ಎಪಿಎಂಸಿ ಕಾಯ್ದೆ ತಿದ್ದುಪಡಿಗೆ ವಿರೋಧ
Team Udayavani, May 13, 2020, 6:50 AM IST
ಬೆಂಗಳೂರು: ಎಪಿಎಂಸಿ ಖಾಸಗೀಕರಣ ಹಾಗೂ ಕಾರ್ಮಿಕರು ದಿನದ 12 ಗಂಟೆ ಕೆಲಸ ಮಾಡುವ ಸಂಬಂಧ ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸುವ ಪ್ರಯತ್ನ ನಡೆಸುತ್ತಿದ್ದು, ಕೊರೊನಾ ಸಂಕಷ್ಟ ಸಂದರ್ಭದಲ್ಲಿ ಇಂತಹ ತೀರ್ಮಾನ ಕೈಗೊಳ್ಳುವ ಸರ್ಕಾರಕ್ಕೆ ನಾಚಿಕೆ ಆಗಬೇಕೆಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ವಾಗ್ಧಾಳಿ ನಡೆಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಎಪಿಎಂಸಿಗಳ ಖಾಸಗೀಕರಣದಿಂದ ಸರ್ಕಾರದ ಬೊಕ್ಕಸಕ್ಕೆ 600 ಕೋಟಿ ರೂ. ನಷ್ಟವಾಗಲಿದೆ. ರೈತರು ವರ್ತಕರಿಗೆ ಕಷ್ಟವಾಗಲಿದೆ. ನಮ್ಮ ಮಾರುಕಟ್ಟೆಗಳು ಉಳ್ಳವರ ಪಾಲಾಗಿ ರೈತರ ಉತ್ಪನ್ನಕ್ಕೆ ಬೆಲೆ ನಿಗದಿಯೂ ಅವರದೇ ಕೈಗೆ ಹೋಗಲಿದೆ. ಇದು ರೈತಾಪಿ ಸಮುದಾಯಕ್ಕೆ ಮಾರಕ ಎಂದಿದ್ದಾರೆ. ಅದೇ ರೀತಿ ಕಾರ್ಮಿಕರು ಈಗ ದಿನಕ್ಕೆ ಎಂಟು ಗಂಟೆ ಕೆಲಸ ಮಾಡುತ್ತಿದ್ದು ಆ ಅವಧಿ 12 ಗಂಟೆಗೆ ಏರಿಸಲು ಮುಂದಾಗಿದೆ.
ಇದು ಕಾರ್ಮಿಕ ವಿರೋಧಿ ನೀತಿ, ಕಾರ್ಮಿಕರು 12 ಗಂಟೆ ದುಡಿಯುವ ಸಾಮರ್ಥಯ ಹೊಂದಿರುತ್ತಾರೆಯೇ ಎಂಬುದರ ಬಗ್ಗೆ ವೈಜ್ಞಾನಿಕ ಅಧ್ಯಯನ ಆಗದೆ ತೀರ್ಮಾನ ಕೈಗೊಳ್ಳುವುದು ಅಮಾನವೀಯ. ಕೈಗಾರಿಕೆ ಉಳಿಸಲು ಸರ್ಕಾರ ಪರಿಹಾರ ಪ್ಯಾಕೇಜ್ ಕೊಡಲಿ, ಅದು ಬಿಟ್ಟು ಇಂತಹ ಕಾನೂನು ಸರಿಯಲ್ಲ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್ಕಮ್ ಹೊಟೇಲ್ನಲ್ಲಿ ವ್ಯವಸ್ಥೆ
VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್
Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು
IPL;ಮುಂಬೈ ಇಂಡಿಯನ್ಸ್ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ