ನಾಳೆ ಬ್ರಹ್ಮಾವರ ಸಂಚಾರಿ ನ್ಯಾಯಾಲಯ ಉದ್ಘಾಟನೆ; ಎಚ್‌. ಕೆ. ಪಾಟೀಲ್‌ ಉಡುಪಿ ಪ್ರವಾಸ


Team Udayavani, Aug 4, 2023, 12:56 AM IST

sanchari

ಉಡುಪಿ: ತಾಲೂಕು ಕೇಂದ್ರವಾಗಿರುವ ಬ್ರಹ್ಮಾವರದಲ್ಲಿ ಆ. 5ರಂದು ಬೆಳಗ್ಗೆ 10.30ಕ್ಕೆ ಸಂಚಾರಿ ಸಿವಿಲ್‌ ಜಡ್ಜ್ ಮತ್ತು ಜೆಎಂಎಫ್ಸಿ ನ್ಯಾಯಾಲಯ ಉದ್ಘಾಟನೆಗೊಳ್ಳಲಿದೆ ಎಂದು ಬ್ರಹ್ಮಾವರ ವಕೀಲರ ಸಂಘದ ಅಧ್ಯಕ್ಷ ಕಾಡೂರು ಪ್ರವೀಣ್‌ ಶೆಟ್ಟಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಜಿಲ್ಲಾ ನ್ಯಾಯಾಂಗ ಉಡುಪಿ, ಲೋಕೋಪಯೋಗಿ ಇಲಾಖೆ, ವಕೀಲರ ಸಂಘ ಬ್ರಹ್ಮಾವರದ ಆಶ್ರಯದಲ್ಲಿ ಕಾರ್ಯಕ್ರಮ ನಡೆಯಲಿದ್ದು, ರಾಜ್ಯ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಹಾಗೂ ಜಿಲ್ಲಾ ನ್ಯಾಯಾಂಗ ಕಟ್ಟಡ ಸಮಿತಿ ಅಧ್ಯಕ್ಷ ಪಿ.ಎಸ್‌. ದಿನೇಶ್‌ ಕುಮಾರ್‌ ಉದ್ಘಾಟಿಸುವರು.

ಬ್ರಹ್ಮಾವರ ಬಂಟರ ಭವನದಲ್ಲಿ ಸಭಾ ಕಾರ್ಯಕ್ರಮ ನಡೆಯಲಿದೆ. ಜಿಲ್ಲಾ ಆಡಳಿತಾತ್ಮಕ ನ್ಯಾಯಮೂರ್ತಿ ಎಂ.ಐ. ಅರುಣ್‌ ಅಧ್ಯಕ್ಷತೆ ವಹಿಸಲಿದ್ದಾರೆ. ಕಾನೂನು ಸಂಸದೀಯ ವ್ಯವಹಾರ, ಶಾಸನ ರಚನೆ ಸಚಿವ ಎಚ್‌.ಕೆ. ಪಾಟೀಲ್‌, ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಟಾಳ್ಕರ್‌, ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ, ಜಿಲ್ಲಾ ಪ್ರಧಾನ ಜಿಲ್ಲಾ ಸತ್ರ ನ್ಯಾಯಾಧೀಶ ಶಾಂತವೀರ ಶಿವಪ್ಪ ಭಾಗವಹಿಸಲಿದ್ದಾರೆ ಎಂದರು.

ಬ್ರಹ್ಮಾವರದ ನ್ಯಾಯಾಲಯದಿಂದ ಬ್ರಹ್ಮಾವರ ತಾಲೂಕಿನ ಜನರಿಗೆ ಹತ್ತಿರದಲ್ಲೇ ನ್ಯಾಯದಾನದ ವ್ಯವಸ್ಥೆಯಾಗುತ್ತಿದೆ. ಜನರ ಹಣ ಹಾಗೂ ಸಮಯ ಉಳಿತಾಯ ವಾಗಲಿದೆ ಎಂದರು.

87 ಲಕ್ಷ ರೂ. ವೆಚ್ಚ
ಬ್ರಹ್ಮಾವರದ ಸಮುದಾಯ ಆರೋಗ್ಯ ಕೇಂದ್ರದ ಹಳೆ ಕಟ್ಟಡವನ್ನು ನವೀಕರಿಸಿ 87 ಲಕ್ಷ ರೂ. ವೆಚ್ಚದಲ್ಲಿ ನ್ಯಾಯಾಲಯ ನಿರ್ಮಿಸಲಾಗಿದೆ. ವಕೀಲರಿಗೆ, ಶಿರಸ್ತೆದಾರರಿಗೆ, ಸರಕಾರಿ ವಕೀಲರಿಗೆ ಪ್ರತ್ಯೇಕ ಕೊಠಡಿಗಳು, ಕೋರ್ಟ್‌ ಕಲಾಪಕ್ಕೆ ಸಭಾಂಗಣ, ಪೀಠೊಪಕರಣ, ಶೌಚಾಲಯ ಸೇರಿದಂತೆ ಸಕಲ ವ್ಯವಸ್ಥೆಗಳು ಇಲ್ಲಿವೆ. ಮೊದಲು ಪ್ರಾಥಮಿಕ ಸಂಚಾರಿ ಪೀಠ ಆರಂಭಿಸಿ ಕ್ರಮೇಣ ಖಾಯಂ ಪೀಠಕ್ಕೆ ಅನುಮೋದನೆ ನೀಡಲಾಗುತ್ತದೆ ಎಂದು ತಿಳಿಸಿದರು.

52 ಗ್ರಾಮಗಳು ವ್ಯಾಪ್ತಿಗೆ
ಬ್ರಹ್ಮಾವರ ನ್ಯಾಯಾಲಯದಲ್ಲಿ ಬ್ರಹ್ಮಾವರ ಹಾಗೂ ಕೋಟ ಹೋಬಳಿಯ 52 ಗ್ರಾಮಗಳ ಪ್ರಕರಣಗಳು ಇತ್ಯರ್ಥವಾಗಲಿವೆ. ಈವರೆಗೂ ಇವು ಉಡುಪಿ ಮತ್ತು ಕುಂದಾಪುರ ನ್ಯಾಯಾಲಯಕ್ಕೆ ಹಂಚಿಕೆಯಾಗಿದ್ದವು. ಸಿವಿಲ್‌ ಕ್ರಿಮಿನಲ್‌ ಚೆಕ್‌ ಬೌನ್ಸ್‌, ಇತರ ಪ್ರಕರಣಗಳು ಸೇರಿ 4,000ಕ್ಕೂ ಮಿಕ್ಕಿ ಕೇಸುಗಳು ಬ್ರಹ್ಮಾವರ ನ್ಯಾಯಾಲಯಕ್ಕೆ ಬರಲಿವೆ. ಬ್ರಹ್ಮಾವರ ವಕೀಲರ ವೇದಿಕೆಯಲ್ಲಿ 65 ಮಂದಿ ಸದಸ್ಯರಿದ್ದು ಮುಂದೆ ಕುಂದಾಪುರ ಹಾಗೂ ಉಡುಪಿಯ ವಕೀಲರು ಕೂಡ ಕೇಸು ನಡೆಸಲು ಬ್ರಹ್ಮಾವರಕ್ಕೆ ಆಗಮಿಸಲಿದ್ದಾರೆ. ಒಟ್ಟಾರೆಯಾಗಿ 100 ಮಂದಿ ವಕೀಲರು ಹಾಗೂ ನೂರಾರು ಕಕ್ಷಿದಾರರ ಚಟುವಟಿಕೆ ಬ್ರಹ್ಮಾವರ ಕೋರ್ಟ್‌ನಲ್ಲಿ ನಡೆಯಲಿದೆ ಎಂದರು.

ಉಡುಪಿ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಬಿ. ನಾಗರಾಜ್‌, ಬ್ರಹ್ಮಾವರ ವಕೀಲರ ಸಂಘದ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ ಕರ್ಜೆ, ಕಾರ್ಯದರ್ಶಿ ಶ್ರೀಪಾದ ರಾವ್‌, ಜತೆ ಕಾರ್ಯದರ್ಶಿ ಮಹಮ್ಮದ್‌ ಸುಹಾನ್‌, ಖಜಾಂಚಿ ಸ್ಟೀವನ್‌ ಲೂವಿಸ್‌ ಪತ್ರಿಕಾಗೋಷ್ಠಿಯಲ್ಲಿದ್ದರು.

ಕಾನೂನು ಸಚಿವ ಎಚ್‌. ಕೆ. ಪಾಟೀಲ್‌ ಉಡುಪಿ ಪ್ರವಾಸ
ಉಡುಪಿ: ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಇಲಾಖೆ ಸಚಿವ ಎಚ್‌.ಕೆ. ಪಾಟೀಲ್‌ ಅವರು ಆಗಸ್ಟ್‌ 4 ಮತ್ತು 5ರಂದು ಉಡುಪಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.

ಆ. 4ರ ರಾತ್ರಿ ಉಡುಪಿಯಲ್ಲಿ ವಾಸ್ತವ್ಯ ಮಾಡಿ, ಆ. 5ರ ಬೆಳಗ್ಗೆ 10.30ಕ್ಕೆ ಬ್ರಹ್ಮಾವರದಲ್ಲಿ ಸಂಚಾರಿ ನ್ಯಾಯಾಲಯ ಉದ್ಘಾಟನೆ, ಬ್ರಹ್ಮಾವರ ಬಂಟರ ಭವನದಲ್ಲಿ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಅಪರಾಹ್ನ 3.30ಕ್ಕೆ ಜಿಲ್ಲಾ ಕಾಂಗ್ರೆಸ್‌ ಕಚೇರಿಗೆ ಭೇಟಿ, 4.30ಕ್ಕೆ ಉಡುಪಿ ವೈಕುಂಠ ಬಾಳಿಗಾ ಕಾನೂನು ಮಹಾವಿದ್ಯಾಲಯದಲ್ಲಿ ಮಾನವ ಹಕ್ಕುಗಳ ಸಂರಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ| ರವೀಂದ್ರನಾಥ್‌ ಶಾನುಭಾಗ್‌ ಅವರೊಂದಿಗೆ ಸಭೆ ನಡೆಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

ಟಾಪ್ ನ್ಯೂಸ್

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.