50 ಸಾವಿರಕ್ಕೂ ಅಧಿಕ ಗಿಡಗಳು ವಿತರಣೆಗೆ ಸಿದ್ಧ

ಬಂಟ್ವಾಳ ಸಾಮಾಜಿಕ ಅರಣ್ಯ ವಲಯ

Team Udayavani, Jun 8, 2020, 5:54 AM IST

50 ಸಾವಿರಕ್ಕೂ ಅಧಿಕ ಗಿಡಗಳು ವಿತರಣೆಗೆ ಸಿದ್ಧ

ವಿಶೇಷ ವರದಿ- ಬಂಟ್ವಾಳ: ಸಸ್ಯಸಂಪತ್ತನ್ನು ವೃದ್ಧಿಸುವ ದೃಷ್ಟಿಯಿಂದ ಪ್ರತಿ ಮಳೆಗಾಲದ ಪ್ರಾರಂಭದಲ್ಲಿ ಅರಣ್ಯ ಇಲಾಖೆಯ ವತಿಯಿಂದ ಸಸಿಗಳನ್ನು ನೆಡುವ, ಪ್ರೋತ್ಸಾಹಿಸುವ ಕಾರ್ಯ ಮಾಡಲಾಗುತ್ತಿದ್ದು, ಬಂಟ್ವಾಳ ತಾಲೂಕಿನಲ್ಲಿ ಈ ಬಾರಿ ಸಾಮಾಜಿಕ ಅರಣ್ಯ ಇಲಾಖೆಯ ವತಿಯಿಂದ ಸುಮಾರು 50 ಸಾವಿರಕ್ಕೂ ಅಧಿಕ ಗಿಡಗಳು ವಿತರಣೆ ಸಿದ್ಧಗೊಂಡಿವೆ.

ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಲ್ಲಿ ಈ ಸಸಿಗಳು ಉಚಿತವಾಗಿ ವಿತರಣೆಯಾಗಲಿದ್ದು, ಆಸಕ್ತರು ಸೂಕ್ತ ದಾಖಲೆಗಳನ್ನು ನೀಡಿ ಗಿಡಗಳನ್ನು ಪಡೆದುಕೊಳ್ಳಬೇಕಿದೆ. ಸಾಮಾಜಿಕ ಅರಣ್ಯ ಬಂಟ್ವಾಳ ವಲಯದ ನೆಟ್ಲಮುಟ್ನೂರಿನ ಕೇಂದ್ರೀಯ ನರ್ಸರಿಯಲ್ಲಿ ಜೂ. 1ರಿಂದ ಗಿಡಗಳ ವಿತರಣೆ ಪ್ರಾರಂಭಗೊಂಡಿದ್ದು, ಈಗಾಗಲೇ 2 ಸಾವಿರಕ್ಕೂ ಅಧಿಕ ಗಿಡಗಳನ್ನು ಫಲಾನುಭವಿಗಳಿಗೆ ವಿತರಿಸಲಾಗಿದೆ.

ಜತೆಗೆ ಉದ್ಯೋಗ ಖಾತರಿ ಯೋಜನೆಯಲ್ಲಿ ಗ್ರಾ.ಪಂ. ಫಲಾನುಭವಿಗಳಿಗೆ 2,000 ಕಸಿ ಗೇರು ಗಿಡಗಳು ಕೂಡ ಲಭ್ಯವಿವೆ. ರಸ್ತೆ ಬದಿ, ನೆಡುತೋಪು, ಸರಕಾರಿ ಕಚೇರಿ ಆವರಣಗಳಲ್ಲಿಯೂ ಗಿಡ ನೆಡುವುದಕ್ಕಾಗಿ ಸಾಮಾಜಿಕ ಅರಣ್ಯದಿಂದ ಗಿಡಗಳ ವಿತರಣೆ ನಡೆಯಲಿವೆ. ಮುಖ್ಯವಾಗಿ ಉದ್ಯೋಗ ಸೃಷ್ಟಿಯನ್ನು ಗಮನದಲ್ಲಿಸಿ ನರೇಗಾದ ಮೂಲಕ ಗಿಡಗಳ ವಿತರಣೆ ನಡೆಯುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಸ್ತೆ ಬದಿ ಗಿಡಗಳು
ಇಲಾಖೆಯ ವತಿಯಿಂದ ರಸ್ತೆ ಬದಿಗಳಲ್ಲೂ ಗಿಡ ನೆಡುವ ಉದ್ದೇಶದಿಂದ 3 ಸಾವಿರ ಗಿಡಗಳನ್ನು ಬೆಳೆಸಲಾಗಿದೆ. ಪ್ರಸ್ತುತ ಸೈಕ್ಲೋನ್‌ ಪ್ರಭಾವದಿಂದ ಮಳೆಯಾಗುತ್ತಿದ್ದು, ಮುಂದೆ ಪೂರ್ಣ ಪ್ರಮಾಣದಲ್ಲಿ ಮಳೆ ಆರಂಭಗೊಂಡರೆ ಅದನ್ನು ನೆಡುವ ಕಾರ್ಯ ನಡೆಯಲಿದೆ ಎಂದು ಸಾಮಾಜಿಕ ಅರಣ್ಯ ವಲಯದ ಅಧಿಕಾರಿಗಳು ತಿಳಿಸಿದ್ದಾರೆ.

ಯಾವ್ಯಾವ ಗಿಡಗಳು
ಸಾಮಾಜಿಕ ಅರಣ್ಯದಿಂದ ವಿತರಣೆಯಾಗುವ ಗಿಡಗಳು ಉತ್ತಮ ಗುಣಮಟ್ಟದಿಂದ ಕೂಡಿದ್ದು, ಹಣ್ಣುಗಳ ಗಿಡಗಳು ಕೂಡ ಒಳಗೊಂಡಿರುತ್ತವೆ. ಮುಖ್ಯವಾಗಿ ಹಲಸು, ಹೆಬ್ಬಲಸು, ಪುನರ್‌ಪುಳಿ, ಮಹಾಗನಿ, ನೆಲ್ಲಿ, ಕಹಿಬೇವು, ಶ್ರೀಗಂಧ, ನಿಂಬೆ, ಸಂಪಿಗೆ, ಬೀಟೆ, ಸೀತಾಫಲ, ನೇರಳೆ, ಜಂಬುನೇರಳೆ ಮುಂತಾದ ಗಿಡಗಳನ್ನು ಬೆಳೆಸಲಾಗಿದ್ದು, 8×12 ಹಾಗೂ 6×9 ಗಾತ್ರದ ಪಾಲಿಥೀನ್‌ ಚೀಲಗಳಲ್ಲಿ ಗಿಡ ಬೆಳೆಸಲಾಗಿದೆ.

 ವಿತರಣೆ ಪ್ರಾರಂಭ
ನರೇಗಾ ಯೋಜನೆಯ ಮೂಲಕ ಸಾರ್ವಜನಿಕರಿಗೆ ವಿತರಣೆ ಮಾಡುವುದಕ್ಕೆ 50 ಸಾವಿರ ಗಿಡಗಳನ್ನು ಸಿದ್ಧಪಡಿಸಲಾಗಿದ್ದು, ಜೂ. 1ರಿಂದ ವಿತರಣೆ ಪ್ರಾರಂಭಗೊಂಡಿದೆ. ಸುಮಾರು 3,000 ಗಿಡಗಳನ್ನು ರಸ್ತೆ ಬದಿಗಳಲ್ಲಿ ನೆಡುವುದಕ್ಕಾಗಿ ಸಿದ್ಧಪಡಿಸಲಾಗಿದ್ದು, ಪೂರ್ಣ ಪ್ರಮಾಣದಲ್ಲಿ ಮಳೆ ಆರಂಭಗೊಂಡ ತತ್‌ಕ್ಷಣ ನೆಡುವ ಕಾರ್ಯವನ್ನೂ ಪ್ರಾರಂಭಿಸುತ್ತೇವೆ.
-ರಾಜೇಶ್‌ ಬಳಿಗಾರ್‌,ವಲಯ ಅರಣ್ಯಾಧಿಕಾರಿ, ಸಾಮಾಜಿಕ ಅರಣ್ಯ ವಲಯ, ಬಂಟ್ವಾಳ

ಟಾಪ್ ನ್ಯೂಸ್

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.