌ ಸಭೆ ಕರೆದು, ಆಲ್ಟ್ಮನ್‌ರನ್ನು ವಜಾಗೊಳಿಸಿತ್ತು ಎಂದು ಮೂಲಗಳು ತಿಳಿಸಿವೆ. ಆದರೆ, ಈ ಪತ್ರದ ಕುರಿತಾಗಲೀ, ಆ ಅಪಾಯಕಾರಿ ಟೂಲ್‌ ಕುರಿತಾಗಲೀ ಕಂಪನಿ ಯಾವುದೇ ಪ್ರತಿಕ್ರಿಯೆ ನೀಡುತ್ತಿಲ್ಲ.

ಟಾಪ್ ನ್ಯೂಸ್

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

drowned

Kenya; ಭಾರೀ ಮಳೆಗೆ ಒಡೆದ ಡ್ಯಾಮ್‌: ಕನಿಷ್ಠ 40 ಸಾವು!

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

6-

Modi ಒಬ್ಬ ಸುಳ್ಳುಗಾರ: ಸಚಿವ ಸಂತೋಷ್ ಲಾಡ್ ಆರೋಪ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.