ಉಪಚುನಾವಣೆಗೆ “ಸಂಘಟನೆ’ ವಿಶ್ವಾಸ ಮುಖ್ಯ


Team Udayavani, Sep 24, 2019, 3:08 AM IST

bjp-logo

ಬೆಂಗಳೂರು: ರಾಜ್ಯದಲ್ಲಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಪರಿಣಾಮಕಾರಿ ಕಾರ್ಯ ನಿರ್ವಹಣೆ ಮೂಲಕ ಬಿಜೆಪಿ ಭರ್ಜರಿ ಜಯ ದಾಖಲಿಸುವಲ್ಲಿ ಸಂಘಟನೆಯ “ಕೇಡರ್‌’ ಮಹತ್ವದ ಪಾತ್ರ ವಹಿಸಿತ್ತು. ಇದೀಗ ಎದುರಾಗಿರುವ ಉಪಚುನಾವಣೆಯಲ್ಲೂ “ಕೇಡರ್‌’ ಅಭ್ಯರ್ಥಿಗಳ ಪರ ಅಷ್ಟೇ ಸಕ್ರಿಯವಾಗಿ ಪ್ರಚಾರ ನಡೆಸುವುದೇ ಎಂಬ ಪ್ರಶ್ನೆ ಪಕ್ಷದಲ್ಲೇ ಮೂಡಿದೆ.

ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆಗಾಗಿ “ತ್ಯಾಗ’ ಮಾಡಿದವರ ಆಶೋತ್ತರಗಳಿಗೆ ಸಿಎಂ ಯಡಿಯೂರಪ್ಪ ಸೇರಿ ಸಂಪುಟ, ಸರ್ಕಾರ ಸ್ಪಂದಿಸುತ್ತಿದೆ ಎಂಬ ಮಾತಿದೆ. ಸದ್ಯ ಎದುರಾಗಿರುವ ಉಪಚುನಾವಣೆಗೆ ಹಿಂದಿನ ಚುನಾವಣೆಗಳಲ್ಲಿ ಪ್ರತಿಸ್ಪರ್ಧಿಯಾಗಿದ್ದವರೇ ಅಭ್ಯರ್ಥಿ ಯಾ ದರೆ ಇಲ್ಲವೇ ಅವರ ಆಪೆ¤àಷ್ಟರು ಅಭ್ಯರ್ಥಿ ಯಾದರೆ ಹೇಗೆ ಸಂಘಟನೆ ಸ್ಪಂದಿಸಲಿದೆ ಎಂಬ ಕುತೂ ಹಲ ಮೂಡಿದೆ. ಸಂಘಟನೆಯ ವಿಶ್ವಾಸ ಗಳಿಸಿಕೊಂಡು ಮುಂದೆ ತಲೆ ಎತ್ತಬಹುದಾದ ಭಿನ್ನಮತ ಭುಗಿಲೇಳ ದಂತೆ ನಿಯಂತ್ರಿಸಿ ಗೆಲುವಿನ ದಡ ಸೇರಬೇಕಾದ ಸವಾಲು ರಾಜ್ಯ ಬಿಜೆಪಿ ನಾಯಕರ ಮುಂದಿದೆ.

ರಾಜ್ಯದ ಬಹುತೇಕ ಕಡೆ ಬಿಜೆಪಿ ಸಂಘಟನೆ ನೆಲೆಯೂ ರಿದ್ದು, ನಿಷ್ಠೆಯಿಂದ ಪಕ್ಷದ ವರ್ಚಸ್ಸು ಹೆಚ್ಚಿಸಲು ಶ್ರಮಿಸುವ ಜತೆಗೆ ಸಂಘಟನೆಗೂ ಒತ್ತು ನೀಡುವ ಕೇಡರ್‌ ಇದೆ. ಜನರೊಂದಿಗೆ ನೇರವಾಗಿ ವ್ಯವಹರಿಸುವುದರಿಂದ ಸಂಘಟನೆ ದೃಷ್ಟಿಯಿಂದ ಪರಿಣಾಮಕಾರಿ ಎನಿಸಿದೆ. ಸಾಮಾನ್ಯವಾಗಿ ಚುನಾ ವಣಾ ರಾಜಕೀಯದಲ್ಲಿ ತೆರೆಮರೆಯಲ್ಲೇ ಮಹ ತ್ವದ ಪಾತ್ರ ವಹಿಸುವ ಸಂಘಟನೆಯು ತೆರೆಯ ಮುಂದೆ ಕಾಣಿಸಿಕೊಳ್ಳುವುದು ಅಪರೂಪ.

ಆದರೆ ಕಳೆದ ಲೋಕಸಭಾ ಚುನಾವಣೆಯಲ್ಲಿ ಸಂಘಟನೆಯು ವ್ಯಾಪಕವಾಗಿ ಬಿಜೆಪಿ ಪರ ಪ್ರಚಾರ ನಡೆಸಿತ್ತು. ರಾಷ್ಟ್ರೀಯತೆ ಕಾರಣಕ್ಕೆ ಪಕ್ಷವನ್ನು ಬೆಂಬಲಿ ಸು ವಂತೆ ಜನರನ್ನು ಪ್ರೇರೇಪಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸಿ, ಬಿಜೆಪಿ ಭರ್ಜರಿ ಜಯ ದಾಖಲಿಸು ವಲ್ಲಿಯೂ ಮಹತ್ವದ ಪಾತ್ರ ವಹಿಸಿತ್ತು. ಇದೀಗ ರಾಜ್ಯದಲ್ಲಿ ಬಿಜೆಪಿ ಸರ್ಕಾರವೇ ಇದ್ದು, ವಿಧಾನಸಭೆ ಯಲ್ಲಿ ಸರಳ ಬಹುಮತ ಗಳಿಸಲು ಸದ್ಯ ಎದುರಾಗಿ ರುವ 15 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ನಿರ್ಣಾಯಕ ಎನಿಸಿದೆ. ಮುಂದಿನ ಮೂರೂವರೆ ವರ್ಷ ರಾಜ್ಯದಲ್ಲಿ ಬಿಜೆಪಿ ನಿರಾತಂಕವಾಗಿ ಆಡಳಿತ ನಡೆಸಲು ಕನಿಷ್ಠ ಏಳು ಸ್ಥಾನ ಗೆಲ್ಲಬೇಕಿದೆ.

ಸದ್ಯ ಅನರ್ಹತೆಗೊಂಡ ಶಾಸಕರ ಪರವಾಗಿ ಸುಪ್ರೀಂ ಕೋರ್ಟ್‌ ತೀರ್ಪು ನೀಡಿದರೆ ಇಲ್ಲವೇ ಪ್ರಕರಣದ ವಿಚಾರಣೆ ಜತೆ ಜತೆಗೆ ಉಪಚುನಾವಣೆಗೆ ಸ್ಪರ್ಧಿಸಲು ಅವಕಾಶ ನೀಡಿದರೆ ಬಹುತೇಕರು ಬಿಜೆಪಿಯಿಂದ ಸ್ಪರ್ಧಿಸುವ ಸಾಧ್ಯತೆಯಿದೆ. ಇದಕ್ಕೆ ಸಂಘಟನೆ ಹೇಗೆ ಸ್ಪಂದಿಸಲಿದೆ ಎಂಬುದು ಮುಖ್ಯ. ಏಕೆಂದರೆ ಅನರ್ಹ ಶಾಸಕರೆಲ್ಲ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಮಣಿಸಿದವರೇ ಆಗಿದ್ದಾರೆ. ಬದಲಾದ ಸನ್ನಿವೇಶದಲ್ಲಿ ಅವರೇ ಅಭ್ಯರ್ಥಿಗಳಾದರೆ ಅವರ ಪರವಾಗಿ ಎಷ್ಟರ ಮಟ್ಟಿಗೆ ಮತ ಯಾಚಿಸಲಿದೆ ಎಂಬ ಪ್ರಶ್ನೆ ನಾಯಕರಲ್ಲೇ ಮೂಡಿದೆ.

ಒಂದೊಮ್ಮೆ ಅನರ್ಹಗೊಂಡ ಶಾಸಕರಿಗೆ ಸ್ಪರ್ಧೆಗೆ ಅವಕಾಶ ಸಿಗದಿದ್ದರೆ ಅವರು ಸೂಚಿಸಿದವರಿಗೆ ಟಿಕೆಟ್‌ ನೀಡಲು ಬಿಜೆಪಿ ನಿರ್ಧರಿಸಿದೆ ಎಂಬ ಮಾಹಿತಿಯಿದೆ. ಇದು ಸಹ ಸಂಘಟನೆ ಮೇಲೆ ಗಂಭೀರ ಪರಿಣಾಮ ಬೀರುವ ಲಕ್ಷಣ ಕಾಣುತ್ತಿದೆ. ಬಿಜೆಪಿ ಸರ್ಕಾರ ರಚನೆ ಗಾಗಿ ತ್ಯಾಗ ಮಾಡಿದರು ಎಂಬ ಕಾರಣಕ್ಕೆ ಅನರ್ಹತೆ ಗೊಂಡ ಶಾಸಕರು ಕಣಕ್ಕಿಳಿದರೆ ಒಪ್ಪಬಹುದೇನೋ. ಆದರೆ ಅವರ ಕುಟುಂಬದವರು ಇಲ್ಲವೇ ಅವರು ಸೂಚಿಸಿದವರನ್ನು ಅಭ್ಯರ್ಥಿಗಳನ್ನಾಗಿ ಮಾಡಿದರೆ ಕಾರ್ಯಕರ್ತರ ಗತಿಯೇನು ಎಂಬ ಹಲವೆಡೆ ಪ್ರಶ್ನಿಸಲಾರಂಭಿಸಿದ್ದಾರೆ ಎಂದು ಮೂಲಗಳು ಹೇಳಿವೆ.

ಸಂಘಟನೆಯ ಕೆಲವರಿಂದ ವಿರೋಧ: 15 ಕ್ಷೇತ್ರಗಳ ಪೈಕಿ ಬಹುತೇಕ ಕಡೆ ಅನರ್ಹತೆಗೊಂಡ ಶಾಸಕರು ಅಭ್ಯರ್ಥಿಗಳಾಗಲು ಇಲ್ಲವೇ ಅವರ ಕುಟುಂಬದವರು ಅಭ್ಯರ್ಥಿಯಾಗಲು ಪಕ್ಷದ ಕಾರ್ಯಕರ್ತರು, ಸಂಘಟನೆಯ ಕೆಲವರ ವಿರೋಧವಿದೆ. ಹಿರೇಕೆರೂರು, ಯಲ್ಲಾಪುರ, ಮಹಾಲಕ್ಷ್ಮೀ ಲೇಔಟ್‌, ಕೆ.ಆರ್‌.ಪುರ, ಶಿವಾಜಿನಗರ ಸೇರಿ ಕೆಲ ಕ್ಷೇತ್ರಗಳಲ್ಲಿ ತೀವ್ರ ಅಪಸ್ವರ ಕೇಳಿಬಂದಿ ರುವುದು ಗಮನಕ್ಕೆ ಬಂದಿದೆ. ಹಾಗೆಂದು ಯಾರೊಬ್ಬರು ಪಕ್ಷೇತರರಾಗಿ ಕಣಕ್ಕಿಳಿಯುವ ಸಾಧ್ಯತೆ ಇಲ್ಲ. ಹಿರಿಯ ನಾಯಕರು ಸಂಘಟನೆಯ ವಿಶ್ವಾಸವನ್ನು ಗಳಿಸಿ ಮುಂದುವರಿಯಬೇಕಿದೆ ಎಂದು ಬಿಜೆಪಿ ಸಂಘಟನೆಯ ಪ್ರಮುಖರೊಬ್ಬರು ತಿಳಿಸಿದರು.

ನಾಯಕರು ಶಿಸ್ತು ಪಾಲಿಸಬೇಕು: ಪಕ್ಷದ ಸಿದ್ಧಾಂತ, ಶಿಸ್ತು ಪರಿಪಾಲಿಸುತ್ತಾ ಎದುರಾಳಿಗಳ ವಿರುದ್ಧ ನ್ಯಾಯಸಮ್ಮತ ಹೋರಾಟ ನಡೆಸಿ ಕೊಂಡು ಬಂದವರ ಮನಸ್ಸಿಗೂ ನೋವಾಗದಂತೆ ಪಕ್ಷದ ಹಿರಿಯ ನಾಯಕರು ನೋಡಿಕೊಳ್ಳಬೇಕು. ನಮ್ಮ ಮೂಲ ಸಿದ್ಧಾಂತದಂತೆ ನಡೆಸಿದ ಹೋರಾಟದಿಂದ ಹಿಂದೆ ಸರಿಯುವ ಇಲ್ಲವೇ ರಾಜಿಯಾಗುವಂತಾದರೆ ನಮಗೂ ಇತರೆ ಪಕ್ಷಗಳಿಗೂ ವ್ಯತ್ಯಾಸವಿರದು. ಈ ಅಂಶಗಳನ್ನು ಹಿರಿಯ ನಾಯಕರ ಗಮನಕ್ಕೆ ತರಲಾಗಿದೆ. ಕಾರ್ಯಕರ್ತರಿಗೆ ಶಿಸ್ತು ಹೇಳುವ ನಾಯಕರೂ ಶಿಸ್ತು ಪಾಲನೆಗೆ ಒತ್ತು ನೀಡಬೇಕು ಎಂದು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಪರಾಜಿತ ಕೆಲ ಅಭ್ಯರ್ಥಿಗಳು ಹೇಳಿದ್ದಾರೆ.

* ಎಂ. ಕೀರ್ತಿಪ್ರಸಾದ್‌

ಟಾಪ್ ನ್ಯೂಸ್

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.