ಕ್ಷೇತ್ರ ಪುನರ್ವಿಂಗಡನೆಗೂ ವಿರೋಧ- ಒಂದು ದೇಶ ಒಂದು ಚುನಾವಣೆ ವಿರುದ್ಧ ತ.ನಾ ನಿರ್ಣಯ
Team Udayavani, Feb 15, 2024, 12:19 AM IST
ಚೆನ್ನೈ: ಕೇಂದ್ರಕ್ಕೆ ಸವಾಲೆಸೆದಿರುವ ತಮಿಳುನಾಡುವ ಸರಕಾರ, ‘ಒಂದು ದೇಶ, ಒಂದು ಮತದಾನ’ ನೀತಿಯನ್ನು ಜಾರಿಗೊಳಿಸಬಾರದು. 2026ರ ನಂತರ ಜನಗಣತಿ ಆಧಾರದ ಮೇಲೆ ಕ್ಷೇತ್ರಗಳ ವಿಂಗಡಣೆ ಮಾಡಬಾರದು ಎಂಬ ಎರಡು ಪ್ರಮುಖ ನಿರ್ಣಯಗಳನ್ನು ವಿಧಾನ ಸಭೆಯಲ್ಲಿ ಒಮ್ಮತದಿಂದ ಅಂಗೀಕರಿಸಿದೆ.
ಕೇಂದ್ರದ “ಒಂದು ದೇಶ, ಒಂದು ಚುನಾವಣೆ” ಪ್ರಜಾಪ್ರಭುತ್ವಕ್ಕೆ ವಿರೋಧಿ ಕ್ರಮ ಎಂದು ಎಂದು ಸಿಎಂ ಸ್ಟಾಲಿನ್ ಆರೋಪಿಸಿದ್ದಾರೆ. ಪರಿಣಾಮಕಾರಿಯಾಗಿ ಜನಸಂಖ್ಯೆ ನಿಯಂತ್ರಿಸುತ್ತಿರುವ ತಮಿಳುನಾಡಿನಂಥ ರಾಜ್ಯಗಳಿಗೆ ದಂಡ ವಿಧಿಸಬಾರದು ಎಂದು ಒತ್ತಾಯಿಸಿದ್ದಾರೆ.
ಇದರ ಜತೆಗೆ ಜನಗಣತಿಯ ಬಳಿಕ ನಡೆಯಲಿರುವ ಕ್ಷೇತ್ರ ಪುನರ್ ವಿಂಗಡಣೆಯಲ್ಲಿ ತಮಿಳುನಾಡಿನಲ್ಲಿ ಸದ್ಯ ಇರುವ 39 ಕ್ಷೇತ್ರಗಳ ಬದಲಿಗೆ ಕಡಿಮೆಯಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದರು. ಹೀಗಾಗಿ ಕೇಂದ್ರ ಸರಕಾರ ಕೈಗೊಳ್ಳಲಿರುವ ತೀರ್ಮಾನಕ್ಕೆ ತಮಿಳು ನಾಡು ವಿಧಾನಸಭೆ ಒಕ್ಕೊರಲಿನಿಂದ ಖಂಡಿಸುತ್ತದೆ ಎಂದು ಸಿಎಂ ಸ್ಟಾಲಿನ್ ಘೋಷಿಸಿದ್ದಾರೆ.
ಈ ನಿರ್ಣಯವನ್ನು ಡಿಎಂಕೆಯ ಮಿತ್ರಪಕ್ಷಗಳಾದ ಕಾಂಗ್ರೆಸ್, ವಿಸಿಕೆ, ಎಂಡಿಎಂಕೆ ಮತ್ತು ಇತರ ಎಡಪಕ್ಷಗಳು ಬೆಂಬಲಿಸಿದ್ದು ಕಂಡುಬಂತು. ಆದರೆ ಈ ವೇಳೆ ಪಿಎಂಕೆ ಪಕ್ಷದ ಶಾಸಕರು ಇರಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
MUST WATCH
ಹೊಸ ಸೇರ್ಪಡೆ
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು