6,000 ಮಂದಿ ಭೂಸಮಾಧಿ:  ಟರ್ಕಿ, ಸಿರಿಯಾದಲ್ಲಿ  ಮತ್ತೆ ಮತ್ತೆ ಭೂಕಂಪ 

 ಸಂತ್ರಸ್ತ ಪ್ರದೇಶಕ್ಕೆ ಭಾರತದ 4 ರಕ್ಷಣ ವಿಮಾನ ರವಾನೆ

Team Udayavani, Feb 8, 2023, 7:10 AM IST

6,000 ಮಂದಿ ಭೂಸಮಾಧಿ:  ಟರ್ಕಿ, ಸಿರಿಯಾದಲ್ಲಿ  ಮತ್ತೆ ಮತ್ತೆ ಭೂಕಂಪ 

ಇಸ್ತಾಂಬುಲ್‌/ಹೊಸದಿಲ್ಲಿ: ಭೂ ಕಂಪದಿಂದ ಜರ್ಝರಿತವಾಗಿರುವ ಟರ್ಕಿ ಮತ್ತು ಸಿರಿಯಾ ದೇಶಗಳಿಗೆ ಭಾರತ ಸಹಾಯ ಹಸ್ತ ಚಾಚಿದ್ದು, ಭಾರತೀಯ ವಾಯುಸೇನೆಯ ನಾಲ್ಕು ವಿಮಾನಗಳಲ್ಲಿ ಸಂಚಾರಿ ಆಸ್ಪತ್ರೆ, ವೈದ್ಯಕೀಯ ಸಿಬಂದಿ, ರಾಷ್ಟ್ರೀಯ ವಿಪತ್ತು ನಿರ್ವಹಣ ತಂಡದ ಸಿಬಂದಿ ತೆರಳಿ ರಕ್ಷಣ ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿದ್ದಾರೆ.

ಟರ್ಕಿ ಮತ್ತು ಸಿರಿಯಾದಲ್ಲಿ ಇದುವರೆಗೆ ನಾಲ್ಕು ಪ್ರಬಲ ಭೂಕಂಪಗಳು ಮತ್ತು ಹಲವು ಪಶ್ಚಾತ್‌ ಕಂಪನಗಳಾಗಿವೆ. ಮಂಗಳವಾರವೂ ಒಂದು ಬಾರಿ ಭೂಮಿ ಕಂಪಿಸಿದ್ದು, ಜನರು ಸಾವಿನ ಭೀತಿಯಿಂದಲೇ ದಿನ ದೂಡುತ್ತಿದ್ದಾರೆ. ಟರ್ಕಿ ಮತ್ತು ಸಿರಿಯಾ ಸೇರಿ ಈವರೆಗೆ 6,000ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದು, ಸಂಖ್ಯೆ ಇನ್ನಷ್ಟು ಹೆಚ್ಚುವ ಸಾಧ್ಯತೆ ಇದೆ.

ಜಗತ್ತಿನ ನಾನಾ ದೇಶಗಳ ರಕ್ಷಣ ತಂಡಗಳು ಟರ್ಕಿ ಮತ್ತು ಸಿರಿಯಾ ತಲುಪಿವೆ. ಟರ್ಕಿಯ ವಿಪತ್ತು ನಿರ್ವಹಣ ಮಂಡಳಿಯ ಪ್ರಕಾರ ವಿವಿಧ ದೇಶಗಳ 24,400 ತುರ್ತು ಸಿಬಂದಿ ರಕ್ಷಣೆಯಲ್ಲಿ ತೊಡಗಿದ್ದಾರೆ.

ಟರ್ಕಿಯಲ್ಲಿ ಒಟ್ಟು 6 ಸಾವಿರಕ್ಕೂ ಅಧಿಕ ಕಟ್ಟಡಗಳು ಧರಾಶಾಯಿಯಾಗಿವೆ. ಈ ಮಧ್ಯೆ ಗಾಯದ ಮೇಲೆ ಉಪ್ಪು ಸುರಿದಂತೆ ರಕ್ಷಣ ಕಾರ್ಯಾಚರಣೆಗೆ ತೀವ್ರ ಚಳಿ ಅಡ್ಡಿ ಮಾಡುತ್ತಿದೆ. ಹಿಮ ಮಳೆ ಸುರಿಯುತ್ತಿದ್ದು, ಕಟ್ಟಡಗಳ ಅಡಿಯಲ್ಲಿ ಸಿಲುಕಿರುವವರನ್ನು ಹೊರತೆಗೆಯುವುದೇ ಹರಸಾಹಸವಾಗಿದೆ. ಆಗಾಗ್ಗೆ ಉಂಟಾಗುತ್ತಿರುವ ಪಶ್ಚಾತ್‌ ಕಂಪನಗಳು ಕೂಡ ಅಡ್ಡಿಯಾಗಿವೆ.

ಇದುವರೆಗೆ 10 ಪ್ರಾಂತಗಳಲ್ಲಿ 7,800 ಮಂದಿಯನ್ನು ರಕ್ಷಿಸಲಾಗಿದ್ದು, ಇನ್ನೂ ಶೋಧ ಕಾರ್ಯಾಚರಣೆ ನಡೆಯುತ್ತಿದೆ. ಈ ಎಲ್ಲ 10 ಪ್ರಾಂತಗಳಲ್ಲಿಯೂ ತುರ್ತು ಪರಿಸ್ಥಿತಿ ಘೋಷಣೆ ಮಾಡಲಾಗಿದೆ.

ಕಟ್ಟಡಗಳ ಕೆಳಗೆ ಸಿಲುಕಿರುವ ಕುಟುಂಬಸ್ಥರನ್ನು ಬದುಕಿಸಲು ಜನರು ಒದ್ದಾಡುತ್ತಿದ್ದಾರೆ. ನುರ್ಗುಲ್‌ ಅಟಾಯ್‌ ಎಂಬಾಕೆಯ ಮನೆ ಕುಸಿದು ಬಿದ್ದಿದ್ದು, ಅದರಡಿ ಅವರ ತಾಯಿ ಸಿಲುಕಿದ್ದಾರೆ. ಆಕೆಯ ರೋದನ ಕೇಳುತ್ತಿದೆ, ಆದರೆ ರಕ್ಷಣೆ ಮಾಡಲಾಗುತ್ತಿಲ್ಲ ಎಂದು ಅಟಾಯ್‌ ನೋವು ತೋಡಿಕೊಂಡಿದ್ದಾರೆ.

ಸಿರಿಯಾದಲ್ಲೂ ಪರಿಸ್ಥಿತಿ ವಿಕೋಪಕ್ಕೆ ಹೋಗಿದೆ. ಅಲ್ಲಿ ಸುಮಾರು 800 ಮಂದಿ ಅಸುನೀಗಿದ್ದು, 2,200ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಇಲ್ಲಿಯೂ ಸಾವಿನ ಸಂಖ್ಯೆ ಗಣನೀಯವಾಗಿ ಏರಬಹುದು ಎಂದು ಹೇಳಲಾಗುತ್ತಿದೆ.

ಧನ್ಯವಾದ ಹೇಳಿದ ಟರ್ಕಿ, ಸಿರಿಯಾ|
ಭೂಕಂಪವಾದ ಕೆಲವೇ ತಾಸುಗಳಲ್ಲಿ ಭಾರತ ನೆರವಿಗೆ ಧಾವಿಸಿದೆ. ಭಾರತವೇ ನಿಜವಾದ “ದೋಸ್ತ್’ ಎನ್ನುವುದು ಇದಕ್ಕೇ ಎಂದು ಭಾರತದಲ್ಲಿರುವ ಟರ್ಕಿಯ ರಾಯಭಾರಿ ಹೇಳಿದ್ದಾರೆ. ಇನ್ನೊಂದೆಡೆ ಸಿರಿಯಾ ಕೂಡ ಭಾರತಕ್ಕೆ ಧನ್ಯವಾದ ತಿಳಿಸಿದೆ.

ಕಿಡಿಗೇಡಿ ಪಾಕ್‌
ಪಾಕಿಸ್ಥಾನ ಆರ್ಥಿಕ ಹಿಂಜರಿತದಲ್ಲಿ ಮುಳುಗೇಳುತ್ತಿದ್ದರೂ ಅದಕ್ಕೆ ಇನ್ನೂ ಬುದ್ಧಿ ಬಂದಿಲ್ಲ. ಇದಕ್ಕೆ ಉದಾಹರಣೆ ಎಂಬಂತೆ ಮಂಗಳವಾರ ಬೆಳಗ್ಗೆ ರಕ್ಷಣ ಸಾಮಗ್ರಿ ಮತ್ತು ರಾಷ್ಟ್ರೀಯ ವಿಪತ್ತು ದಳದ ಸಿಬಂದಿಯೊಂದಿಗೆ ಟರ್ಕಿಗೆ ಹೊರಟಿದ್ದ ಭಾರತೀಯ ವಾಯು ಸೇನಾ ವಿಮಾನಕ್ಕೆ ಪಾಕ್‌ ತನ್ನ ವಾಯು ಪ್ರದೇಶ ಪ್ರವೇಶ ನಿರ್ಬಂಧಿಸಿದೆ. ಹೀಗಾಗಿ ಐಎಎಫ್ ವಿಮಾನ ಬೇರೊಂದು ಮಾರ್ಗದಲ್ಲಿ ಟರ್ಕಿ ತಲುಪಿತು.

ಎರಡು ವಿಮಾನ ರವಾನೆ
ಟರ್ಕಿಯಲ್ಲಿ ರಕ್ಷಣ ಕಾರ್ಯಾಚರಣೆಗಾಗಿ ಭಾರತದಿಂದ ನಾಲ್ಕು ಯುದ್ಧ ವಿಮಾನಗಳಲ್ಲಿ  ಪರಿಹಾರ ಸಾಮಗ್ರಿಗಳು, ಶ್ವಾನಗಳ ಜತೆಗೆ ಎನ್‌ಡಿಆರ್‌ಎಫ್ ಸಿಬಂದಿ ತೆರಳಿ ಕೆಲಸ ಆರಂಭಿಸಿದ್ದಾರೆ. ಐಎಎಫ್ನ ಸಿ-17 ಸಾರಿಗೆ ವಿಮಾನವು ಶೋಧ ಮತ್ತು ಪರಿಹಾರ ಸಿಬಂದಿ, ವಿಶೇಷವಾಗಿ ತರಬೇತಿ ಪಡೆದಿರುವ ಶ್ವಾನಗಳ ತಂಡ, ಡ್ರಿಲ್ಲಿಂಗ್‌ ಯಂತ್ರ, ಪರಿಹಾರ ಸಾಮಗ್ರಿ, ಔಷಧಗಳನ್ನು ಹೊತ್ತೂಯ್ದಿದೆ.

ಇನ್ನೊಂದು ಐಎಎಫ್- ಎಂಸಿಸಿ ಸಿ-17 ಯುದ್ಧ ವಿಮಾನವು ಸೇನಾ ವೈದ್ಯಕೀಯ ಸಿಬಂದಿಯ ಜತೆಗೆ ಇತರ ಪರಿಹಾರ ಕಾರ್ಯಾಚರಣೆ ವಸ್ತುಗಳೊಂದಿಗೆ ತೆರಳಿದೆ ಎಂದು ವಿದೇಶಾಂಗ ಸಚಿವ ಜೈಶಂಕರ್‌ ಹೇಳಿದ್ದಾರೆ. ಭಾರತದಿಂದ ಒಟ್ಟು  99 ಮಂದಿಯ ತಂಡ ಕಾರ್ಯಾಚರಣೆಯಲ್ಲಿ  ಭಾಗಿಯಾಗಲಿದೆ.

ಸಹಾಯವಾಣಿ ಸ್ಥಾಪಿಸಿದ ಕರ್ನಾಟಕ
ಟರ್ಕಿಯಲ್ಲಿರುವ ಕನ್ನಡಿಗರ ನೆರವಿಗಾಗಿ ಕರ್ನಾಟಕ ಸರಕಾರ ಸಹಾಯವಾಣಿ ಸ್ಥಾಪಿಸಿದೆ. ಟರ್ಕಿಯಲ್ಲಿರುವವರ ಕುರಿತಂತೆ ಯಾವುದಾದರೂ ಮಾಹಿತಿ ಇದ್ದರೆ ಈ ಸಂಖ್ಯೆಗೆ ಕರೆ ಮಾಡಿ ಮಾಹಿತಿ ನೀಡುವಂತೆ ಕೋರಿಕೊಂಡಿದೆ.
0801070,08022340676

ಟಾಪ್ ನ್ಯೂಸ್

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.