ತೆರೆದ ಸೆನ್ಸಾರ್‌ ಬಾಗಿಲು

ಪ್ರಮಾಣ ಪತ್ರ ಪಡೆಯಲು ಸಾಲುಗಟ್ಟಿದ ಸಿನಿಮಾಗಳು

Team Udayavani, Jun 13, 2020, 4:28 AM IST

censor kannada

ಅಂತೂ ಇಂತೂ ಸಿನಿಮಾ ಮಂದಿ ಮೊಗದಲ್ಲಿ ಮಂದಹಾಸ ಮೂಡಿದೆ. ಹೌದು, ಬರೋಬ್ಬರಿ ಮೂರು ತಿಂಗಳ ಕಾಲ ಯಾವುದೇ ಸಿನಿಮಾ ಚಟುವಟಿಕೆಗಳಿಲ್ಲದೆ ಸ್ತಬ್ಧಗೊಂಡಿದ ಚಿತ್ರರಂಗಕ್ಕೆ ಇದೀಗ ರಂಗುತುಂಬಿದೆ. ಕಳೆದ ತಿಂಗಳಷ್ಟೇ ಸರ್ಕಾರ ಸಿನಿಮಾಗಳ ಪೋಸ್ಟ್‌ ಪ್ರೊಡಕ್ಷನ್ಸ್‌ ಚಟುವಟಿಕೆಗಳಿಗೆ ಅನುಮತಿ ನೀಡಿತ್ತು. ಇದೀಗ ಸೆನ್ಸಾರ್‌ಗೂ ಚಾಲನೆ ಸಿಕ್ಕಿದೆ. ಆ ನಿಟ್ಟಿನಲ್ಲಿ ಪ್ರೇಕ್ಷಕರ ಮುಂದೆ ಬರಲು ಸಜ್ಜಾಗಿದ್ದ ಒಂದಷ್ಟು ಕನ್ನಡ ಸಿನಿಮಾಗಳು ಸೆನ್ಸಾರ್‌ ಅಂಗಳದಿಂದ ಹೊರಬಂದಿವೆ. ಸೆನ್ಸಾರ್‌ ಮಂಡಳಿ ಕೆಲವು ಚಿತ್ರಗಳನ್ನು ವೀಕ್ಷಿಸಿದ್ದು, ಪ್ರಮಾಣ ಪತ್ರ ನೀಡಿದೆ.

ಜೂನ್‌ ಒಂದರಿಂದಲೇ ಸೆನ್ಸಾರ್‌ ಮಂಡಳಿ ತನ್ನ ಕಾರ್ಯಚಟುವಟಿಕೆಯನ್ನು ಆರಂಭಿಸಿದೆ. ಹೀಗಾಗಿ ಕಳೆದ ಒಂದು ವಾರದಿಂದಲೂ ಎಂಟು ಚಿತ್ರಗಳನ್ನು ವೀಕ್ಷಿಸಿರುವ ಸೆನ್ಸಾರ್‌ ಮಂಡಳಿ, ಅವುಗಳಿಗೆ ಪ್ರಮಾಣ ಪತ್ರವನ್ನು ವಿತರಿಸಿದೆ. ಅಂದಹಾಗೆ, ಈ ಪೈಕಿ ಮೊದಲು ಸೆನ್ಸಾರ್‌ ಮಂಡಳಿ ವೀಕ್ಷಿಸಿದ ಚಿತ್ರವೆಂದರೆ ಅದು ಶ್ರೀನಾಥ್‌ ವಸಿಷ್ಠ ನಿರ್ದೇಶಿಸಿರುವ “ಮೂಕಜೀವ’. ಇನ್ನು ಅರವಿಂದ್‌ ಕೌಶಿಕ್‌ ನಿರ್ದೇಶನದ “ಶಾರ್ದೂಲ’ ಸಿನಿಮಾ ಕೂಡ ಸೆನ್ಸಾರ್‌ ಆಗಿದೆ. ಹಾಗೆಯೇ ನವೀನ್‌ಕೃಷ್ಣ ನಿರ್ದೇಶಿಸಿರುವ “ಮೇಲೊಬ್ಬ ಮಾಯಾವಿ’ ಸಿನಿಮಾ ಸೇರಿದಂತೆ ಒಂದಷ್ಟು ಚಿತ್ರಗಳನ್ನು ಸೆನ್ಸಾರ್‌ ಮಂಡಳಿ ವೀಕ್ಷಿಸಿದ್ದು, ಅವುಗಳ ಬಿಡುಗಡೆಗೆ ಅನುವು ಮಾಡಿಕೊಟ್ಟಿದೆ.

ಮಾರ್ಚ್‌ ತಿಂಗಳಲ್ಲೇ ಸೆನ್ಸಾರ್‌ ಮಂಡಳಿ ಸಿನಿಮಾ ವೀಕ್ಷಣೆಯನ್ನು ನಿಲ್ಲಿಸಿತ್ತು. ಹೀಗೊಂದು ವಾರದಿಂದಷ್ಟೇ ಪುನಃ ಸಿನಿಮಾಗಳನ್ನು ವೀಕ್ಷಿಸುತ್ತಿದ್ದು, ದಿನಕ್ಕೊಂದು ಸಿನಿಮಾ ವೀಕ್ಷಣೆ ಮಾಡುತ್ತಿದೆ. ಸಾಕಷ್ಟು ಸಿನಿಮಾಗಳು ಸೆನ್ಸಾರ್‌ ಮಂಡಳಿಯಲ್ಲಿ ಸಾಲುಗಟ್ಟಿ ನಿಂತಿರುವುದರಿಂದ, ಮುಂದಿನ ದಿನಗಳಲ್ಲಿ ವೀಕ್ಷಿಸುವ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಅದೇನೆ ಇದ್ದರೂ, ಚಿತ್ರರಂಗ ಈಗ ಮೊದಲಿನಂತಿಲ್ಲ. ಮೊದ ಮೊದಲು ಸಿನಿಮಾಗಳು ತೆರೆಕಂಡರೂ ಚಿತ್ರಮಂದಿರಗಳಲ್ಲಿ ಪ್ರೇಕ್ಷಕರ ಕೊರತೆ ಎದ್ದು ಕಾಣುತ್ತಿತ್ತು. ಯಾವ ಸಿನಿಮಾಗಳೇ ಬಿಡುಗಡೆಯಾದರೂ ಅಲ್ಲಿ ಮೊದಲ ಪ್ರದರ್ಶನಕ್ಕೇ ಪ್ರೇಕ್ಷಕರ ಅನುಪಸ್ಥಿತಿ ಕಾಡುತ್ತಿತ್ತು.

ನಂತರದ ಪ್ರದರ್ಶನಕ್ಕಾದರೂ ಜನ ಬರುತ್ತಾರೆ ಎಂಬ ಆಶಾಭಾವನೆ ಇಟ್ಟುಕೊಂಡರೂ ಜನ ಅಪ್ಪಿ ತಪ್ಪಿಯೂ ಚಿತ್ರಮಂದಿರಗಳತ್ತ ಮುಖ ಮಾಡುತ್ತಿರಲಿಲ್ಲ. ಕೆಲವೇ ಕೆಲವು ಸ್ಟಾರ್ಸ್‌ ನಟರ ಚಿತ್ರಗಳಿಗೆ ಮಾತ್ರ ಚಿತ್ರಮಂದಿರಗಳಲ್ಲಿ ಜನಜಾತ್ರೆ ಆಗುತ್ತಿತ್ತು. ಹೊಸಬರ ಸಿನಿಮಾಗಳಿಗಂತೂ ಅಂತಹ ಓಪನಿಂಗ್‌ ಸಿಗುತ್ತಲೇ ಇರಲಿಲ್ಲ. ಈಗ ಕೋವಿಡ್‌ 19 ಹಿನ್ನೆಲೆಯಲ್ಲಿ ಲಾಕ್‌ ಡೌನ್‌ ಘೋಷಣೆಯ ನಂತರ ಚಿತ್ತರಂಗದ ಸ್ಥಿತಿ ಮತ್ತಷ್ಟು ಬಿಗಡಾಯಿಸಿದೆ ಎಂಬುದನ್ನು ಎಲ್ಲರೂ ಒಪ್ಪಲೇಬೇಕು.

ಹೌದು, ಲಾಕ್‌ ಡೌನ್‌ ಪರಿಣಾಮ ಎಲ್ಲರ ಬದುಕು ಚೆಲ್ಲಾಪಿಲ್ಲಿಯಾಗಿದೆ. ಈ ನಿಟ್ಟಿನಲ್ಲಿ ಮೆಲ್ಲನೆ ಲಾಕ್‌ ಡೌನ್‌ ಸಡಿಲಿಕೆಯಾಗಿದೆ. ಸದ್ಯಕ್ಕೆ ಚಿತ್ರೋದ್ಯಮ ಉಸಿರಾಡುವಂತಾಗಿದೆ. ಹಾಗಂತ, ಚಿತ್ರೀಕರಣಕ್ಕೆ ಅವಕಾಶ ಸಿಕ್ಕಿಲ್ಲ. ಪೋಸ್ಟ್‌ ಪ್ರೊಡಕ್ಷನ್‌ ಕೆಲಸಗಳಿಗೆ ಅವಕಾಶ ಸಿಕ್ಕಿದೆ. ಇದೊಂದು ರೀತಿಯ ಸಮಾಧಾನದ ವಿಷಯ. ಆದರೆ, ನಿರ್ಮಾಪಕರೂ ಸೇರಿದಂತೆ ಸಿನಿಮಾ ಮಂದಿಗೆ ಈಗ ಭಯ ಕಾಡುತ್ತಿರುವುದಂತೂ ನಿಜ. ಅದಕ್ಕೆ ಕಾರಣ, ಮತ್ತದೇ ಕೋವಿಡ್‌ 19. ಸಿನಿಮಾ ಚಿತ್ರೀಕರಣದ ಜೊತೆಯಲ್ಲಿ ಚಿತ್ರಮಂದಿರಗಳಿಗೂ ಅನುಮತಿ ಕೊಟ್ಟರೆ, ಶೂಟಿಂಗ್‌ ತನ್ನ ಪಾಡಿಗೆ ತಾನು ನಡೆಯುತ್ತದೆ.

ಸರ್ಕಾರ ಸೂಚಿಸುವ ಮಾರ್ಗಸೂಚಿ ಪ್ರಕಾರ, ಈಗಾಗಲೇ ಪೋಸ್ಟ್ ಪ್ರೊಡಕ್ಷನ್‌ ಕೆಲಸಗಳು ಶುರುವಾಗಿವೆ. ಹಾಗೇಯೇ, ಚಿತ್ರೀಕರಣ ನಡೆಸಲು ಅನುಮತಿ ಸಿಕ್ಕರೂ ಸಾಮಾಜಿಕ ಅಂತರ ಕಾಪಾಡಿಕೊಂಡು ಕೆಲಸ ಮಾಡುವ ಯೋಚನೆಯಲ್ಲೂ ಸಿನಿಮಾ ಮಂದಿ ಇದ್ದಾರೆ. ಆದರೆ ಸಿನಿಮಾ ಮಂದಿಗೆ ಇರುವ ಭಯ ಅಂದರೆ, ಚಿತ್ರಮಂದಿರಗಳಿಗೆ ತೆರೆಯುವ ಅವಕಾಶ ಬಂದರೆ, ಸಿನಿಮಾ ನೋಡಲು ಪ್ರೇಕ್ಷಕರು ಬರುತ್ತಾರ? ಎಂಬ ಭಯ ಅವರನ್ನು ಕಾಡುತ್ತಿದೆ. ಕೋವಿಡ್‌ 19 ಸೋಂಕು ಅಂಥದ್ದೊಂದು ಭಯ ಹುಟ್ಟಿಸಿದೆ. ಹಿಂದೆ ಒಳ್ಳೊಳ್ಳೆಯ ಸಿನಿಮಾಗಳು ಬಿಡುಗಡೆ ಕಂಡರೂ ಚಿತ್ರಮಂದಿರಗಳಿಗೆ ಬರುವ ಜನರ ಸಂಖ್ಯೆ ಕಡಿಮೆ ಇತ್ತು.

ಈಗ ಇಂತಹ ಸಮಯದಲ್ಲಿ ಜನರು ಚಿತ್ರಮಂದಿರಗಳಿಗೆ ಧೈರ್ಯವಾಗಿ ಬರುತ್ತಾರಾ ಎಂಬ ಆತಂಕ ಮನೆಮಾಡಿದೆ. ಕೋಟಿಗಟ್ಟಲೆ ಹಣ ಹಾಕಿ ನಿರ್ಮಾಣ ಮಾಡಿರುವ ನಿರ್ಮಾಪಕರು, ಜನರಿಗಾಗಿಯೇ ಸಿನಿಮಾ ಮಾಡಿದ್ದಾರೆ. ಈಗ ಚಿತ್ರಮಂದಿರಗಳಲ್ಲಿ ಅವರೇ ಕಾಣದಿದ್ದರೆ ನಮ್ಮ ಗತಿ ಏನು ಎಂಬ ಗೊಂದಲದಲ್ಲಿದ್ದಾರೆ. ಸ್ಟಾರ್ಸ್‌ ಸಿನಿಮಾಗಳು ಕೂಡ ಚಿತ್ರಮಂದಿರಗಳಿಗೆ ಬರಬೇಕಾ? ಬೇಡವಾ? ಎಂಬ ಪ್ರಶ್ನೆಯಲ್ಲಿವೆ. ಹೀಗಿರುವಾಗ, ಇನ್ನಿತರೆ ಹೊಸಬರ ಚಿತ್ರಗಳು ಪ್ರೇಕ್ಷಕರನ್ನೇ ನಂಬಿಕೊಂಡು ಬಿಡುಗಡೆಗೆ ಮುಂದಾದರೆ, ಸಮಸ್ಯೆ ಕಟ್ಟಿಟ್ಟ ಬುತ್ತಿ ಎಂಬ ಸತ್ಯ ಅರಿತಿದ್ದಾರೆ.

ಆದರೂ, ಈಗ ಅವರ ಮುಂದೆ ಉಳಿದಿರೋದು ಒಂದೇ ಪ್ರಶ್ನೆ, ಚಿತ್ರಮಂದಿರಗಳಲ್ಲಿ ನಮ್ಮ ಸಿನಿಮಾ ಬಿಡುಗಡೆ ಮಾಡಿದರೆ ಜನರು ಬರುತ್ತಾರಾ ಅನ್ನೋದು. ಕೆಲವು ನಿರ್ಮಾಪಕರುಗಳು ಈಗಾಗಲೇ ಬೇರೆ ಮಾರ್ಗ ಕಂಡುಕೊಡಿದ್ದಾರೆ. ಈಗಿರುವ ಪರಿಸ್ಥಿಯಲ್ಲಿ ಚಿತ್ರಮಂದಿರಗಳಲ್ಲಿ ಸಿನಿಮಾ ಬಿಡುಗಡೆಗೆ ಅವಕಾಶ ಮಾಡಿಕೊಟ್ಟರೂ, ಜನರು ಬಂದು ಕೂರುತ್ತಾರೆಬ ನಂಬಿಕೆ ಇಲ್ಲ. ಹಾಗಾಗಿಯೇ, ಕೆಲವು ನಿರ್ಮಾಪಕರು ತಮ್ಮ ಚಿತ್ರಗಳನ್ನು ಒಟಿಟಿ ಫ್ಲಾಟ್‌ ಫಾರ್ಮ್ ನಲ್ಲಿ ರಿಲೀಸ್‌ ಮಾಡುತ್ತಿದ್ದಾರೆ. ಚಿತ್ರಮಂದಿರ ನಂಬಿಕೊಂಡು ಅನೇಕ ಸಿನಿಮಾ ಮಂದಿ ಇದ್ದರೂ, ಇಂತಹ ಸಮಯದಲ್ಲಿ ಸಿನಿಮಾಗಳನ್ನು ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡಿದರೆ ಜನರು ಭಯ, ಭೀತಿ ಇಲ್ಲದೆ ಬಂದು ನೋಡುತ್ತಾರಾ ಎಂಬ ಸಣ್ಣದ್ದಾದು ಭಯ ಇದ್ದೇ ಇದೆ.

ಅದೇನೆ ಇರಲಿ, ಕೋವಿಡ್‌ 19 ಸಾಕಷ್ಟು ಸಮಸ್ಯೆ ಹುಟ್ಟುಹಾಕಿದೆ. ಸರ್ಕಾರ ಚಿತ್ರೀಕರಣಕ್ಕೆ ಹಾಗೂ ಚಿತ್ರಮಂದಿರಗಳಲ್ಲಿ ಸಿನಿಮಾ ಬಿಡುಗಡೆಗೆ ಅವಕಾಶ ಮಾಡಿಕೊಟ್ಟರೂ, ಆ ದಿನಗಳು ಮರುಕಳಿಸುತ್ತವಾ ಎಂಬ ಪ್ರಶ್ನೆಯಂತೂ ಇದೆ. ಲಾಕ್‌ ಡೌನ್‌ ಸಂಪೂರ್ಣ ಸಡಿಲಗೊಂಡು ಮೊದಲಿನಂತೆ, ಎಲ್ಲವೂ ನಡೆದರೆ ಚಂದನವನ ಚೆನ್ನಾಗಿರುತ್ತೆ. ಇಲ್ಲವಾದರೆ ಕಷ್ಟ ಕಟ್ಟಿಟ್ಟ ಬುತ್ತಿ. ಮಾಹಿತಿ ಪ್ರಕಾರ ಸಿನಿಮಾರಂಗ ಚೇತರಿಕೆಗೆ ವರ್ಷವೇ ಬೇಕಿದೆ. ಅದರಲ್ಲೂ ಚಿತ್ರಮಂದಿರಗಳ ಪ್ರಾರಂಭ ಕೂಡ ಹೇಳುವಷ್ಟು ಸುಲಭವಲ್ಲ ಎಂಬ ಮಾತೂ ಕೇಳಿಬರುತ್ತಿದೆ. ಹಲವು ವರ್ಷಗಳಿಂದಲೂ ಚಿತ್ರರಂಗ ಒಂದಷ್ಟು ಸಮಸ್ಯೆ ಎದುರಿಸುತ್ತಲೇ ಬಂದಿದೆ.

ಆ ಸಾಲಿಗೆ ಕೋವಿಡ್‌ 19 ಸಂಕಷ್ಟ ಇನ್ನಷ್ಟು ಚಿಂತೆಗೀಡು ಮಾಡಿರುವುದಂತೂ ನಿಜ. ಈ ಬಣ್ಣದ ಬದುಕನ್ನೇ ನಂಬಿದವರ ಪಾಲಿಗೆ ಕೋವಿಡ್‌ 19 ಅಕ್ಷರಶಃ ಯಮಸ್ವರೂಪಿ. ಅದೇನೆ ಸಮಸ್ಯೆ ಇದ್ದರೂ, ಈ ಮನರಂಜನೆ ಕ್ಷೇತ್ರ ತಕ್ಕಮಟ್ಟಿಗೆ ಎಲ್ಲಾ ನೋವನ್ನು ಮರೆಸುತ್ತದೆ. ಆದರೆ ಈಗ ಈ ಮನರಂಜನಾ ಕ್ಷೇತ್ರಕ್ಕೇ ತಲೆನೋವಾಗಿದೆ. ಎಲ್ಲಾ ಸಮಸ್ಯೆಗು ಇರುವಂತೆ ಇದಕ್ಕೂ ಒಂದು ಪರಿಹಾರ ಇದ್ದೇ ಇರುತ್ತೆ. ಮುಂದಿನ ದಿನಗಳಲ್ಲಿ ಎಲ್ಲವೂ ಒಳ್ಳೆಯದಾಗುತ್ತೆ ಎಂಬ ಆಶಾಭಾವನೆಯಲ್ಲೇ ಸಿನಿಮಾ ಮಂದಿ ದಿನ ಸವೆಸುತ್ತಿದ್ದಾರೆ.

* ವಿಜಯ್‌ ಭರಮಸಾಗರ

ಟಾಪ್ ನ್ಯೂಸ್

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.