Open AI: ಆಡಳಿತ ಮಂಡಳಿಯನ್ನೇ ವಜಾ ಮಾಡಿದ ಆಲ್ಟ್ಮನ್‌! 

-ತನ್ನನ್ನು ಕಿತ್ತೆಸೆದ ಆಡಳಿತ ಮಂಡಳಿ ವಿರುದ್ಧ ಚಾಟ್‌ ಜಿಪಿಟಿ ಜನಕನ ಪ್ರತೀಕಾರ

Team Udayavani, Nov 23, 2023, 9:38 PM IST

chat gpt owner

ಸ್ಯಾನ್‌ಫ್ರಾನ್ಸಿಸ್ಕೋ: ನಾಟಕೀಯ ಬೆಳವಣಿಗೆಯಲ್ಲಿ ಓಪನ್‌ ಎಐ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ(ಸಿಇಒ)ಯಾಗಿ ಸ್ಯಾಮ್‌ ಆಲ್ಟ್ಮನ್‌ ಅವರು ವಾಪಸಾದ ಬೆನ್ನಲ್ಲೇ, ಅವರು ತಮ್ಮನ್ನು ವಜಾ ಮಾಡಿದ್ದ ಇಡೀ ಆಡಳಿತ ಮಂಡಳಿಯನ್ನೇ ಕಿತ್ತುಹಾಕಿ ಆದೇಶ ಹೊರಡಿಸಿದ್ದಾರೆ!

ವಿಶೇಷವೆಂದರೆ, ಆಲ್ಟ್ಮನ್‌ ಹೊಸ ಆದೇಶದಿಂದಾಗಿ ವಜಾಗೊಂಡ ಆಡಳಿತ ಮಂಡಳಿಯಲ್ಲಿ ಉಳಿದಿರುವ ಏಕೈಕ ವ್ಯಕ್ತಿಯೆಂದರೆ, ಪ್ರಶ್ನೋತ್ತರ ಸೈಟ್‌ ಕೋರಾದ ಸಿಇಒ ಆಗಿರುವ ಆ್ಯಡಂ ಡಿ ಏಂಜೆಲೋ. ಇವರೊಬ್ಬರನ್ನು ಹೊರತುಪಡಿಸಿ ಉಳಿದವರೆಲ್ಲರೂ ಆಡಳಿತ ಮಂಡಳಿಯಿಂದ ಹೊರನಡೆದಿದ್ದಾರೆ. ಆದರೆ, ಆಲ್ಟ್ಮನ್‌ ಅವರಾಗಲೀ, ಸಂಸ್ಥೆಯ ಸ್ಥಾಪಕ ಗ್ರೆಗ್‌ ಬ್ರೋಕ್‌ಮನ್‌ ಆಗಲೀ ಆಡಳಿತ ಮಂಡಳಿಗೆ ಸೇರ್ಪಡೆಯಾಗಿಲ್ಲ. ಶೀಘ್ರದಲ್ಲೇ ಮಂಡಳಿಗೆ 6 ಹೆಚ್ಚುವರಿ ಸದಸ್ಯರನ್ನು ಸೇರಿಸಲಾಗುತ್ತದೆ ಎಂದು ವಾಲ್‌ ಸ್ಟ್ರೀಟ್‌ ಜರ್ನಲ್‌ ವರದಿ ಮಾಡಿದೆ.

“ನಾನು ಓಪನ್‌ ಎಐಯನ್ನು ಪ್ರೀತಿಸುತ್ತೇನೆ. ಕಳೆದ ಕೆಲವು ದಿನಗಳಲ್ಲಿ ನಾನು ಏನೇ ಮಾಡಿದ್ದರೂ ಅದು ಈ ತಂಡ ಮತ್ತು ಅದರ ಉದ್ದೇಶವನ್ನು ಉಳಿಸಿಕೊಳ್ಳುವುದಕ್ಕೋಸ್ಕರ’ ಎಂದು ಆಲ್ಟ್ಮನ್‌ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ. ಕಳೆದು ಶುಕ್ರವಾರವಷ್ಟೇ ಯಾವುದೇ ಕಾರಣವನ್ನು ತಿಳಿಸದೇ ಕಂಪನಿಯ ಆಡಳಿತ ಮಂಡಳಿಯು ಏಕಾಏಕಿ ಚಾಟ್‌ಜಿಪಿಟಿ ಜನಕ ಆಲ್ಟ್ಮನ್‌ರನ್ನು ವಜಾ ಮಾಡಿತ್ತು. ಇದು ಇಡೀ ಕಂಪನಿಯಲ್ಲಿ ಸಂಚಲನಕ್ಕೆ ಕಾರಣವಾಗಿತ್ತಲ್ಲದೇ, ಈ ನಿರ್ಧಾರದ ವಿರುದ್ಧ ಸಂಸ್ಥೆಯ 700ರಷ್ಟು ಸಿಬ್ಬಂದಿ ಬಂಡಾಯವೆದ್ದು, ರಾಜೀನಾಮೆಗೆ ಮುಂದಾಗಿದ್ದರು.

ವಜಾಗೆ ಆ “ಅಪಾಯಕಾರಿ” ಟೂಲ್‌ ಕಾರಣವೇ?
ಓಪನ್‌ ಎಐ ಸಂಸ್ಥೆಯಲ್ಲಿ ಅಭಿವೃದ್ಧಿಪಡಿಸಲಾದ ಅತ್ಯಂತ ಬಲಿಷ್ಠವಾದ ಕೃತಕ ಬುದ್ಧಿಮತ್ತೆಯ ಆವಿಷ್ಕಾರವೇ ಸಂಸ್ಥೆಯೊಳಗೆ ಅಲ್ಲೋಲಕಲ್ಲೋಲ ಸೃಷ್ಟಿಯಾಗಲು ಕಾರಣವೇ? ಹೌದು ಎನ್ನುತ್ತಿವೆ ಮೂಲಗಳು. ಇತ್ತೀಚೆಗೆ ಸಂಸ್ಥೆಯು ಕ್ಯೂ*(ಕ್ಯೂ ಸ್ಟಾರ್‌) ಎಂಬ ಹೊಸ ತಂತ್ರಜ್ಞಾನವೊಂದನ್ನು ಅಭಿವೃದ್ಧಿಪಡಿಸಿತ್ತು. ಇದು ಸೂಪರ್‌ ಇಂಟೆಲಿಜೆನ್ಸ್‌ನಲ್ಲಿ ಕ್ರಾಂತಿ ಮೂಡಿಸುವಂಥ ತಂತ್ರಜ್ಞಾನವಾಗಿದ್ದು, ಇದನ್ನು ಮನುಷ್ಯರಿಗಿಂತಲೂ ಹೆಚ್ಚಿನ ಬುದ್ಧಿವಂತಿಕೆಯಿರುವ ಕೃತಕ ಬುದ್ಧಿಮತ್ತೆ (ಆರ್ಟಿಫಿಶಿಯಲ್‌ ಜನರಲ್‌ ಇಂಟೆಲಿಜೆನ್ಸ್‌) ಎಂದು ಪರಿಗಣಿಸಲಾಗಿತ್ತು.

ಈ ತಂತ್ರಜ್ಞಾನವು ಮುಂದಿನ ದಿನಗಳಲ್ಲಿ ಮಾನವತೆಗೇ ಅಪಾಯ ಉಂಟುಮಾಡುವ ಭೀತಿಯಿದೆ ಎಂದು ಸಂಸ್ಥೆಯೊಳಗಿನ ಸಂಶೋಧಕರು ನಿರ್ದೇಶಕರ ಮಂಡಳಿಗೆ ಪತ್ರ ಬರೆದಿದ್ದರು. ಈ ಪತ್ರದಿಂದ ಎಚ್ಚೆತ್ತ ಆಡಳಿತ ಮಂಡಳಿಯು ದಿಢೀರ್‌ ಸಭೆ ಕರೆದು, ಆಲ್ಟ್ಮನ್‌ರನ್ನು ವಜಾಗೊಳಿಸಿತ್ತು ಎಂದು ಮೂಲಗಳು ತಿಳಿಸಿವೆ. ಆದರೆ, ಈ ಪತ್ರದ ಕುರಿತಾಗಲೀ, ಆ ಅಪಾಯಕಾರಿ ಟೂಲ್‌ ಕುರಿತಾಗಲೀ ಕಂಪನಿ ಯಾವುದೇ ಪ್ರತಿಕ್ರಿಯೆ ನೀಡುತ್ತಿಲ್ಲ.

ಟಾಪ್ ನ್ಯೂಸ್

Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!

Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

imran-khan

Oxford ವಿವಿ ಕುಲಪತಿ: ಇಮ್ರಾನ್‌ ಜೈಲಿಂದ ಸ್ಪರ್ಧೆ!

1-musk

Gender change ಬಗ್ಗೆ ವಿರೋಧ: ಮಸ್ಕ್ ಗೆ ಪುತ್ರಿ ತಿರುಗೇಟು!

1-obamma-aaa

US; ಅದ್ಭುತ ಅಧ್ಯಕ್ಷೆಯಾಗುತ್ತಾರೆ: ಕಮಲಾ ಹ್ಯಾರಿಸ್‌ಗೆ ಒಬಾಮಾ ಸಂಪೂರ್ಣ ಬೆಂಬಲ

kamala-haris

US; ಕಮಲಾ ಹ್ಯಾರಿಸ್‌ಗೆ ಕೊನೆಗೂ ಮಾಜಿ ಅಧ್ಯಕ್ಷ ಒಬಾಮಾ ಬೆಂಬಲ?

Bangladesh: ಮಮತಾ ಬ್ಯಾನರ್ಜಿ ವಿರುದ್ಧ ದೂರು ದಾಖಲಿಸಿದ ಬಾಂಗ್ಲಾದೇಶ್ ಸರ್ಕಾರ!

Bangladesh: ಮಮತಾ ಬ್ಯಾನರ್ಜಿ ವಿರುದ್ಧ ದೂರು ದಾಖಲಿಸಿದ ಬಾಂಗ್ಲಾದೇಶ್ ಸರ್ಕಾರ!

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Screenshot (2)

Mangaluru: ಸೈನಿಕರನ್ನು ಗೌರವದಿಂದ ನಡೆಸಿಕೊಳ್ಳಿ: ಬ್ರಿ| ಐ.ಎನ್‌. ರೈ

Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!

Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.